<p>ಮಂಡ್ಯ: ‘ರೈತರಿಗೆ ಅವಧಿ ಮೀರಿದ ಬಿತ್ತನೆ ಬೀಜ ವಿತರಿಸುತ್ತಿದ್ದಾರೆ ಎಂದು ಆರೋಪಿಸಿ ಕರವೇ ಕಾರ್ಯಕರ್ತರು ಗುರುವಾರ ವಿತರಣೆಗೆ ತಡೆಯೊಡ್ಡಿದ್ದಾರೆ.</p>.<p>ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ಮಳೆಯಾಶ್ರಿತ ಪ್ರದೇಶಗಳ ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿತ್ತು. ಬಿತ್ತನೆ ಬೀಜ ಒಂದು ವರ್ಷಕ್ಕೂ ಹಿಂದೆಯೇ ಅವಧಿ ಮೀರಿರುವುದು ರೈತರ ಗಮನಕ್ಕೆ ಬಂದಿದೆ. ಈ ಬಗ್ಗೆ ರೈತರು ಆಕ್ಷೇಪ ವ್ಯಕ್ತಪಡಿಸಿ ಅವಧಿ ಮೀರಿದ ಬಿತ್ತನೆ ಬೀಜ ಪಡೆಯಲು ನಿರಾಕರಿಸಿದ್ದಾರೆ.</p>.<p>ಮಾಹಿತಿ ತಿಳಿದ ಕರವೇ ಕಾರ್ಯಕರ್ತರು ಅವಧಿ ಮೀರಿದ ಬಿತ್ತನೆ ಬೀಜ ವಿತರಣೆಗೆ ತಡೆಯೊಡ್ಡಿದ್ದಾರೆ. ಅಧಿಕಾರಿಗಳು ತಕ್ಷಣ ಬಿತ್ತನೆ ಬೀಜ ವಿತರಣೆ ಸ್ಥಗಿತಗೊಳಿಸಿದ್ದಾರೆ.</p>.<p>ಕರವೇ ಮುಖಂಡ ಎಚ್.ಡಿ. ಜಯರಾಂ ಮಾತನಾಡಿ, ‘ಸುಮಾರು 240 ಕೆ.ಜಿ.ಯಷ್ಟು ಬಿತ್ತನೆ ಬೀಜ ವಿತರಣೆಗೆ ಕೃಷಿ ಇಲಾಖೆ ಸಿದ್ಧ ಮಾಡಿಕೊಂಡಿತ್ತು. ಅವಧಿ ಮೀರಿದ ಬೀಜ ವಿತರಣೆಯಾಗಿದ್ದರೆ ನೂರಾರು ಎಕರೆ ಫಸಲು ನಷ್ಟದ ಜತೆಗೆ ರೈತರ ಶ್ರಮ ಬಂಡವಾಳ ಎಲ್ಲವೂ ನಷ್ಟವಾಗುತಿತ್ತು’ ಎಂದರು.</p>.<p>ಈ ಸಂಬಂಧ ಕೃಷಿ ಇಲಾಖೆಯ ಅಧಿಕಾರಿಗಳ ವಿರುದ್ಧ ಅಗತ್ಯ ತನಿಖೆ ನಡೆಸುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-40-111965817</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ರೈತರಿಗೆ ಅವಧಿ ಮೀರಿದ ಬಿತ್ತನೆ ಬೀಜ ವಿತರಿಸುತ್ತಿದ್ದಾರೆ ಎಂದು ಆರೋಪಿಸಿ ಕರವೇ ಕಾರ್ಯಕರ್ತರು ಗುರುವಾರ ವಿತರಣೆಗೆ ತಡೆಯೊಡ್ಡಿದ್ದಾರೆ.</p>.<p>ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದಲ್ಲಿ ಮಳೆಯಾಶ್ರಿತ ಪ್ರದೇಶಗಳ ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡಲಾಗುತ್ತಿತ್ತು. ಬಿತ್ತನೆ ಬೀಜ ಒಂದು ವರ್ಷಕ್ಕೂ ಹಿಂದೆಯೇ ಅವಧಿ ಮೀರಿರುವುದು ರೈತರ ಗಮನಕ್ಕೆ ಬಂದಿದೆ. ಈ ಬಗ್ಗೆ ರೈತರು ಆಕ್ಷೇಪ ವ್ಯಕ್ತಪಡಿಸಿ ಅವಧಿ ಮೀರಿದ ಬಿತ್ತನೆ ಬೀಜ ಪಡೆಯಲು ನಿರಾಕರಿಸಿದ್ದಾರೆ.</p>.<p>ಮಾಹಿತಿ ತಿಳಿದ ಕರವೇ ಕಾರ್ಯಕರ್ತರು ಅವಧಿ ಮೀರಿದ ಬಿತ್ತನೆ ಬೀಜ ವಿತರಣೆಗೆ ತಡೆಯೊಡ್ಡಿದ್ದಾರೆ. ಅಧಿಕಾರಿಗಳು ತಕ್ಷಣ ಬಿತ್ತನೆ ಬೀಜ ವಿತರಣೆ ಸ್ಥಗಿತಗೊಳಿಸಿದ್ದಾರೆ.</p>.<p>ಕರವೇ ಮುಖಂಡ ಎಚ್.ಡಿ. ಜಯರಾಂ ಮಾತನಾಡಿ, ‘ಸುಮಾರು 240 ಕೆ.ಜಿ.ಯಷ್ಟು ಬಿತ್ತನೆ ಬೀಜ ವಿತರಣೆಗೆ ಕೃಷಿ ಇಲಾಖೆ ಸಿದ್ಧ ಮಾಡಿಕೊಂಡಿತ್ತು. ಅವಧಿ ಮೀರಿದ ಬೀಜ ವಿತರಣೆಯಾಗಿದ್ದರೆ ನೂರಾರು ಎಕರೆ ಫಸಲು ನಷ್ಟದ ಜತೆಗೆ ರೈತರ ಶ್ರಮ ಬಂಡವಾಳ ಎಲ್ಲವೂ ನಷ್ಟವಾಗುತಿತ್ತು’ ಎಂದರು.</p>.<p>ಈ ಸಂಬಂಧ ಕೃಷಿ ಇಲಾಖೆಯ ಅಧಿಕಾರಿಗಳ ವಿರುದ್ಧ ಅಗತ್ಯ ತನಿಖೆ ನಡೆಸುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರನ್ನು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-40-111965817</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>