<p>ಮಂಡ್ಯ: ‘ಜಾನಪದ ಗ್ರಾಮೀಣ ಭಾಗದ ಜೀವನ ಜನರ ಪ್ರತಿಬಿಂಬವಾಗಿದ್ದು, ಅದನ್ನು ಉಳಿಸಿಕೊಂಡು ಹೋಗೋಣ’ ಎಂದು ಕಲಾವಿದ ಬಸವರಾಜು ಸಂಪಳ್ಳಿ ಸಲಹೆ ನೀಡಿದರು.</p>.<p>ತಾಲ್ಲೂಕಿನ ಎಚ್.ಕೋಡಿಹಳ್ಳಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಮಲೈಮಹದೇಶ್ವರ ಜಾನಪದ ಮತ್ತು ಸುಗಮ ಸಂಗೀತ ಅಕಾಡೆಮಿ ತಂಡದ ಸಹಯೋಗದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಜಾನಪದ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಹಳ್ಳಿಗಳಲ್ಲಿ ನಡೆಯುವ ಹಬ್ಬ, ಜಾತ್ರೆಗಳು, ಕೃಷಿ ಕೆಲಸಗಳಲ್ಲಿ ಹಾಗೂ ರಾಗಿ ಬೀಸುವಾಗ ಹಾಡುವ ಪದಗಳನ್ನು ಇಂದಿಗೂ ಮರೆಯಲು ಸಾಧ್ಯವಿಲ್ಲ, ಏಕೆಂದರೆ ಅವೆಲ್ಲವೂ ಜಾನಪದವಾಗಿವೆ. ಇನ್ನೂ ಪೂಜಾ ಕುಣಿತ, ಡೊಳ್ಳು ಕುಣಿತ, ಕೋಲಾಟದಲ್ಲಿ ಹಾಡುವ ಪದಗಳೂ ಜಾನಪದ ಗೀತೆಗಳಾಗಿವೆ’ ಎಂದರು.</p>.<p>ಪಶು ವೈದ್ಯಾಧಿಕಾರಿ ಸುರೇಶ್ ಮಾತನಾಡಿ, ‘ಜನರನ್ನು ಒಂದೆಡೆ ಸೇರಿಸುವ ಕಾರ್ಯಕ್ರಮವೇ ಜಾಣಪದ ಉತ್ಸವ ಎಂದರೆ ತಪ್ಪಲ್ಲ. ಜಾನಪದ ಕಲೆಯನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗೋಣ’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ರಂಗಭೂಮಿ ಕಲಾವಿದ ಜವರೇಗೌಡ, ಬಸವೇಶ್ವರ ಗ್ರಾಮಾಭಿವೃದ್ಧಿ ಟ್ರಸ್ಟ್ನ ಗೌರವಾಧ್ಯಕ್ಷ ಕೆ.ಆರ್.ರಾಮಕೃಷ್ಣ, ಅಕಾಡೆಮಿ ಅಧ್ಯಕ್ಷೆ ದೇವೀರಮ್ಮ, ಕಾರ್ಯದರ್ಶಿ ಎಚ್.ಎಂ.ಶಿವಮಹದೇವು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-40-199219671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಜಾನಪದ ಗ್ರಾಮೀಣ ಭಾಗದ ಜೀವನ ಜನರ ಪ್ರತಿಬಿಂಬವಾಗಿದ್ದು, ಅದನ್ನು ಉಳಿಸಿಕೊಂಡು ಹೋಗೋಣ’ ಎಂದು ಕಲಾವಿದ ಬಸವರಾಜು ಸಂಪಳ್ಳಿ ಸಲಹೆ ನೀಡಿದರು.</p>.<p>ತಾಲ್ಲೂಕಿನ ಎಚ್.ಕೋಡಿಹಳ್ಳಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಮಲೈಮಹದೇಶ್ವರ ಜಾನಪದ ಮತ್ತು ಸುಗಮ ಸಂಗೀತ ಅಕಾಡೆಮಿ ತಂಡದ ಸಹಯೋಗದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಜಾನಪದ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>‘ಹಳ್ಳಿಗಳಲ್ಲಿ ನಡೆಯುವ ಹಬ್ಬ, ಜಾತ್ರೆಗಳು, ಕೃಷಿ ಕೆಲಸಗಳಲ್ಲಿ ಹಾಗೂ ರಾಗಿ ಬೀಸುವಾಗ ಹಾಡುವ ಪದಗಳನ್ನು ಇಂದಿಗೂ ಮರೆಯಲು ಸಾಧ್ಯವಿಲ್ಲ, ಏಕೆಂದರೆ ಅವೆಲ್ಲವೂ ಜಾನಪದವಾಗಿವೆ. ಇನ್ನೂ ಪೂಜಾ ಕುಣಿತ, ಡೊಳ್ಳು ಕುಣಿತ, ಕೋಲಾಟದಲ್ಲಿ ಹಾಡುವ ಪದಗಳೂ ಜಾನಪದ ಗೀತೆಗಳಾಗಿವೆ’ ಎಂದರು.</p>.<p>ಪಶು ವೈದ್ಯಾಧಿಕಾರಿ ಸುರೇಶ್ ಮಾತನಾಡಿ, ‘ಜನರನ್ನು ಒಂದೆಡೆ ಸೇರಿಸುವ ಕಾರ್ಯಕ್ರಮವೇ ಜಾಣಪದ ಉತ್ಸವ ಎಂದರೆ ತಪ್ಪಲ್ಲ. ಜಾನಪದ ಕಲೆಯನ್ನು ಜೀವಂತವಾಗಿರಿಸುವ ನಿಟ್ಟಿನಲ್ಲಿ ನಾವೆಲ್ಲರೂ ಸಾಗೋಣ’ ಎಂದು ಸಲಹೆ ನೀಡಿದರು.</p>.<p>ಕಾರ್ಯಕ್ರಮದಲ್ಲಿ ರಂಗಭೂಮಿ ಕಲಾವಿದ ಜವರೇಗೌಡ, ಬಸವೇಶ್ವರ ಗ್ರಾಮಾಭಿವೃದ್ಧಿ ಟ್ರಸ್ಟ್ನ ಗೌರವಾಧ್ಯಕ್ಷ ಕೆ.ಆರ್.ರಾಮಕೃಷ್ಣ, ಅಕಾಡೆಮಿ ಅಧ್ಯಕ್ಷೆ ದೇವೀರಮ್ಮ, ಕಾರ್ಯದರ್ಶಿ ಎಚ್.ಎಂ.ಶಿವಮಹದೇವು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-40-199219671</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>