<p>ಮಂಡ್ಯ: ‘ಕೈಗಾರಿಕಾ ಪ್ರದೇಶಾಭಿವೃದ್ಧಿ ಮಾಡುವ ನೆಪದಲ್ಲಿ ರೈತರ ಜೀವನೋಪಾಯಕ್ಕಿರುವ ತುಂಡು ಜಮೀನನ್ನು ಕಿತ್ತುಕೊಳ್ಳುವುದನ್ನು ಕೈಬಿಟ್ಟು, ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯಬೇಕು’ ಎಂದು ಮದ್ದೂರು, ಮಂಡ್ಯ ತಾಲ್ಲೂಕಿನ ರೈತರು ಸಭೆ ಬಹಿಷ್ಕರಿಸಿ ಹೊರನಡೆದರು.</p>.<p>ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಜಿಲ್ಲಾಧಿಕಾರಿ ಕುಮಾರ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ಕರೆಯಲಾಗಿತ್ತು.</p>.<p>ಮಂಡ್ಯ ತಾಲ್ಲೂಕಿನ ನೊದೆಕೊಪ್ಪಲು, ಎಲೆಚಾಕನಹಳ್ಳಿ ಹಾಗೂ ಮದ್ದೂರು ತಾಲ್ಲೂಕಿನ ಕುದರಗುಂಡಿ ಹಾಗೂ ಅಕ್ಕಪಕ್ಕದ ರೈತರ ಜೊತೆ ನಡೆದ ಸಭೆಯಲ್ಲಿ ಭೂಸ್ವಾಧೀನ ಪಡಿಸಿಕೊಳ್ಳಬಾರದೆಂದು ಎಲ್ಲರೂ ಹೊರನಡೆದು, ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘ ಸೇರಿದಂತೆ ಹಲವು ರೈತಪರ ಸಂಘಟನೆಗಳು ರೈತರ ಪರವಾಗಿ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಜಮೀನು ಉಳಿಸಿಕೊಡುವಂತೆ ಆಗ್ರಹಿಸಿದರು.</p>.<p>‘ಮದ್ದೂರು ತಾಲ್ಲೂಕಿನ ಕುದುರುಗುಂಡಿ ಸ.ನಂ.245ರಲ್ಲಿ 109 ಎಕರೆ ಜಮೀನನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಶಪಡಿಸಿಕೊಳ್ಳಲು ಹೊರಟಿರುವ ಕ್ರಮ ಸರಿಯಿಲ್ಲ. ಈ ಭಾಗದಲ್ಲಿ ಹಳ್ಳಿಗಳನ್ನು ಸ್ಥಾಪಿಸಲು ಬಡ ಕೂಲಿಕಾರರು, ದಲಿತರು ವಲಸೆ ಬಂದಾಗ ಸರ್ಕಾರ ಬಡ ರೈತರಿಗೆ ಜೀವನ ಮಾಡುವ ಉದ್ದೇಶಕ್ಕಾಗಿ ಸರ್ಕಾರ ಜಮೀನು ನೀಡಿದೆ. ಈ ಜಮೀನಿನಲ್ಲಿ ಜೀವನೋಪಾಯಕ್ಕೆಂದು ಆಹಾರ ಧಾನ್ಯಗಳನ್ನು ಬೆಳೆದು ಜೀವನ ನಡೆಸುತ್ತಿದ್ದಾರೆ. ಆ ಜೀವನವನ್ನೇ ಕಸಿದುಕೊಳ್ಳಲು ಹೊರಟಿರುವುದು ಯಾವ ನ್ಯಾಯ’ ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಲ್. ಭರತ್ರಾಜ್ ಪ್ರಶ್ನಿಸಿದರು.</p>.<p>‘ನೊದೆಕೊಪ್ಪಲು ಹಾಗೂ ಎಲೆಚಾಕನಹಳ್ಳಿ ಗ್ರಾಮದ ರೈತರು ಸಭೆಯನ್ನು ಬಹಿಷ್ಕರಿಸಿ ಯಾವುದೇ ಕಾರಣಕ್ಕೂ ಜಮೀನು ನೀಡುವುದಿಲ್ಲ. ಈ ಹಿಂದೆಯೂ ಮೂರು ಬಾರಿ ಚರ್ಚೆ ಮಾಡಿದ್ದೆವು. ಅಲ್ಲಿ ಪ್ರತಿಯೊಬ್ಬರೂ ಜಮೀನು ಕೊಡುವುದಿಲ್ಲ ಎಂದು ಮೈಸೂರು ಕೆಐಎಡಿಬಿ ಕಚೇರಿಗೆ ರೈತರು ಭೂ ಸ್ವಾಧೀನಾಧಿಕಾರಿಗಳ ಮುಂದೆ ಲಿಖಿತ ಬರವಣಿಗೆ ನೀಡಿದ್ದೇವೆ’ ಎಂದು ಆರೋಪಿಸಿದರು.</p>.<p>ವಿವಿಧ ಗ್ರಾಮದ ಮುಖಂಡರಾದ ಮಹದೇವು, ಸಿದ್ದಯ್ಯ, ಪುನೀತ್, ಶ್ರೀನಿವಾಸ್, ಬಿ.ಕುಮಾರ್, ರೆಡ್ಡಿ ಗೋಪಾಲ್, ಸತೀಶ್, ದಿನೇಶ್, ಸಂತೋಷ್, ರವಿ, ಪಾಪ,ಶ್ರೀನಿವಾಸ್, ಲಿಖಿತ್ಗೌಡ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-40-1929904983</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಕೈಗಾರಿಕಾ ಪ್ರದೇಶಾಭಿವೃದ್ಧಿ ಮಾಡುವ ನೆಪದಲ್ಲಿ ರೈತರ ಜೀವನೋಪಾಯಕ್ಕಿರುವ ತುಂಡು ಜಮೀನನ್ನು ಕಿತ್ತುಕೊಳ್ಳುವುದನ್ನು ಕೈಬಿಟ್ಟು, ಭೂಸ್ವಾಧೀನ ಪ್ರಕ್ರಿಯೆಯಿಂದ ಹಿಂದೆ ಸರಿಯಬೇಕು’ ಎಂದು ಮದ್ದೂರು, ಮಂಡ್ಯ ತಾಲ್ಲೂಕಿನ ರೈತರು ಸಭೆ ಬಹಿಷ್ಕರಿಸಿ ಹೊರನಡೆದರು.</p>.<p>ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ವಿಶೇಷ ಭೂಸ್ವಾಧೀನಾಧಿಕಾರಿ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಜಿಲ್ಲಾಧಿಕಾರಿ ಕುಮಾರ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಭೆ ಕರೆಯಲಾಗಿತ್ತು.</p>.<p>ಮಂಡ್ಯ ತಾಲ್ಲೂಕಿನ ನೊದೆಕೊಪ್ಪಲು, ಎಲೆಚಾಕನಹಳ್ಳಿ ಹಾಗೂ ಮದ್ದೂರು ತಾಲ್ಲೂಕಿನ ಕುದರಗುಂಡಿ ಹಾಗೂ ಅಕ್ಕಪಕ್ಕದ ರೈತರ ಜೊತೆ ನಡೆದ ಸಭೆಯಲ್ಲಿ ಭೂಸ್ವಾಧೀನ ಪಡಿಸಿಕೊಳ್ಳಬಾರದೆಂದು ಎಲ್ಲರೂ ಹೊರನಡೆದು, ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ಪ್ರಾಂತ ರೈತ ಸಂಘ ಸೇರಿದಂತೆ ಹಲವು ರೈತಪರ ಸಂಘಟನೆಗಳು ರೈತರ ಪರವಾಗಿ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ, ಜಮೀನು ಉಳಿಸಿಕೊಡುವಂತೆ ಆಗ್ರಹಿಸಿದರು.</p>.<p>‘ಮದ್ದೂರು ತಾಲ್ಲೂಕಿನ ಕುದುರುಗುಂಡಿ ಸ.ನಂ.245ರಲ್ಲಿ 109 ಎಕರೆ ಜಮೀನನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವಶಪಡಿಸಿಕೊಳ್ಳಲು ಹೊರಟಿರುವ ಕ್ರಮ ಸರಿಯಿಲ್ಲ. ಈ ಭಾಗದಲ್ಲಿ ಹಳ್ಳಿಗಳನ್ನು ಸ್ಥಾಪಿಸಲು ಬಡ ಕೂಲಿಕಾರರು, ದಲಿತರು ವಲಸೆ ಬಂದಾಗ ಸರ್ಕಾರ ಬಡ ರೈತರಿಗೆ ಜೀವನ ಮಾಡುವ ಉದ್ದೇಶಕ್ಕಾಗಿ ಸರ್ಕಾರ ಜಮೀನು ನೀಡಿದೆ. ಈ ಜಮೀನಿನಲ್ಲಿ ಜೀವನೋಪಾಯಕ್ಕೆಂದು ಆಹಾರ ಧಾನ್ಯಗಳನ್ನು ಬೆಳೆದು ಜೀವನ ನಡೆಸುತ್ತಿದ್ದಾರೆ. ಆ ಜೀವನವನ್ನೇ ಕಸಿದುಕೊಳ್ಳಲು ಹೊರಟಿರುವುದು ಯಾವ ನ್ಯಾಯ’ ಎಂದು ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಲ್. ಭರತ್ರಾಜ್ ಪ್ರಶ್ನಿಸಿದರು.</p>.<p>‘ನೊದೆಕೊಪ್ಪಲು ಹಾಗೂ ಎಲೆಚಾಕನಹಳ್ಳಿ ಗ್ರಾಮದ ರೈತರು ಸಭೆಯನ್ನು ಬಹಿಷ್ಕರಿಸಿ ಯಾವುದೇ ಕಾರಣಕ್ಕೂ ಜಮೀನು ನೀಡುವುದಿಲ್ಲ. ಈ ಹಿಂದೆಯೂ ಮೂರು ಬಾರಿ ಚರ್ಚೆ ಮಾಡಿದ್ದೆವು. ಅಲ್ಲಿ ಪ್ರತಿಯೊಬ್ಬರೂ ಜಮೀನು ಕೊಡುವುದಿಲ್ಲ ಎಂದು ಮೈಸೂರು ಕೆಐಎಡಿಬಿ ಕಚೇರಿಗೆ ರೈತರು ಭೂ ಸ್ವಾಧೀನಾಧಿಕಾರಿಗಳ ಮುಂದೆ ಲಿಖಿತ ಬರವಣಿಗೆ ನೀಡಿದ್ದೇವೆ’ ಎಂದು ಆರೋಪಿಸಿದರು.</p>.<p>ವಿವಿಧ ಗ್ರಾಮದ ಮುಖಂಡರಾದ ಮಹದೇವು, ಸಿದ್ದಯ್ಯ, ಪುನೀತ್, ಶ್ರೀನಿವಾಸ್, ಬಿ.ಕುಮಾರ್, ರೆಡ್ಡಿ ಗೋಪಾಲ್, ಸತೀಶ್, ದಿನೇಶ್, ಸಂತೋಷ್, ರವಿ, ಪಾಪ,ಶ್ರೀನಿವಾಸ್, ಲಿಖಿತ್ಗೌಡ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260424-40-1929904983</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>