<p><strong>ಮಂಡ್ಯ:</strong> ಗಣೇಶ ಮೂರ್ತಿ ವಿಸರ್ಜನೆ ವೇಳೆ ಭಾನುವಾರ ರಾತ್ರಿ ಹಿಂದೂ ಮತ್ತು ಮುಸ್ಲಿಂ ಯುವಕರ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಮದ್ದೂರು ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಘಟನೆಯಲ್ಲಿ ಒಟ್ಟು 8 ಮಂದಿಗೆ ಗಾಯಗಳಾಗಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. </p><p>ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದ 5ನೇ ಕ್ರಾಸ್ನಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯು ಸೂಕ್ತ ಪೊಲೀಸ್ ಬಂದೋಬಸ್ತ್ ನಡುವೆ ಸಾಗುತ್ತಿತ್ತು. ರಾಮ್ ರಹೀಂ ನಗರದ ಮಸೀದಿ ಬಳಿ ಹೋದ ಸಂದರ್ಭ ರಾತ್ರಿ 8 ಗಂಟೆಯಲ್ಲಿ ಕಲ್ಲು ತೂರಾಟ ನಡೆಯಿತು. ಪ್ರತಿಯಾಗಿ ಕೆಲವೇ ತಿಂಗಳ ಹಿಂದೆ ಉದ್ಘಾಟನೆಯಾಗಿದ್ದ ಮಸೀದಿ ಮೇಲೆಯೂ ಕಲ್ಲು ತೂರಾಟವಾಯಿತು. ಆಗ ಎರಡು ಕೋಮುಗಳ ಗುಂಪಿನ ನಡುವೆ ಘರ್ಷಣೆ ಉಂಟಾಗಿ, ತೀವ್ರ ಸ್ವರೂಪ ಪಡೆಯಿತು. </p><p>ಆ ಸಂದರ್ಭ ಎರಡು ಗುಂಪುಗಳ ಮುಖಂಡರು ಅಲ್ಲಿ ಜಮಾಯಿಸಿದರು. ಬಿಜೆಪಿ, ಆರ್.ಎಸ್.ಎಸ್., ಬಜರಂಗದಳ ಕಾರ್ಯಕರ್ತರು ಕೂಡ ಸ್ಥಳಕ್ಕೆ ಧಾವಿಸಿದರು. ಸ್ಥಳದಲ್ಲಿದ್ದ ಪೊಲೀಸರು ಗುಂಪನ್ನು ಚದುರಿಸಿ, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು. </p><p>ಗಣೇಶ ವಿಸರ್ಜನಾ ತಂಡದ ಕೆಲವು ಸದಸ್ಯರು ಪಟ್ಟಣದ ಪೇಟೆ ಬೀದಿಯ ಕೆಮ್ಮಣ್ಣು ನಾಲಾ ವೃತ್ತದ ಬಳಿಯಿರುವ ಮತ್ತೊಂದು ಮಸೀದಿ ಮುಂಭಾಗ ಧರಣಿ ನಡೆಸಿ, ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ ಮೊಳಗಿಸಿದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಪಡೆ, ಪೇಟೆ ಬೀದಿಯ ಎಲ್ಲ ಅಂಗಡಿಗಳ ಬಾಗಿಲು ಮುಚ್ಚಿಸಿದರು. </p>.<p><strong>ಬೂದಿಮುಚ್ಚಿದ ಕೆಂಡ:</strong></p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ದೌಡಾಯಿಸಿ, ಜಿಲ್ಲೆಯ ಇತರೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಮದ್ದೂರು ಪಟ್ಟಣಕ್ಕೆ ಕರೆಸಿಕೊಂಡು ಬಂದೋಬಸ್ತ್ ಅನ್ನು ಬಿಗಿಗೊಳಿಸಿದರು. ಪೊಲೀಸ್ ಅಧಿಕಾರಿಗಳು ಎರಡು ಕೋಮಿನವರೊಂದಿಗೆ ಸಮಾಲೋಚಿಸಿ, ಸಮಾಧಾನಪಡಿಸಲು ಯತ್ನಿಸಿದರು. ಸದ್ಯಕ್ಕೆ ಪರಿಸ್ಥಿತಿ ತಹಬದಿಗೆ ಬಂದಿದ್ದರೂ, ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದೆ.</p><p>ಕಳೆದ ವರ್ಷ ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಸೀದಿ ಬಳಿಯೇ ಕಲ್ಲುತೂರಾಟ ನಡೆದು, ಹತ್ತಾರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಗಲಭೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಗಣೇಶ ಮೂರ್ತಿ ವಿಸರ್ಜನೆ ವೇಳೆ ಭಾನುವಾರ ರಾತ್ರಿ ಹಿಂದೂ ಮತ್ತು ಮುಸ್ಲಿಂ ಯುವಕರ ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದ್ದು, ಮದ್ದೂರು ಪಟ್ಟಣದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಘಟನೆಯಲ್ಲಿ ಒಟ್ಟು 8 ಮಂದಿಗೆ ಗಾಯಗಳಾಗಿದ್ದು, ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. </p><p>ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದ 5ನೇ ಕ್ರಾಸ್ನಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯು ಸೂಕ್ತ ಪೊಲೀಸ್ ಬಂದೋಬಸ್ತ್ ನಡುವೆ ಸಾಗುತ್ತಿತ್ತು. ರಾಮ್ ರಹೀಂ ನಗರದ ಮಸೀದಿ ಬಳಿ ಹೋದ ಸಂದರ್ಭ ರಾತ್ರಿ 8 ಗಂಟೆಯಲ್ಲಿ ಕಲ್ಲು ತೂರಾಟ ನಡೆಯಿತು. ಪ್ರತಿಯಾಗಿ ಕೆಲವೇ ತಿಂಗಳ ಹಿಂದೆ ಉದ್ಘಾಟನೆಯಾಗಿದ್ದ ಮಸೀದಿ ಮೇಲೆಯೂ ಕಲ್ಲು ತೂರಾಟವಾಯಿತು. ಆಗ ಎರಡು ಕೋಮುಗಳ ಗುಂಪಿನ ನಡುವೆ ಘರ್ಷಣೆ ಉಂಟಾಗಿ, ತೀವ್ರ ಸ್ವರೂಪ ಪಡೆಯಿತು. </p><p>ಆ ಸಂದರ್ಭ ಎರಡು ಗುಂಪುಗಳ ಮುಖಂಡರು ಅಲ್ಲಿ ಜಮಾಯಿಸಿದರು. ಬಿಜೆಪಿ, ಆರ್.ಎಸ್.ಎಸ್., ಬಜರಂಗದಳ ಕಾರ್ಯಕರ್ತರು ಕೂಡ ಸ್ಥಳಕ್ಕೆ ಧಾವಿಸಿದರು. ಸ್ಥಳದಲ್ಲಿದ್ದ ಪೊಲೀಸರು ಗುಂಪನ್ನು ಚದುರಿಸಿ, ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು. </p><p>ಗಣೇಶ ವಿಸರ್ಜನಾ ತಂಡದ ಕೆಲವು ಸದಸ್ಯರು ಪಟ್ಟಣದ ಪೇಟೆ ಬೀದಿಯ ಕೆಮ್ಮಣ್ಣು ನಾಲಾ ವೃತ್ತದ ಬಳಿಯಿರುವ ಮತ್ತೊಂದು ಮಸೀದಿ ಮುಂಭಾಗ ಧರಣಿ ನಡೆಸಿ, ನ್ಯಾಯಕ್ಕಾಗಿ ಆಗ್ರಹಿಸಿ ಘೋಷಣೆ ಮೊಳಗಿಸಿದರು. ಸ್ಥಳಕ್ಕೆ ದೌಡಾಯಿಸಿದ ಪೊಲೀಸ್ ಪಡೆ, ಪೇಟೆ ಬೀದಿಯ ಎಲ್ಲ ಅಂಗಡಿಗಳ ಬಾಗಿಲು ಮುಚ್ಚಿಸಿದರು. </p>.<p><strong>ಬೂದಿಮುಚ್ಚಿದ ಕೆಂಡ:</strong></p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಸ್ಥಳಕ್ಕೆ ದೌಡಾಯಿಸಿ, ಜಿಲ್ಲೆಯ ಇತರೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ಮದ್ದೂರು ಪಟ್ಟಣಕ್ಕೆ ಕರೆಸಿಕೊಂಡು ಬಂದೋಬಸ್ತ್ ಅನ್ನು ಬಿಗಿಗೊಳಿಸಿದರು. ಪೊಲೀಸ್ ಅಧಿಕಾರಿಗಳು ಎರಡು ಕೋಮಿನವರೊಂದಿಗೆ ಸಮಾಲೋಚಿಸಿ, ಸಮಾಧಾನಪಡಿಸಲು ಯತ್ನಿಸಿದರು. ಸದ್ಯಕ್ಕೆ ಪರಿಸ್ಥಿತಿ ತಹಬದಿಗೆ ಬಂದಿದ್ದರೂ, ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದೆ.</p><p>ಕಳೆದ ವರ್ಷ ನಾಗಮಂಗಲ ಪಟ್ಟಣದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಸೀದಿ ಬಳಿಯೇ ಕಲ್ಲುತೂರಾಟ ನಡೆದು, ಹತ್ತಾರು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿತ್ತು. ಈ ಗಲಭೆಯಿಂದ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>