<p>ಮಂಡ್ಯ: ಕೃಷಿ ಉತ್ಪನ್ನಗಳಿಗೆ ಬೆಲೆ ನಿಗದಿ, ಹಾಲಿನ ದರ ಹೆಚ್ಚಳಕ್ಕೆ ಒತ್ತಾಯಿಸಿ ರೈತಸಂಘದ ಸದಸ್ಯರು ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ 3ನೇ ದಿನಕ್ಕೆ ತಲುಪಿದೆ. ಉಪವಾಸ ನಡೆಸುತ್ತಿದ್ದ ಐವರು ಮುಖಂಡರಲ್ಲಿ ಇಬ್ಬರು ಶುಕ್ರವಾರ ರಾತ್ರಿ ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದಾರೆ.</p>.<p>ಅನ್ನ ನೀರು ತ್ಯಜಿಸಿ ಉಪವಾಸ ನಡೆಸುತ್ತಿದ್ದ ಅಣ್ಣಯ್ಯ ಮತ್ತು ರಾಮಕೃಷ್ಣ ಅವರಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಅಸ್ವಸ್ಥರಾದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಯಿತು. ಇನ್ನೂ ಮೂವರು ರೈತರು ಉಪವಾಸ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಉಪವಾಸ ನಡೆಸುತ್ತಿದ್ದರೂ ಸರ್ಕಾರ ರೈತರ ಕಡೆ ತಿರುಗಿ ನೋಡದಿರುವುದಕ್ಕೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತಸಂಘ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ ‘ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ರೈತರ ಜೀವಕ್ಕೆ ಬೆಲೆ ಇಲ್ಲವೇ? ರೈತರು ಅನ್ನ ನೀರು ತ್ಯಜಿಸಿ ಹೋರಾಟ ನಡೆಸುತ್ತಿದ್ದರೂ ಯಾವೊಬ್ಬ ಮಂತ್ರಿಯೂ ತಿರುಗಿ ನೋಡಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ರೈತ ವಿರೋಧಿಯಾಗಿದ್ದು ರೈತರನ್ನು ಸಂಕಷ್ಟಕ್ಕೆ ದೂಡಲಿದೆ’ ಎಂದು ಆಕ್ರೋಶ ವ್ಯಕ್ತಪಿಸಿದರು.</p>.<p>‘ರೈತರಿಗೆ ₹ 5 ಲಕ್ಷ ಬಡ್ಡಿ ರಹಿತ ಸಾಲ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಆದರೆ ಇದು ರೈತರಿಗೆ ಮೋಸ ಮಾಡುವ ನಡೆಯಾಗಿದೆ. ಎಲ್ಲಾ ರೈತರಿಗೂ ಸಾಲ ಸಿಗುವುದಿಲ್ಲ. ಎಕರೆಗೆ ₹ 60 ಸಾವಿರ ಮಾತ್ರ ಕೊಡುತ್ತಾರೆ. ಹತ್ತಾರು ಎಕರೆ ಭೂಮಿ ಇರುವ ರೈತರಿಗೆ ಮಾತ್ರ ಸಾಲ ಸಿಗುತ್ತದೆ. ಕಡಿಮೆ ಭೂಮಿ ಉಳ್ಳ ರೈತರು ಎಲ್ಲಿಗೆ ಹೋಗಬೇಕು, ಇದು ಸರ್ಕಾರ ಮಾಡಿದ ಮೋಸವಲ್ಲವೇ’ ಎಂದು ಪ್ರಶ್ನಿಸಿದರು.</p>.<p>ಸಂಧಾನಕ್ಕೆ ಯತ್ನ: ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ನಾಗರಾಜು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಕೋರಿದರು. ಶೀಘ್ರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ವರದಿ ನೀಡಲಾಗುವುದು. ಸದ್ಯ ಉಪವಾಸ ಸತ್ಯಾಗ್ರಹ ಮಾಡುವುದು ಬೇಡ ಎಂದು ಮನವಿ ಮಾಡಿದರು. ಆದರೆ ಅದಕ್ಕೆ ನಿರಾಕರಿಸಿದ ಮುಖಂಡರು ಹೋರಾಟ ಮುಂದುವರಿಸಿದರು.</p>.<p>ರೈತಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕೆಂಪೂಗೌಡ ಮಾತನಾಡಿ ‘ನಮ್ಮ ಕೈಮೀರುತ್ತಿದ್ದು ಉಪವಾಸ ನಿರತರ ಆರೋಗ್ಯ ಹದಗೆಡುತ್ತಿದೆ. ಮುಂದೆ ಆಗುವಂತಹ ಅಪಾಯಗಳಿಗೆ ಸರ್ಕಾರವೇ ಹೊಣೆ. ಮುಂದೆ ಚುನಾವಣೆ ಬರುವುದರೊಳಗೆ ಶೀಘ್ರ ನಮ್ಮ ಬೇಡಿಕೆ ಈಡೇರಬೇಕು. ಎಂಥದೇ ಸವಾಲು ಎದುರಾದರೂ ಹೋರಾಟ ಮಾತ್ರ ನಿಲ್ಲುವುದಿಲ್ಲ’ ಎಂದರು.</p>.<p>ರೈತಸಂಘ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ ‘ರಾಜ್ಯಪಾಲರಾದ ಥಾವರ್ಚಂದ್ ಗೆಹಲೋತ್ ಅವರು ಭಾನುವಾರ ಮೈಸೂರಿಗೆ ಬರುತ್ತಿದ್ದಾರೆ. ರೈತಸಂಘದ ನಿಯೋಗ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದೇವೆ. ಈ ಕುರಿತು ಅಧಿಕಾರಿಗಳಿಗೂ ಮನವಿ ಮಾಡಲಾಗಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿದ್ದು ಅವರ ಮೂಲಕ ಬೇಡಿಕೆ ಈಡೇರಿಸಲು ಒತ್ತಾಯಿಸಲಾಗುವುದು’ಎಂದರು.</p>.<p>***</p>.<p>ಡಿಸಿ ಕಚೇರಿಗೆ ದಿಗ್ಭಂಧನ</p>.<p>ಶೀಘ್ರ ರೈತರ ಬೇಡಿಕೆಗಳು ಈಡೇರದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಯಲಿದೆ. ಫೆ.23ರಂದು ಜಿಲ್ಲಾಧಿಕಾರಿ ಕಚೇರಿಗೆ ದಿಗ್ಬಂಧನ ಹಾಕಲು ನಿರ್ಧರಿಸಲಾಗಿದೆ. ಜಿಲ್ಲೆಯ ಸಾವಿರಾರು ರೈತರು ಜಾನುವಾರು, ಎತ್ತಿನ ಗಾಡಿಗಳ ಜೊತೆ ಬಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ ಎಂದು ರೈತಸಂಘದ ಮುಖಂಡರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಕೃಷಿ ಉತ್ಪನ್ನಗಳಿಗೆ ಬೆಲೆ ನಿಗದಿ, ಹಾಲಿನ ದರ ಹೆಚ್ಚಳಕ್ಕೆ ಒತ್ತಾಯಿಸಿ ರೈತಸಂಘದ ಸದಸ್ಯರು ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ 3ನೇ ದಿನಕ್ಕೆ ತಲುಪಿದೆ. ಉಪವಾಸ ನಡೆಸುತ್ತಿದ್ದ ಐವರು ಮುಖಂಡರಲ್ಲಿ ಇಬ್ಬರು ಶುಕ್ರವಾರ ರಾತ್ರಿ ಅಸ್ವಸ್ಥರಾಗಿ ಆಸ್ಪತ್ರೆಗೆ ಸೇರಿದ್ದಾರೆ.</p>.<p>ಅನ್ನ ನೀರು ತ್ಯಜಿಸಿ ಉಪವಾಸ ನಡೆಸುತ್ತಿದ್ದ ಅಣ್ಣಯ್ಯ ಮತ್ತು ರಾಮಕೃಷ್ಣ ಅವರಲ್ಲಿ ಸಕ್ಕರೆ ಅಂಶ ಕಡಿಮೆಯಾಗಿ ಅಸ್ವಸ್ಥರಾದರು. ಅವರನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಯಿತು. ಇನ್ನೂ ಮೂವರು ರೈತರು ಉಪವಾಸ ನಡೆಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಉಪವಾಸ ನಡೆಸುತ್ತಿದ್ದರೂ ಸರ್ಕಾರ ರೈತರ ಕಡೆ ತಿರುಗಿ ನೋಡದಿರುವುದಕ್ಕೆ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತಸಂಘ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ ‘ಸರ್ಕಾರಕ್ಕೆ ಮಾನ ಮರ್ಯಾದೆ ಇಲ್ಲ. ರೈತರ ಜೀವಕ್ಕೆ ಬೆಲೆ ಇಲ್ಲವೇ? ರೈತರು ಅನ್ನ ನೀರು ತ್ಯಜಿಸಿ ಹೋರಾಟ ನಡೆಸುತ್ತಿದ್ದರೂ ಯಾವೊಬ್ಬ ಮಂತ್ರಿಯೂ ತಿರುಗಿ ನೋಡಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದ ಬಜೆಟ್ ರೈತ ವಿರೋಧಿಯಾಗಿದ್ದು ರೈತರನ್ನು ಸಂಕಷ್ಟಕ್ಕೆ ದೂಡಲಿದೆ’ ಎಂದು ಆಕ್ರೋಶ ವ್ಯಕ್ತಪಿಸಿದರು.</p>.<p>‘ರೈತರಿಗೆ ₹ 5 ಲಕ್ಷ ಬಡ್ಡಿ ರಹಿತ ಸಾಲ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ. ಆದರೆ ಇದು ರೈತರಿಗೆ ಮೋಸ ಮಾಡುವ ನಡೆಯಾಗಿದೆ. ಎಲ್ಲಾ ರೈತರಿಗೂ ಸಾಲ ಸಿಗುವುದಿಲ್ಲ. ಎಕರೆಗೆ ₹ 60 ಸಾವಿರ ಮಾತ್ರ ಕೊಡುತ್ತಾರೆ. ಹತ್ತಾರು ಎಕರೆ ಭೂಮಿ ಇರುವ ರೈತರಿಗೆ ಮಾತ್ರ ಸಾಲ ಸಿಗುತ್ತದೆ. ಕಡಿಮೆ ಭೂಮಿ ಉಳ್ಳ ರೈತರು ಎಲ್ಲಿಗೆ ಹೋಗಬೇಕು, ಇದು ಸರ್ಕಾರ ಮಾಡಿದ ಮೋಸವಲ್ಲವೇ’ ಎಂದು ಪ್ರಶ್ನಿಸಿದರು.</p>.<p>ಸಂಧಾನಕ್ಕೆ ಯತ್ನ: ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎಚ್.ಎನ್.ನಾಗರಾಜು ಹೋರಾಟ ಸ್ಥಳಕ್ಕೆ ಭೇಟಿ ನೀಡಿ ಉಪವಾಸ ಸತ್ಯಾಗ್ರಹ ಕೈಬಿಡುವಂತೆ ಕೋರಿದರು. ಶೀಘ್ರ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ವರದಿ ನೀಡಲಾಗುವುದು. ಸದ್ಯ ಉಪವಾಸ ಸತ್ಯಾಗ್ರಹ ಮಾಡುವುದು ಬೇಡ ಎಂದು ಮನವಿ ಮಾಡಿದರು. ಆದರೆ ಅದಕ್ಕೆ ನಿರಾಕರಿಸಿದ ಮುಖಂಡರು ಹೋರಾಟ ಮುಂದುವರಿಸಿದರು.</p>.<p>ರೈತಸಂಘ ಜಿಲ್ಲಾ ಘಟಕದ ಅಧ್ಯಕ್ಷ ಕೆಂಪೂಗೌಡ ಮಾತನಾಡಿ ‘ನಮ್ಮ ಕೈಮೀರುತ್ತಿದ್ದು ಉಪವಾಸ ನಿರತರ ಆರೋಗ್ಯ ಹದಗೆಡುತ್ತಿದೆ. ಮುಂದೆ ಆಗುವಂತಹ ಅಪಾಯಗಳಿಗೆ ಸರ್ಕಾರವೇ ಹೊಣೆ. ಮುಂದೆ ಚುನಾವಣೆ ಬರುವುದರೊಳಗೆ ಶೀಘ್ರ ನಮ್ಮ ಬೇಡಿಕೆ ಈಡೇರಬೇಕು. ಎಂಥದೇ ಸವಾಲು ಎದುರಾದರೂ ಹೋರಾಟ ಮಾತ್ರ ನಿಲ್ಲುವುದಿಲ್ಲ’ ಎಂದರು.</p>.<p>ರೈತಸಂಘ ರಾಜ್ಯ ಘಟಕದ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್ ಮಾತನಾಡಿ ‘ರಾಜ್ಯಪಾಲರಾದ ಥಾವರ್ಚಂದ್ ಗೆಹಲೋತ್ ಅವರು ಭಾನುವಾರ ಮೈಸೂರಿಗೆ ಬರುತ್ತಿದ್ದಾರೆ. ರೈತಸಂಘದ ನಿಯೋಗ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದೇವೆ. ಈ ಕುರಿತು ಅಧಿಕಾರಿಗಳಿಗೂ ಮನವಿ ಮಾಡಲಾಗಿದೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿದ್ದು ಅವರ ಮೂಲಕ ಬೇಡಿಕೆ ಈಡೇರಿಸಲು ಒತ್ತಾಯಿಸಲಾಗುವುದು’ಎಂದರು.</p>.<p>***</p>.<p>ಡಿಸಿ ಕಚೇರಿಗೆ ದಿಗ್ಭಂಧನ</p>.<p>ಶೀಘ್ರ ರೈತರ ಬೇಡಿಕೆಗಳು ಈಡೇರದಿದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ನಡೆಯಲಿದೆ. ಫೆ.23ರಂದು ಜಿಲ್ಲಾಧಿಕಾರಿ ಕಚೇರಿಗೆ ದಿಗ್ಬಂಧನ ಹಾಕಲು ನಿರ್ಧರಿಸಲಾಗಿದೆ. ಜಿಲ್ಲೆಯ ಸಾವಿರಾರು ರೈತರು ಜಾನುವಾರು, ಎತ್ತಿನ ಗಾಡಿಗಳ ಜೊತೆ ಬಂದು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ ಎಂದು ರೈತಸಂಘದ ಮುಖಂಡರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>