<p>ಮಂಡ್ಯ: ‘ಪುಸ್ತಕ ಸಹವಾಸ ಮಾಡಿದವನು ಸಮಾಜದಲ್ಲಿ ಅತ್ಯಂತ ಸಂತಸವಾಗಿರುತ್ತಾನೆ’ ಎಂದು ಡಯಟ್ ನಿವೃತ್ತ ಉಪನ್ಯಾಸಕ ಜಿ.ಸಿ. ಜಯಶಂಕರ್ ಸಲಹೆ ನೀಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಜಿಲ್ಲಾ ಜಾಗೃತ ಸಮಿತಿ ಸಹಯೋಗದಲ್ಲಿ ತಾಲ್ಲೂಕಿನ ಗೊರವಾಲೆ ಗ್ರಾಮದ ಉಪನ್ಯಾಸಕ ಮಧುಸೂದನ್ ನರಸಿಂಹೇಗೌಡ ಅವರ ಮನೆಯಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ 'ಮನೆಗೊಂದು ಗ್ರಂಥಾಲಯ ಅನುಷ್ಠಾನ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮನೆಗೊಂದು ಮರ ಊರಿಗೊಂದು ವನ ರೀತಿಯಲ್ಲಿ ಗ್ರಂಥಾಲಯ ಇರಬೇಕು. ಮರಗಳಿಂದ ಪರಿಸರ ಉಳಿದರೆ, ಗ್ರಂಥಾಲಯಗಳಿಂದ ಜನರು ಬುದ್ಧಿವಂತರಾಗುತ್ತಾರೆ, ಪ್ರತಿಯೊಬ್ಬರಿಗೂ ಪುಸ್ತಕವೆಂಬುದು ಆಪದ್ಬಾಂಧವನಂತೆ ಕೆಲಸ ಮಾಡುವ ಮೂಲಕ ಜ್ಞಾನಾರ್ಜನೆ ಹೆಚ್ಚಿಸುತ್ತದೆ ಎಂದು ತಿಳಿಸಿದರು.</p>.<p>ಜಿಲ್ಲಾ ಜಾಗೃತ ಸಮಿತಿ ಸದಸ್ಯರಾದ ಕೆಂಪಮ್ಮ, ಕಾರಸವಾಡಿ ಮಹದೇವ, ಕರ್ನಾಟಕ ಜಾನಪದ ವಿವಿ ಸಿಂಡಿಕೇಟ್ ಸದಸ್ಯ ಗೊರವಾಲೆ ಚಂದ್ರಶೇಖರ್ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ರಾಮಕೃಷ್ಣ, ಜಿಲ್ಲಾ ಜಾಗೃತ ಸಮಿತಿ ಸದಸ್ಯರಾದ ಚಂದ್ರಶೇಖರ ದ.ಕೋ.ಹಳ್ಳಿ, ಎಂ.ಮಂಚಶೆಟ್ಟಿ, ಉಮೇಶ ದಡಮಹಳ್ಳಿ, ಸದ್ದಾಂ ತಗ್ಗಹಳ್ಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-40-1421688521</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಪುಸ್ತಕ ಸಹವಾಸ ಮಾಡಿದವನು ಸಮಾಜದಲ್ಲಿ ಅತ್ಯಂತ ಸಂತಸವಾಗಿರುತ್ತಾನೆ’ ಎಂದು ಡಯಟ್ ನಿವೃತ್ತ ಉಪನ್ಯಾಸಕ ಜಿ.ಸಿ. ಜಯಶಂಕರ್ ಸಲಹೆ ನೀಡಿದರು.</p>.<p>ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಜಿಲ್ಲಾ ಜಾಗೃತ ಸಮಿತಿ ಸಹಯೋಗದಲ್ಲಿ ತಾಲ್ಲೂಕಿನ ಗೊರವಾಲೆ ಗ್ರಾಮದ ಉಪನ್ಯಾಸಕ ಮಧುಸೂದನ್ ನರಸಿಂಹೇಗೌಡ ಅವರ ಮನೆಯಲ್ಲಿ ಸೋಮವಾರ ಸಂಜೆ ಆಯೋಜಿಸಿದ್ದ 'ಮನೆಗೊಂದು ಗ್ರಂಥಾಲಯ ಅನುಷ್ಠಾನ' ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಮನೆಗೊಂದು ಮರ ಊರಿಗೊಂದು ವನ ರೀತಿಯಲ್ಲಿ ಗ್ರಂಥಾಲಯ ಇರಬೇಕು. ಮರಗಳಿಂದ ಪರಿಸರ ಉಳಿದರೆ, ಗ್ರಂಥಾಲಯಗಳಿಂದ ಜನರು ಬುದ್ಧಿವಂತರಾಗುತ್ತಾರೆ, ಪ್ರತಿಯೊಬ್ಬರಿಗೂ ಪುಸ್ತಕವೆಂಬುದು ಆಪದ್ಬಾಂಧವನಂತೆ ಕೆಲಸ ಮಾಡುವ ಮೂಲಕ ಜ್ಞಾನಾರ್ಜನೆ ಹೆಚ್ಚಿಸುತ್ತದೆ ಎಂದು ತಿಳಿಸಿದರು.</p>.<p>ಜಿಲ್ಲಾ ಜಾಗೃತ ಸಮಿತಿ ಸದಸ್ಯರಾದ ಕೆಂಪಮ್ಮ, ಕಾರಸವಾಡಿ ಮಹದೇವ, ಕರ್ನಾಟಕ ಜಾನಪದ ವಿವಿ ಸಿಂಡಿಕೇಟ್ ಸದಸ್ಯ ಗೊರವಾಲೆ ಚಂದ್ರಶೇಖರ್ ಮಾತನಾಡಿದರು.</p>.<p>ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ರಾಮಕೃಷ್ಣ, ಜಿಲ್ಲಾ ಜಾಗೃತ ಸಮಿತಿ ಸದಸ್ಯರಾದ ಚಂದ್ರಶೇಖರ ದ.ಕೋ.ಹಳ್ಳಿ, ಎಂ.ಮಂಚಶೆಟ್ಟಿ, ಉಮೇಶ ದಡಮಹಳ್ಳಿ, ಸದ್ದಾಂ ತಗ್ಗಹಳ್ಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-40-1421688521</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>