<p><strong>ಮಂಡ್ಯ:</strong> ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜ.26ರಂದು ಗಾಂಧಿ ಭವನ ಉದ್ಘಾಟನಾ ಸಮಾರಂಭವನ್ನು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಬಿ. ಹೊಸೂರು ಕಾಲೊನಿಯಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p>‘ಗಾಂಧಿ ಭವನ’ ನಿರ್ಮಾಣವಾಗಿ ವರ್ಷ ಕಳೆದರೂ ಉದ್ಘಾಟನೆಯಾಗಿಲ್ಲ. ಈ ಭವ್ಯ ಕಟ್ಟಡ ನಿರುಪಯುಕ್ತವಾಗಿದ್ದು, ಅನಾಥ ಸ್ಥಿತಿಯಲ್ಲಿದೆ ಎಂಬ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಸೆ.21ರಂದು ವಿಶೇಷ ವರದಿ ಪ್ರಕಟವಾಗಿತ್ತು. </p>.<p><a href="https://www.prajavani.net/district/mandya/gandhi-bhavan-mandya-abandoned-3546238">ಮಂಡ್ಯ: ಅನಾಥ ಸ್ಥಿತಿಯಲ್ಲಿರುವ ‘ಗಾಂಧಿ ಭವನ’</a></p>. <p>‘ವರದಿ ಕುರಿತು ಜಿಲ್ಲಾಧಿಕಾರಿ ಕುಮಾರ ಅವರೊಂದಿಗೆ ಚರ್ಚಿಸಿ, ಉದ್ಘಾಟನೆ ನೆರವೇರಿಸಲು ಮನವಿ ಮಾಡಿದ್ದೆ. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಉದ್ಘಾಟನೆ ದಿನಾಂಕ ನಿಗದಿಪಡಿಸಿದ್ದಾರೆ. ₹3 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಭವ್ಯ ಕಟ್ಟಡ ಸಾರ್ವಜನಿಕರ ಬಳಕೆಗೆ ಸಿಗುವಂತಾಗಲಿ’ ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ತಿಳಿಸಿದ್ದಾರೆ.</p>. ಮಂಡ್ಯ: ಅನಾಥ ಸ್ಥಿತಿಯಲ್ಲಿರುವ ‘ಗಾಂಧಿ ಭವನ’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜ.26ರಂದು ಗಾಂಧಿ ಭವನ ಉದ್ಘಾಟನಾ ಸಮಾರಂಭವನ್ನು ಬೆಳಿಗ್ಗೆ 11 ಗಂಟೆಗೆ ಮಂಡ್ಯ ನಗರದ ಬಿ. ಹೊಸೂರು ಕಾಲೊನಿಯಲ್ಲಿ ಹಮ್ಮಿಕೊಳ್ಳಲಾಗಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.</p>.<p>‘ಗಾಂಧಿ ಭವನ’ ನಿರ್ಮಾಣವಾಗಿ ವರ್ಷ ಕಳೆದರೂ ಉದ್ಘಾಟನೆಯಾಗಿಲ್ಲ. ಈ ಭವ್ಯ ಕಟ್ಟಡ ನಿರುಪಯುಕ್ತವಾಗಿದ್ದು, ಅನಾಥ ಸ್ಥಿತಿಯಲ್ಲಿದೆ ಎಂಬ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಸೆ.21ರಂದು ವಿಶೇಷ ವರದಿ ಪ್ರಕಟವಾಗಿತ್ತು. </p>.<p><a href="https://www.prajavani.net/district/mandya/gandhi-bhavan-mandya-abandoned-3546238">ಮಂಡ್ಯ: ಅನಾಥ ಸ್ಥಿತಿಯಲ್ಲಿರುವ ‘ಗಾಂಧಿ ಭವನ’</a></p>. <p>‘ವರದಿ ಕುರಿತು ಜಿಲ್ಲಾಧಿಕಾರಿ ಕುಮಾರ ಅವರೊಂದಿಗೆ ಚರ್ಚಿಸಿ, ಉದ್ಘಾಟನೆ ನೆರವೇರಿಸಲು ಮನವಿ ಮಾಡಿದ್ದೆ. ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಯವರು ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದು ಉದ್ಘಾಟನೆ ದಿನಾಂಕ ನಿಗದಿಪಡಿಸಿದ್ದಾರೆ. ₹3 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಈ ಭವ್ಯ ಕಟ್ಟಡ ಸಾರ್ವಜನಿಕರ ಬಳಕೆಗೆ ಸಿಗುವಂತಾಗಲಿ’ ಎಂದು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ತಿಳಿಸಿದ್ದಾರೆ.</p>. ಮಂಡ್ಯ: ಅನಾಥ ಸ್ಥಿತಿಯಲ್ಲಿರುವ ‘ಗಾಂಧಿ ಭವನ’.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>