ಪಿ.ಡಿ.ತಿಮ್ಮಪ್ಪ ಪ್ರಾಸ್ತಾವಿಕ ಮಾತನಾಡಿದರು. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಲಿಂಗೇಗೌಡ ಸೋಂಪುರ, ಜನ ಚೇತನ ಟ್ರಸ್ಟ್ ಅಧ್ಯಕ್ಷ ಎ.ಎನ್. ಪ್ರಸನ್ನಗೌಡ, ತಾ.ಪಂ. ಸದಸ್ಯೆ ಸರಸ್ವತಿ ರಮೇಶ್ಬಾಬು, ರಾಯಪ್ಪ, ಅನಿಲ್ಕುಮಾರ್, ಸುಂಡಹಳ್ಳಿ ಮಂಜುನಾಥ್ ಇದ್ದರು. ಹುರುಗಲವಾಡಿ ರಾಮಯ್ಯ ಜಾಗೃತಿ ಗೀತೆಗಳನ್ನು ಹಾಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನವೀನ್ ಚಿಕ್ಕಮಂಡ್ಯ ಅವರನ್ನು ಅಭಿನಂದಿಸಲಾಯಿತು.