<p><strong>ಮಂಡ್ಯ</strong>: ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ಕಾನೂನು ಬಾಹಿರವಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪರಿಸರಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.</p>.<p>ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣಪತಿ ಹಬ್ಬ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.</p>.<p>ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪಿ.ಒ.ಪಿ. ಗಣಪತಿ ಮೂರ್ತಿ ಸಾಗಣೆ ತಡೆಗಟ್ಟಲು ಅಧಿಕಾರಿಗಳು ಚೆಕ್ ಪೋಸ್ಟ್ ಬಳಿ ಹಾಗೂ ಮಾರಾಟ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.</p>.<p>ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಆಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ, ಪುರಸಭೆಯ ಕಸ ಸಂಗ್ರಹಣಾ ವಾಹನಕ್ಕೆ ನೀಡಿ ಎಂದರು.</p>.<p>ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ ಎಂದರು.</p>.<p>ಸಭೆಯಲ್ಲಿ ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಗೀತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಟಿ.ಎನ್. ಸಿಂಹಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಎಸ್.ಎಚ್, ನಗರಸಭೆ ಪೌರಾಯುಕ್ತೆ ಪಂಪಾಶ್ರೀ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><blockquote>ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವವರು ಅನುಮತಿ ಪಡೆಯುವುದು ಕಡ್ಡಾಯ. ಇದಕ್ಕಾಗಿ ಏಕ ಗವಾಕ್ಷಿ ಕೇಂದ್ರ ತೆರೆಯಲಾಗುವುದು </blockquote><span class="attribution">ಕುಮಾರ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಜಲಮೂಲಗಳಲ್ಲಿ ವಿಸರ್ಜನೆ ಮಾಡುವುದು ಕಾನೂನು ಬಾಹಿರವಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಪರಿಸರಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.</p>.<p>ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣಪತಿ ಹಬ್ಬ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.</p>.<p>ಸ್ವರ್ಣಗೌರಿ ಹಾಗೂ ವರಸಿದ್ಧಿ ವಿನಾಯಕ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಪಿ.ಒ.ಪಿ. ಗಣಪತಿ ಮೂರ್ತಿ ಸಾಗಣೆ ತಡೆಗಟ್ಟಲು ಅಧಿಕಾರಿಗಳು ಚೆಕ್ ಪೋಸ್ಟ್ ಬಳಿ ಹಾಗೂ ಮಾರಾಟ ಮಳಿಗೆಗಳಲ್ಲಿ ಪರಿಶೀಲನೆ ನಡೆಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.</p>.<p>ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿ ಕಸ (ಹೂವು, ಹಣ್ಣು, ಬಾಳೆ ಕಂಬ, ಮಾವಿನ ತೋರಣ ಇತ್ಯಾದಿ ಆಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೇ ನಗರಸಭೆ, ಪುರಸಭೆಯ ಕಸ ಸಂಗ್ರಹಣಾ ವಾಹನಕ್ಕೆ ನೀಡಿ ಎಂದರು.</p>.<p>ಸಾರ್ವಜನಿಕವಾಗಿ ನಡೆಸುವ ಗಣೇಶ ಮೂರ್ತಿಯ ಉತ್ಸವದ ಚಪ್ಪರಕ್ಕೆ ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮಾಡಬೇಡಿ ಎಂದರು.</p>.<p>ಸಭೆಯಲ್ಲಿ ಜಿಲ್ಲಾ ಪರಿಸರ ಮಾಲಿನ್ಯ ನಿಯಂತ್ರಣಾಧಿಕಾರಿ ಗೀತಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಟಿ.ಎನ್. ಸಿಂಹಮೂರ್ತಿ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಸಹಾಯಕ ನಿರ್ದೇಶಕಿ ನಿರ್ಮಲಾ ಎಸ್.ಎಚ್, ನಗರಸಭೆ ಪೌರಾಯುಕ್ತೆ ಪಂಪಾಶ್ರೀ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><blockquote>ಸಾರ್ವಜನಿಕ ಸ್ಥಳಗಳಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡುವವರು ಅನುಮತಿ ಪಡೆಯುವುದು ಕಡ್ಡಾಯ. ಇದಕ್ಕಾಗಿ ಏಕ ಗವಾಕ್ಷಿ ಕೇಂದ್ರ ತೆರೆಯಲಾಗುವುದು </blockquote><span class="attribution">ಕುಮಾರ ಜಿಲ್ಲಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>