<p>ಭಾರತೀನಗರ: ರೈತರಿಗೆ ಚಾಂಷುಗರ್ ಕಾರ್ಖಾನೆ ಪ್ರತಿ ಟನ್ ಕಬ್ಬಿಗೆ ನೀಡಬೇಕಾಗಿರುವ ಬಾಕಿ ಹಣ ₹50 ಅನ್ನು ಶೀಘ್ರವೇ ಬಟವಾಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತಸಂಘದ ವಿಭಾಗೀಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ಆಗ್ರಹಿಸಿದ್ದಾರೆ.</p>.<p>2025 -26ನೇ ಸಾಲಿನಲ್ಲಿ ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆಗಳು ಅರೆದಿರುವ ಕಬ್ಬಿಗೆ ಕಬ್ಬು ಸರಬರಾಜು ಮಾಡಿರುವ ರೈತರಿಗೆ ₹50 ಬಾಕಿ ಹಣವನ್ನು ಸೇರಿಸಿ ಪಾವತಿ ಮಾಡುವಂತೆ ರಾಜ್ಯಸರ್ಕಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರದಿಂದ ನೀಡಬೇಕಿರುವ ₹50ನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಕಾರ್ಖಾನೆಗಳು ಪ್ರತೀ ಟನ್ ಕಬ್ಬಿಗೆ ಶೀಘ್ರವೇ ₹50 ನ್ನು ಬಿಡುಗಡೆ ಮಾಡಬೇಕೆಂದು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.</p>.<p>ಮುಂಬರುವ 2026-27ನೇ ಸಾಲಿನಲ್ಲಿ ಅರೆಯುವ ಕಬ್ಬಿನ ಬೆಲೆಗೆ ಇದುವರೆವಿಗೂ ಸಕ್ಕರೆ ಕಾರ್ಖಾನೆಗಳು ಬೆಲೆ ನಿಗದಿ ಮಾಡಿಲ್ಲ. ಇದರಿಂದ ರೈತರಿಗೆ ದ್ರೋಹವೆಸಗಲು ಕಾರ್ಖಾನೆಗಳು ಹವಣಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಅವರು ಆರೋಪಿಸಿದರು.</p>.<p>ಒಂದು ವೇಳೆ ಬೆಲೆ ನಿಗದಿಗೊಳಿಸದೆ ಅಥವಾ ಬಾಕಿ ಹಣ ಬಟವಾಡೆ ಮಾಡದೆ ಕಾರ್ಖಾನೆ ಆರಂಭಿಸಿದರೆ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-40-1667389245</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಭಾರತೀನಗರ: ರೈತರಿಗೆ ಚಾಂಷುಗರ್ ಕಾರ್ಖಾನೆ ಪ್ರತಿ ಟನ್ ಕಬ್ಬಿಗೆ ನೀಡಬೇಕಾಗಿರುವ ಬಾಕಿ ಹಣ ₹50 ಅನ್ನು ಶೀಘ್ರವೇ ಬಟವಾಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತಸಂಘದ ವಿಭಾಗೀಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ ಆಗ್ರಹಿಸಿದ್ದಾರೆ.</p>.<p>2025 -26ನೇ ಸಾಲಿನಲ್ಲಿ ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆಗಳು ಅರೆದಿರುವ ಕಬ್ಬಿಗೆ ಕಬ್ಬು ಸರಬರಾಜು ಮಾಡಿರುವ ರೈತರಿಗೆ ₹50 ಬಾಕಿ ಹಣವನ್ನು ಸೇರಿಸಿ ಪಾವತಿ ಮಾಡುವಂತೆ ರಾಜ್ಯಸರ್ಕಾರ ಘೋಷಣೆ ಮಾಡಿದೆ. ರಾಜ್ಯ ಸರ್ಕಾರದಿಂದ ನೀಡಬೇಕಿರುವ ₹50ನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಕಾರ್ಖಾನೆಗಳು ಪ್ರತೀ ಟನ್ ಕಬ್ಬಿಗೆ ಶೀಘ್ರವೇ ₹50 ನ್ನು ಬಿಡುಗಡೆ ಮಾಡಬೇಕೆಂದು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.</p>.<p>ಮುಂಬರುವ 2026-27ನೇ ಸಾಲಿನಲ್ಲಿ ಅರೆಯುವ ಕಬ್ಬಿನ ಬೆಲೆಗೆ ಇದುವರೆವಿಗೂ ಸಕ್ಕರೆ ಕಾರ್ಖಾನೆಗಳು ಬೆಲೆ ನಿಗದಿ ಮಾಡಿಲ್ಲ. ಇದರಿಂದ ರೈತರಿಗೆ ದ್ರೋಹವೆಸಗಲು ಕಾರ್ಖಾನೆಗಳು ಹವಣಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಅವರು ಆರೋಪಿಸಿದರು.</p>.<p>ಒಂದು ವೇಳೆ ಬೆಲೆ ನಿಗದಿಗೊಳಿಸದೆ ಅಥವಾ ಬಾಕಿ ಹಣ ಬಟವಾಡೆ ಮಾಡದೆ ಕಾರ್ಖಾನೆ ಆರಂಭಿಸಿದರೆ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-40-1667389245</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>