<p><strong>ಮಂಡ್ಯ:</strong> ಪರಿಸರ ಬೆಳೆಸಿ ಉಳಿಸಲು ಮನೆಗೊಂದು ಸಸಿ ನೆಟ್ಟು ಪೋಷಣೆ ಮಾಡುವುದು ಮುಖ್ಯವಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಸಲಹೆ ನೀಡಿದರು.</p>.<p>ನಗರದ ಶಿವನಂಜಪ್ಪ ಉದ್ಯಾನವನದಲ್ಲಿ ಚಿತ್ರಕೂಟ, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ, ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್, ಜಿವಿಕೆ ಕಗ್ಗ ಬಳಗ, ಪರಿಚಯ ಪ್ರಕಾಶನ, ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಮಂಗಳವಾರ ಕೆಟಿಎಸ್ 72 ಅಂಗವಾಗಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಉದ್ಯಾನಕ್ಕೆ ದೇವರ ಕಾಡು ಎಂದು ಹೆಸರಿಟ್ಟು ಮರ ಗಿಡಗಳನ್ನು ಬೆಳೆಸುತ್ತಿದ್ದು, ಈಗ ಹೊಸದಾಗಿ ಗುಜರಾತ್ನಿಂದ ತಂದಿರುವ ಒಂಭತ್ತು ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡಲು ಹೊರಟ ನಡೆ ಪ್ರಶಂಸನೀಯ ಎಂದು ಶ್ಲಾಘಿಸಿದರು.</p>.<p>ನನ್ನ ಜನ್ಮದಿನ ಅಂಗವಾಗಿ ಪೌರಕಾರ್ಮಿಕರು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುತ್ತಿದೆ. ರವೀಂದ್ರ ಸಂಗೀತೋತ್ಸವ ಎಂಬ ಕಾರ್ಯಕ್ರಮದ ಮೂಲಕ ಕಲಾವಿದರು ಸಂಗೀತ ಪ್ರಸ್ತುತ ಪಡಿಸುತ್ತಿದ್ದಾರೆ. ಕಿಮ್ಸ್ ಆಸ್ಪತ್ರೆ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಗಿದೆ. ಇವೆಲ್ಲವನ್ನೂ ನೋಡಿದರೆ ಸಂತಸ ಆಗುತ್ತಿದೆ ಎಂದರು.</p>.<p>ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಹನುಮಂತು ಡಾ.ಶ್ರದ್ಧಾ, ಡಾ.ಸಂಜನಾ, ಡಾ.ವೃಶಾಲಿ, ಮುಖಂಡರಾದ ಉಮೇಶ್, ಸ್ವಾಮಿ, ಮಹೇಶ್, ಅಭಿಜಿತ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-40-383784401</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಪರಿಸರ ಬೆಳೆಸಿ ಉಳಿಸಲು ಮನೆಗೊಂದು ಸಸಿ ನೆಟ್ಟು ಪೋಷಣೆ ಮಾಡುವುದು ಮುಖ್ಯವಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಸಲಹೆ ನೀಡಿದರು.</p>.<p>ನಗರದ ಶಿವನಂಜಪ್ಪ ಉದ್ಯಾನವನದಲ್ಲಿ ಚಿತ್ರಕೂಟ, ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ, ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್, ಜಿವಿಕೆ ಕಗ್ಗ ಬಳಗ, ಪರಿಚಯ ಪ್ರಕಾಶನ, ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ಮಂಗಳವಾರ ಕೆಟಿಎಸ್ 72 ಅಂಗವಾಗಿ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಉದ್ಯಾನಕ್ಕೆ ದೇವರ ಕಾಡು ಎಂದು ಹೆಸರಿಟ್ಟು ಮರ ಗಿಡಗಳನ್ನು ಬೆಳೆಸುತ್ತಿದ್ದು, ಈಗ ಹೊಸದಾಗಿ ಗುಜರಾತ್ನಿಂದ ತಂದಿರುವ ಒಂಭತ್ತು ವಿವಿಧ ಜಾತಿಯ ಸಸಿಗಳನ್ನು ನೆಟ್ಟು ಪರಿಸರ ಸಂರಕ್ಷಣೆ ಮಾಡಲು ಹೊರಟ ನಡೆ ಪ್ರಶಂಸನೀಯ ಎಂದು ಶ್ಲಾಘಿಸಿದರು.</p>.<p>ನನ್ನ ಜನ್ಮದಿನ ಅಂಗವಾಗಿ ಪೌರಕಾರ್ಮಿಕರು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಗುತ್ತಿದೆ. ರವೀಂದ್ರ ಸಂಗೀತೋತ್ಸವ ಎಂಬ ಕಾರ್ಯಕ್ರಮದ ಮೂಲಕ ಕಲಾವಿದರು ಸಂಗೀತ ಪ್ರಸ್ತುತ ಪಡಿಸುತ್ತಿದ್ದಾರೆ. ಕಿಮ್ಸ್ ಆಸ್ಪತ್ರೆ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಸಲಾಗಿದೆ. ಇವೆಲ್ಲವನ್ನೂ ನೋಡಿದರೆ ಸಂತಸ ಆಗುತ್ತಿದೆ ಎಂದರು.</p>.<p>ನಂಜಮ್ಮ ಮೋಟೆಗೌಡ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೆ.ಟಿ.ಹನುಮಂತು ಡಾ.ಶ್ರದ್ಧಾ, ಡಾ.ಸಂಜನಾ, ಡಾ.ವೃಶಾಲಿ, ಮುಖಂಡರಾದ ಉಮೇಶ್, ಸ್ವಾಮಿ, ಮಹೇಶ್, ಅಭಿಜಿತ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260513-40-383784401</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>