<p><strong>ಮದ್ದೂರು</strong>: ಪಟ್ಟಣದ ಗ್ರಾಮದೇವತೆ ಮದ್ದೂರಮ್ಮನವರ ಜಾತ್ರಮಹೋತ್ಸವದ ಅಂಗವಾಗಿ ಗುರುವಾರ ನಡೆದ ಸಿಡಿ ಉತ್ಸವವು ಅಪಾರ ಭಕ್ತರ ಜಯಘೋಷಗಳ ನಡುವೆ ನೆರವೇರಿತು.</p>.<p>ಸಂಜೆ 4 ಗಂಟೆಗೆ ಮಠ ಮನೆಯಿಂದ ಭಕ್ತರು ಬಾಯಿ ಬೀಗ ಸಮೇತ ಹೊರಟ ನಂತರ ಸಿಡಿರಣ್ಣನವರ ಸಿಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಮಕ್ಕಳಾಗಲೆಂದು ಹರಕೆ ಹೊತ್ತವರು ತಮ್ಮ ಚಿಕ್ಕ ಮಕ್ಕಳನ್ನು ಸಿಡಿರಣ್ಣನ ಜೊತೆಯಲ್ಲಿ ಸಿಡಿ ಆಡಿಸಿ ಹರಕೆ ತೀರಿಸಿದರು. ಈ ವೇಳೆ ಸಿಡಿರಣ್ಣನಿಗೆ ಹಣ್ಣು ಜವನ ಎಸೆದು ಸಂಭ್ರಮಿಸಿದರು.</p>.<p>ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಡುವೆ ಪಟ್ಟಣದ ಮಠ ಮನೆಯಿಂದ ಸಿಡಿರಣ್ಣನ ಮೆರವಣಿಗೆ ನಡೆಯಿತು. ಈ ವೇಳೆ ಹೆದ್ದಾರಿಯಲ್ಲಿ ಜನರು ಹಾಗೂ ವಾಹನ ಸಂಚಾರ ಹೆಚ್ಚಿತ್ತು, ಟ್ರಾಫಿಕ್ ನಿಯಂತ್ರಿಸಲು ಸಂಚಾರ ಪೊಲೀಸ ಹರಸಾಹಸ ಪಟ್ಟರು.</p>.<p>ಮೇ 3ರಂದು ಓಕಳಿ ಸೇವೆ ಸಂಜೆ 4 ಗಂಟೆಗೆ ನಡೆಯಲಿದೆ. ಸಂಜೆ 6.30 ಗಂಟೆಗೆ ಉಯ್ಯಾಲೆ ಉತ್ಸವ, ರಾತ್ರಿ 9 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಮುತ್ತಿನ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ.</p>.<p>ಮೇ 4ರಂದು ಶನಿವಾರ ಸಂಜೆ 4 ಗಂಟೆಗೆ ಶ್ರೀ ಮದ್ದೂರಮ್ಮನವರಿಗೆ ಎಣ್ಣೆ ಮಜ್ಜನ ಸೇವೆ ನಡೆಯಲಿದೆ. ಪುಷ್ಪಾಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ರಾತ್ರಿ 9 ಗಂಟೆಗೆ ಮೂಲ ದೇವಸ್ಥಾನದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣೆಯೊಂದಿಗೆ ಮಠ ಮನೆ ತಲುಪುವ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ಪಟ್ಟಣದ ಗ್ರಾಮದೇವತೆ ಮದ್ದೂರಮ್ಮನವರ ಜಾತ್ರಮಹೋತ್ಸವದ ಅಂಗವಾಗಿ ಗುರುವಾರ ನಡೆದ ಸಿಡಿ ಉತ್ಸವವು ಅಪಾರ ಭಕ್ತರ ಜಯಘೋಷಗಳ ನಡುವೆ ನೆರವೇರಿತು.</p>.<p>ಸಂಜೆ 4 ಗಂಟೆಗೆ ಮಠ ಮನೆಯಿಂದ ಭಕ್ತರು ಬಾಯಿ ಬೀಗ ಸಮೇತ ಹೊರಟ ನಂತರ ಸಿಡಿರಣ್ಣನವರ ಸಿಡಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಮಕ್ಕಳಾಗಲೆಂದು ಹರಕೆ ಹೊತ್ತವರು ತಮ್ಮ ಚಿಕ್ಕ ಮಕ್ಕಳನ್ನು ಸಿಡಿರಣ್ಣನ ಜೊತೆಯಲ್ಲಿ ಸಿಡಿ ಆಡಿಸಿ ಹರಕೆ ತೀರಿಸಿದರು. ಈ ವೇಳೆ ಸಿಡಿರಣ್ಣನಿಗೆ ಹಣ್ಣು ಜವನ ಎಸೆದು ಸಂಭ್ರಮಿಸಿದರು.</p>.<p>ಬೆಂಗಳೂರು– ಮೈಸೂರು ರಾಷ್ಟ್ರೀಯ ಹೆದ್ದಾರಿಯ ನಡುವೆ ಪಟ್ಟಣದ ಮಠ ಮನೆಯಿಂದ ಸಿಡಿರಣ್ಣನ ಮೆರವಣಿಗೆ ನಡೆಯಿತು. ಈ ವೇಳೆ ಹೆದ್ದಾರಿಯಲ್ಲಿ ಜನರು ಹಾಗೂ ವಾಹನ ಸಂಚಾರ ಹೆಚ್ಚಿತ್ತು, ಟ್ರಾಫಿಕ್ ನಿಯಂತ್ರಿಸಲು ಸಂಚಾರ ಪೊಲೀಸ ಹರಸಾಹಸ ಪಟ್ಟರು.</p>.<p>ಮೇ 3ರಂದು ಓಕಳಿ ಸೇವೆ ಸಂಜೆ 4 ಗಂಟೆಗೆ ನಡೆಯಲಿದೆ. ಸಂಜೆ 6.30 ಗಂಟೆಗೆ ಉಯ್ಯಾಲೆ ಉತ್ಸವ, ರಾತ್ರಿ 9 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಮುತ್ತಿನ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ.</p>.<p>ಮೇ 4ರಂದು ಶನಿವಾರ ಸಂಜೆ 4 ಗಂಟೆಗೆ ಶ್ರೀ ಮದ್ದೂರಮ್ಮನವರಿಗೆ ಎಣ್ಣೆ ಮಜ್ಜನ ಸೇವೆ ನಡೆಯಲಿದೆ. ಪುಷ್ಪಾಲಂಕಾರ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ. ರಾತ್ರಿ 9 ಗಂಟೆಗೆ ಮೂಲ ದೇವಸ್ಥಾನದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣೆಯೊಂದಿಗೆ ಮಠ ಮನೆ ತಲುಪುವ ಮೂಲಕ ಜಾತ್ರಾ ಮಹೋತ್ಸವಕ್ಕೆ ತೆರೆ ಬೀಳಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>