<p><strong>ಮಂಡ್ಯ:</strong> ‘ಹೂಳು ತುಂಬಿರುವ ನಾಲೆಯಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರಕ್ಕೆ ತೊಂದರೆಯಾಗಿ ಜಮೀನುಗಳಲ್ಲಿ ಅಪಾರ ಪ್ರಮಾಣದ ನೀರು ನಿಲ್ಲುತ್ತಿರುವುದರಿಂದ ಬೆಳೆ ನಷ್ಟವಾಗುತ್ತಿದೆ. ಇದನ್ನು ತಪ್ಪಿಸಬೇಕು’ ಎಂದು ಆಗ್ರಹಿಸಿ ತಾಲ್ಲೂಕಿನ ದೊಡ್ಡಗರುಡನಹಳ್ಳಿ ಗ್ರಾಮದ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ದೊಡ್ಡಗರುಡನಹಳ್ಳಿ ಬಳಿಯ ವಿಶ್ವೇಶ್ವರಯ್ಯ ನಾಲೆ(ಕೊಪ್ಪ ವಿಭಾಗ)ಯ ಬಳಿ ಜಮಾವಣೆಗೊಂಡ ರೈತರು, ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಾಲೆಯಲ್ಲಿ ಹೂಳು ತುಂಬಿರುವುದರಿಂದ ಸರಾಗವಾಗಿ ನೀರು ಹರಿಯುವುದಕ್ಕೆ ಆಗುತ್ತಿಲ್ಲ, ಜೊತೆಗೆ ರಸ್ತೆ ಮತ್ತು ಏರಿಯ ಮೇಲೆಲ್ಲಾ ನೀರು ಹರಿದು ಜಮೀನುಗಳಿಗೆ ನುಗ್ಗುತ್ತಿದೆ. ಇದರಿಂದಾಗಿ ರೈತರ ಬೆಳೆ ನಾಶವಾಗುತ್ತಿದೆ. ಈ ಬಗ್ಗೆ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ನೀರುಗಂಟಿಗಳ ಗಮನಕ್ಕೆ ತಂದರು ಪ್ರಯೋಜನವಾಗಿಲ್’ಲ ಎಂದು ಆರೋಪಿಸಿದರು.</p>.<p>‘ಇಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ನಾಲೆ ಮೇಲೆ ನೀರು ಹರಿಯುತ್ತಿರುವುದರಿಂದ ಏರಿಗಳಲ್ಲಿ ಮಣ್ಣಿನ ಸವೆತ ಉಂಟಾಗಿ ಬಂಡಿ ಜಾಡಿನ ರಸ್ತೆ ಮತ್ತು ಪ್ರಮುಖ ರಸ್ತೆಗಳಲ್ಲಾ ಕೊರಕಲು ಗುಂಡಿಗಳಾಗುತ್ತಿವೆ. ದೊಡ್ಡಗರುಡನಹಳ್ಳಿ ಬಳಿ ಮಂಡ್ಯ-ನಾಗಮಂಗಲ ರಸ್ತೆಯ ಮೇಲೂ ನೀರು ಹರಿಯುತ್ತಿದೆ. ಇದನ್ನು ತಕ್ಷಣ ಸರಿಪಡಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿಗೆ ದೂರು ನೀಡಲಾಗುವುದು, ಜೊತೆಗೆ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನೆಯಲ್ಲಿ ಗ್ರಾಮದ ಆನಂದ್, ಕುಮಾರ್, ಕೆಂಪೇಗೌಡ, ರೈತರಾದ ಪಟೇಲ್ ಆನಂದ್, ಚನ್ನಕೇಶವ, ಮರೀಗೌಡ, ರುದ್ರೇಶ, ಪುಟ್ಟಸ್ವಾಮಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಹೂಳು ತುಂಬಿರುವ ನಾಲೆಯಲ್ಲಿ ರಸ್ತೆ ಮೇಲೆ ನೀರು ಹರಿಯುತ್ತಿದ್ದು, ಸಂಚಾರಕ್ಕೆ ತೊಂದರೆಯಾಗಿ ಜಮೀನುಗಳಲ್ಲಿ ಅಪಾರ ಪ್ರಮಾಣದ ನೀರು ನಿಲ್ಲುತ್ತಿರುವುದರಿಂದ ಬೆಳೆ ನಷ್ಟವಾಗುತ್ತಿದೆ. ಇದನ್ನು ತಪ್ಪಿಸಬೇಕು’ ಎಂದು ಆಗ್ರಹಿಸಿ ತಾಲ್ಲೂಕಿನ ದೊಡ್ಡಗರುಡನಹಳ್ಳಿ ಗ್ರಾಮದ ರೈತರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ದೊಡ್ಡಗರುಡನಹಳ್ಳಿ ಬಳಿಯ ವಿಶ್ವೇಶ್ವರಯ್ಯ ನಾಲೆ(ಕೊಪ್ಪ ವಿಭಾಗ)ಯ ಬಳಿ ಜಮಾವಣೆಗೊಂಡ ರೈತರು, ನೀರಾವರಿ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ನಾಲೆಯಲ್ಲಿ ಹೂಳು ತುಂಬಿರುವುದರಿಂದ ಸರಾಗವಾಗಿ ನೀರು ಹರಿಯುವುದಕ್ಕೆ ಆಗುತ್ತಿಲ್ಲ, ಜೊತೆಗೆ ರಸ್ತೆ ಮತ್ತು ಏರಿಯ ಮೇಲೆಲ್ಲಾ ನೀರು ಹರಿದು ಜಮೀನುಗಳಿಗೆ ನುಗ್ಗುತ್ತಿದೆ. ಇದರಿಂದಾಗಿ ರೈತರ ಬೆಳೆ ನಾಶವಾಗುತ್ತಿದೆ. ಈ ಬಗ್ಗೆ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಸೇರಿದಂತೆ ನೀರುಗಂಟಿಗಳ ಗಮನಕ್ಕೆ ತಂದರು ಪ್ರಯೋಜನವಾಗಿಲ್’ಲ ಎಂದು ಆರೋಪಿಸಿದರು.</p>.<p>‘ಇಲ್ಲಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ನಾಲೆ ಮೇಲೆ ನೀರು ಹರಿಯುತ್ತಿರುವುದರಿಂದ ಏರಿಗಳಲ್ಲಿ ಮಣ್ಣಿನ ಸವೆತ ಉಂಟಾಗಿ ಬಂಡಿ ಜಾಡಿನ ರಸ್ತೆ ಮತ್ತು ಪ್ರಮುಖ ರಸ್ತೆಗಳಲ್ಲಾ ಕೊರಕಲು ಗುಂಡಿಗಳಾಗುತ್ತಿವೆ. ದೊಡ್ಡಗರುಡನಹಳ್ಳಿ ಬಳಿ ಮಂಡ್ಯ-ನಾಗಮಂಗಲ ರಸ್ತೆಯ ಮೇಲೂ ನೀರು ಹರಿಯುತ್ತಿದೆ. ಇದನ್ನು ತಕ್ಷಣ ಸರಿಪಡಿಸಿ ಸಮಸ್ಯೆ ಬಗೆಹರಿಸಬೇಕು. ಇಲ್ಲವಾದರೆ ಜಿಲ್ಲಾಧಿಕಾರಿಗೆ ದೂರು ನೀಡಲಾಗುವುದು, ಜೊತೆಗೆ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನೆಯಲ್ಲಿ ಗ್ರಾಮದ ಆನಂದ್, ಕುಮಾರ್, ಕೆಂಪೇಗೌಡ, ರೈತರಾದ ಪಟೇಲ್ ಆನಂದ್, ಚನ್ನಕೇಶವ, ಮರೀಗೌಡ, ರುದ್ರೇಶ, ಪುಟ್ಟಸ್ವಾಮಿ ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>