<p>ಮಂಡ್ಯ: ‘ಕೃಷಿ ಪಂಪ್ಸೆಟ್ಗಳಿಗೆ ಹಗಲು ವೇಳೆ 7 ಗಂಟೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬೇಕು. ಈ ಹಿಂದೆ ಇದ್ದಂತೆಯೇ ಕೃಷಿ ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳ ಅಕ್ರಮ-ಸಕ್ರಮಕ್ಕೆ ರೈತರ ಪಾಲನ್ನು ಪಡೆದು ಉಳಿದ ಎಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತರು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಬೆಳೆದು ನಿಂತಿರುವ ಬೆಳೆಗಳ ರಕ್ಷಣೆ ಮತ್ತು ಜನ- ಜಾನುವಾರುಗಳ ಕುಡಿಯುವ ನೀರಿಗಾಗಿ ಕೆ.ಆರ್.ಎಸ್. ಹೇಮಾವತಿ ಅಣೆಕಟ್ಟೆಗಳ ಮೂಲಕ ನಾಲೆಗಳಿಗೆ ಕನಿಷ್ಠ ಎರಡು ಕಟ್ಟು ನೀರು ಹರಿಸಬೇಕು. ಆ ಮೂಲಕ ರೈತರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.</p>.<p>‘ಪ್ರಕೃತಿ ವಿಕೋಪದಿಂದ ಬೆಳೆ ಹಾಗೂ ಮನೆಗಳಿಗೆ ಹಾನಿಯಾಗಿರುವ ಸಂಬಂಧ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಭತ್ತ ಕಟಾವು ಯಂತ್ರಗಳಿಗೆ ಜಿಲ್ಲೆಯಾದ್ಯಂತ ಏಕ ರೀತಿಯ (ಪ್ರತಿ ಗಂಟೆಗೆ ₹2200) ಬಾಡಿಗೆ ದರ ನಿಗದಿಪಡಿಸಬೇಕು. ಈ ಸಂಬಂಧ ಯಂತ್ರಗಳ ಮಾಲೀಕರು ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಬ್ಯಾಂಕುಗಳು ಮತ್ತು ಮತ್ತು ಮೈಕ್ರೊ ಫೈನಾನ್ಸ್ ಹಾವಳಿ ತಡೆಗಾಗಿ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು. ಕೆ.ಆರ್. ಪೇಟೆಯಲ್ಲಿ ವಿದ್ಯುತ್ ಕೊರತೆ ನೀಗಿಸಲು ಕನಿಷ್ಠ ಎರಡು ವಿದ್ಯುತ್ ವಿತರಣಾ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಉಸ್ತುವಾರಿ ಎನ್. ಚಲುವರಾಯಸ್ವಾಮಿ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎಸ್. ಲಿಂಗಪ್ಪಾಜಿ, ಖಜಾಂಚಿ ಎಸ್.ಕೆ. ರವಿಕುಮಾರ್ಗೌಡ ಮುಂತಾದವರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-40-1056623772</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಕೃಷಿ ಪಂಪ್ಸೆಟ್ಗಳಿಗೆ ಹಗಲು ವೇಳೆ 7 ಗಂಟೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬೇಕು. ಈ ಹಿಂದೆ ಇದ್ದಂತೆಯೇ ಕೃಷಿ ಪಂಪ್ ಸೆಟ್ ವಿದ್ಯುತ್ ಸಂಪರ್ಕಗಳ ಅಕ್ರಮ-ಸಕ್ರಮಕ್ಕೆ ರೈತರ ಪಾಲನ್ನು ಪಡೆದು ಉಳಿದ ಎಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು’ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ರೈತರು ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ಬೆಳೆದು ನಿಂತಿರುವ ಬೆಳೆಗಳ ರಕ್ಷಣೆ ಮತ್ತು ಜನ- ಜಾನುವಾರುಗಳ ಕುಡಿಯುವ ನೀರಿಗಾಗಿ ಕೆ.ಆರ್.ಎಸ್. ಹೇಮಾವತಿ ಅಣೆಕಟ್ಟೆಗಳ ಮೂಲಕ ನಾಲೆಗಳಿಗೆ ಕನಿಷ್ಠ ಎರಡು ಕಟ್ಟು ನೀರು ಹರಿಸಬೇಕು. ಆ ಮೂಲಕ ರೈತರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.</p>.<p>‘ಪ್ರಕೃತಿ ವಿಕೋಪದಿಂದ ಬೆಳೆ ಹಾಗೂ ಮನೆಗಳಿಗೆ ಹಾನಿಯಾಗಿರುವ ಸಂಬಂಧ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಬೇಕು. ಭತ್ತ ಕಟಾವು ಯಂತ್ರಗಳಿಗೆ ಜಿಲ್ಲೆಯಾದ್ಯಂತ ಏಕ ರೀತಿಯ (ಪ್ರತಿ ಗಂಟೆಗೆ ₹2200) ಬಾಡಿಗೆ ದರ ನಿಗದಿಪಡಿಸಬೇಕು. ಈ ಸಂಬಂಧ ಯಂತ್ರಗಳ ಮಾಲೀಕರು ಮತ್ತು ಕೃಷಿ ಇಲಾಖೆ ಅಧಿಕಾರಿಗಳ ಸಭೆ ಕರೆದು ನಿರ್ಣಯ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.</p>.<p>ಬ್ಯಾಂಕುಗಳು ಮತ್ತು ಮತ್ತು ಮೈಕ್ರೊ ಫೈನಾನ್ಸ್ ಹಾವಳಿ ತಡೆಗಾಗಿ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸಮಸ್ಯೆ ಬಗೆಹರಿಸಬೇಕು. ಕೆ.ಆರ್. ಪೇಟೆಯಲ್ಲಿ ವಿದ್ಯುತ್ ಕೊರತೆ ನೀಗಿಸಲು ಕನಿಷ್ಠ ಎರಡು ವಿದ್ಯುತ್ ವಿತರಣಾ ಕೇಂದ್ರಗಳನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.</p>.<p>ಜಿಲ್ಲಾ ಉಸ್ತುವಾರಿ ಎನ್. ಚಲುವರಾಯಸ್ವಾಮಿ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ಪ್ರಧಾನ ಕಾರ್ಯದರ್ಶಿ ಜಿ.ಎಸ್. ಲಿಂಗಪ್ಪಾಜಿ, ಖಜಾಂಚಿ ಎಸ್.ಕೆ. ರವಿಕುಮಾರ್ಗೌಡ ಮುಂತಾದವರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-40-1056623772</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>