<p>ಮಂಡ್ಯ: ತಾಲ್ಲೂಕಿನ ತೂಬಿನಕೆರೆ ಕೈಗಾರಿಕಾ ಪ್ರದೇಶದ ಬೆಲ್ಟ್ ತಯಾರಿಕಾ ಘಟಕದಲ್ಲಿ ಶನಿವಾರ ತಡರಾತ್ರಿ ನಡೆದ ಅಗ್ನಿ ದುರಂತದಲ್ಲಿ ಯಂತ್ರೋಪಕರಣ, ಕಚ್ಚಾಸಾಮಗ್ರಿ ಸುಟ್ಟು ಹೋಗಿವೆ.</p>.<p>ಹರಿ ಬೆಲ್ಟ್ ಅಂಡ್ ಕನ್ವೇಯರ್ಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ತಡರಾತ್ರಿ 2.30ರ ವೇಳೆಗೆ ಶಾರ್ಟ್ಸೆರ್ಕಿಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ನಂತರ ಕಾರ್ಖಾನೆಯಾದ್ಯಂತ ಬೆಂಕಿ ಆವರಿಸಿದ ಪರಿಣಾಮ ಒಂದು ಘಟಕ ಸಂಪೂರ್ಣವಾಗಿ ಸುಟ್ಟು ಹೋಗಿದೆ.</p>.<p>6 ಸಾಮಾನ್ಯ ಅಗ್ನಿಶಾಮಕ ವಾಹನಗಳು, 2 ಕೈಗಾರಿಕಾ ಅಗ್ನಿಶಾಮಕ ವಾಹನ ಹಾಗೂ 70 ಅಗ್ನಿಶಾಮಕ ಸಿಬ್ಬಂದಿ ನಿರಂತರ ಎಂಟು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.</p>.<p>ಕಾರ್ಖಾನೆಯ 43 ಮಂದಿ ಕಾರ್ಮಿಕರು ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಕೆಲವೇ ಹೊತ್ತಿನಲ್ಲಿ ಬೆಂಕಿ ಆವರಿಸಿಕೊಂಡ ಕಾರಣ ಭದ್ರತಾ ಸಿಬ್ಬಂದಿ ಮಾಲೀಕರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.</p>.<p>ಅಗ್ನಿಶಾಮಕ ಇಲಾಖೆ ಪ್ರಾದೇಶಿಕ ಅಧಿಕಾರಿ ಗುರುರಾಜ್ ಅವರು ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮೈಸೂರಿನಿಂದ ಅಗ್ನಿಶಾಮಕ ವಾಹನ, ಕೈಗಾರಿಕಾ ಪಡೆಯ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಿ ಕಾರ್ಯಾಚರಣೆ ನಡೆಸಿದರು. ₹ 1 ಕೋಟಿಗೂ ಹೆಚ್ಚು ಮೌಲ್ಯದ ಸಾಮಗ್ರಿಗಳು ನಾಶವಾಗಿವೆ ಎಂದು ಕಾರ್ಖಾನೆ ಸಿಬ್ಬಂದಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ತಾಲ್ಲೂಕಿನ ತೂಬಿನಕೆರೆ ಕೈಗಾರಿಕಾ ಪ್ರದೇಶದ ಬೆಲ್ಟ್ ತಯಾರಿಕಾ ಘಟಕದಲ್ಲಿ ಶನಿವಾರ ತಡರಾತ್ರಿ ನಡೆದ ಅಗ್ನಿ ದುರಂತದಲ್ಲಿ ಯಂತ್ರೋಪಕರಣ, ಕಚ್ಚಾಸಾಮಗ್ರಿ ಸುಟ್ಟು ಹೋಗಿವೆ.</p>.<p>ಹರಿ ಬೆಲ್ಟ್ ಅಂಡ್ ಕನ್ವೇಯರ್ಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ತಡರಾತ್ರಿ 2.30ರ ವೇಳೆಗೆ ಶಾರ್ಟ್ಸೆರ್ಕಿಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ನಂತರ ಕಾರ್ಖಾನೆಯಾದ್ಯಂತ ಬೆಂಕಿ ಆವರಿಸಿದ ಪರಿಣಾಮ ಒಂದು ಘಟಕ ಸಂಪೂರ್ಣವಾಗಿ ಸುಟ್ಟು ಹೋಗಿದೆ.</p>.<p>6 ಸಾಮಾನ್ಯ ಅಗ್ನಿಶಾಮಕ ವಾಹನಗಳು, 2 ಕೈಗಾರಿಕಾ ಅಗ್ನಿಶಾಮಕ ವಾಹನ ಹಾಗೂ 70 ಅಗ್ನಿಶಾಮಕ ಸಿಬ್ಬಂದಿ ನಿರಂತರ ಎಂಟು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.</p>.<p>ಕಾರ್ಖಾನೆಯ 43 ಮಂದಿ ಕಾರ್ಮಿಕರು ಶನಿವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳಿದ್ದರು. ಕೆಲವೇ ಹೊತ್ತಿನಲ್ಲಿ ಬೆಂಕಿ ಆವರಿಸಿಕೊಂಡ ಕಾರಣ ಭದ್ರತಾ ಸಿಬ್ಬಂದಿ ಮಾಲೀಕರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು.</p>.<p>ಅಗ್ನಿಶಾಮಕ ಇಲಾಖೆ ಪ್ರಾದೇಶಿಕ ಅಧಿಕಾರಿ ಗುರುರಾಜ್ ಅವರು ಶ್ರೀರಂಗಪಟ್ಟಣ, ಪಾಂಡವಪುರ, ಮಂಡ್ಯ, ಮೈಸೂರಿನಿಂದ ಅಗ್ನಿಶಾಮಕ ವಾಹನ, ಕೈಗಾರಿಕಾ ಪಡೆಯ ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಿ ಕಾರ್ಯಾಚರಣೆ ನಡೆಸಿದರು. ₹ 1 ಕೋಟಿಗೂ ಹೆಚ್ಚು ಮೌಲ್ಯದ ಸಾಮಗ್ರಿಗಳು ನಾಶವಾಗಿವೆ ಎಂದು ಕಾರ್ಖಾನೆ ಸಿಬ್ಬಂದಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>