<p><strong>ಭಾರತೀನಗರ (ಮಂಡ್ಯ ಜಿಲ್ಲೆ):</strong> ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಇಲ್ಲಿಯ ಮದ್ದೂರು-ಮಳವಳ್ಳಿ ಮುಖ್ಯ ಹೆದ್ದಾರಿಯ ಹಲಗೂರು ವೃತ್ತದಲ್ಲಿ ಜಮಾಯಿಸಿ ರಸ್ತೆ ತಡೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು.</p>.<p>ರೈತಸಂಘದ ಜಿಲ್ಲಾ ಮುಖಂಡ ಬೋರಾಪುರ ಶಂಕರೇಗೌಡ ಮಾತನಾಡಿ, ‘ಅಣೆಕಟ್ಟೆ ತುಂಬಿದರೂ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು ಬಿಡುತ್ತಿಲ್ಲ. ಭತ್ತದ ಸಸಿ ಮಡಿಗಳನ್ನು ತಯಾರಿಸಲು ಇದು ಸಕಾಲವಾಗಿದ್ದು, ನೀರಿನ ಕೊರತೆಯಿಂದ ಬೇಸಾಯ ಮಾಡಲು ತೊಂದರೆಯುಂಟಾಗುತ್ತಿದೆ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.</p>.<p>‘ನಾಲೆಗಳ ಆಧುನೀಕರಣದ ಕೆಲಸವನ್ನು ಯಾವಾಗ ಮಾಡಬೇಕೆಂಬ ಕನಿಷ್ಠ ಜ್ಞಾನ ಕೂಡ ನೀರಾವರಿ ಇಲಾಖೆಗೆ ಹಾಗೂ ಸರ್ಕಾರಕ್ಕೆ ಇಲ್ಲ. ನಾಲೆಗಳಿಗೆ ನೀರು ಬಿಡದಿದ್ದರೆ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಪ್ರತಿಭಟಿಸಬೇಕಾಗುತ್ತದೆ’ ಎಂದರು.</p>.<p>ರೈತಸಂಘದ ಜಿಲ್ಲಾಕಾರ್ಯದರ್ಶಿ ಲಿಂಗಪ್ಪಾಜಿ ಮಾತನಾಡಿ, ‘ನಾಲೆಗೆ ನೀರು ಬಿಡದಿದ್ದರೆ ನೀರಾವರಿ ಇಲಾಖೆ ಅಧಿಕಾರಿಗಳನ್ನು ಎಲ್ಲೆಂದರಲ್ಲಿ ಅಡ್ಡಗಟ್ಟಿ, ಕಂಬಕ್ಕೆ ಕಟ್ಟಿ ಹಾಕಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ (ಮಂಡ್ಯ ಜಿಲ್ಲೆ):</strong> ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಇಲ್ಲಿಯ ಮದ್ದೂರು-ಮಳವಳ್ಳಿ ಮುಖ್ಯ ಹೆದ್ದಾರಿಯ ಹಲಗೂರು ವೃತ್ತದಲ್ಲಿ ಜಮಾಯಿಸಿ ರಸ್ತೆ ತಡೆ ನಡೆಸಿದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆಗಳನ್ನು ಕೂಗಿದರು.</p>.<p>ರೈತಸಂಘದ ಜಿಲ್ಲಾ ಮುಖಂಡ ಬೋರಾಪುರ ಶಂಕರೇಗೌಡ ಮಾತನಾಡಿ, ‘ಅಣೆಕಟ್ಟೆ ತುಂಬಿದರೂ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು ಬಿಡುತ್ತಿಲ್ಲ. ಭತ್ತದ ಸಸಿ ಮಡಿಗಳನ್ನು ತಯಾರಿಸಲು ಇದು ಸಕಾಲವಾಗಿದ್ದು, ನೀರಿನ ಕೊರತೆಯಿಂದ ಬೇಸಾಯ ಮಾಡಲು ತೊಂದರೆಯುಂಟಾಗುತ್ತಿದೆ’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.</p>.<p>‘ನಾಲೆಗಳ ಆಧುನೀಕರಣದ ಕೆಲಸವನ್ನು ಯಾವಾಗ ಮಾಡಬೇಕೆಂಬ ಕನಿಷ್ಠ ಜ್ಞಾನ ಕೂಡ ನೀರಾವರಿ ಇಲಾಖೆಗೆ ಹಾಗೂ ಸರ್ಕಾರಕ್ಕೆ ಇಲ್ಲ. ನಾಲೆಗಳಿಗೆ ನೀರು ಬಿಡದಿದ್ದರೆ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ಪ್ರತಿಭಟಿಸಬೇಕಾಗುತ್ತದೆ’ ಎಂದರು.</p>.<p>ರೈತಸಂಘದ ಜಿಲ್ಲಾಕಾರ್ಯದರ್ಶಿ ಲಿಂಗಪ್ಪಾಜಿ ಮಾತನಾಡಿ, ‘ನಾಲೆಗೆ ನೀರು ಬಿಡದಿದ್ದರೆ ನೀರಾವರಿ ಇಲಾಖೆ ಅಧಿಕಾರಿಗಳನ್ನು ಎಲ್ಲೆಂದರಲ್ಲಿ ಅಡ್ಡಗಟ್ಟಿ, ಕಂಬಕ್ಕೆ ಕಟ್ಟಿ ಹಾಕಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>