<p>ಮಂಡ್ಯ: ‘ಸಾರ್ವಜನಿಕ ದಾಖಲೆಗಳನ್ನು ನಿರ್ವಹಣೆ ಮತ್ತು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದೆ. ಸಾರ್ವಜನಿಕರಿಗೆ ಅವಶ್ಯವಾದ ದಾಖಲೆಗಳನ್ನು ಸರಿಯಾದ ಸಮಯದಲ್ಲಿ ನೀಡುವುದು ಅಧಿಕಾರಿಗಳ ಜವಾಬ್ದಾರಿ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಹೇಳಿದರು.</p>.<p>ಜಿಲ್ಲಾಧಿಕಾರಿ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಪತ್ರಾಗಾರ ಮತ್ತು ಗ್ಯಾಸೆಟಿಯರ್ ಇಲಾಖೆಯ ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಾರ್ವಜನಿಕ ದಾಖಲೆಗಳ ಅಧಿನಿಯಮ ಮತ್ತು ದಾಖಲೆಗಳ ನಿರ್ವಹಣೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ದಾಖಲೆಗಳು ಕೇವಲ ಕಾಗದಗಳಲ್ಲ, ಅವುಗಳು ಇತಿಹಾಸ ಮತ್ತು ಆಡಳಿತದ ಸಾಕ್ಷ್ಯಗಳಾಗಿದ್ದು, ದಾಖಲೆಗಳನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಜವಾಬ್ದಾರಿ. ಪ್ರಸ್ತುತ ದಿನಗಳಲ್ಲಿ ಎಲ್ಲ ದಾಖಲೆಗಳು ಡಿಜಿಟಲೀಕರಣಗೊಳ್ಳುತ್ತಿರುವುದರಿಂದ ಹಳೆಯ ದಾಖಲೆಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಈಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದರು.</p>.<p>ಕರ್ನಾಟಕ ರಾಜ್ಯ ಪತ್ರಗಾರ ಮತ್ತು ಗ್ಯಾಸೆಟಿಯರ್ ಇಲಾಖೆ ನಿರ್ದೇಶಕ ಗವಿಸಿದ್ದಯ್ಯ ಮಾತನಾಡಿ, ‘ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಾಗಾರದಲ್ಲಿ ಪಾಲ್ಗೊಂಡು ದಾಖಲೆಗಳ ಸಂರಕ್ಷಣೆಯಲ್ಲಿ ಎದುರಿಸುತ್ತಿರುವ ತಾಂತ್ರಿಕ ಸವಾಲುಗಳ ಕಾರ್ಯಾಗಾರದ ಉದ್ದೇಶ ಮತ್ತು ಇದರಿಂದ ಸರ್ಕಾರಿ ಕಚೇರಿಗಳಲ್ಲಿ ಆಗುವ ಸುಧಾರಣೆಗಳ ಬಗ್ಗೆ ಬೆಳಕು ಚೆಲ್ಲಿದರು. ಡಿಜಿಟಲೀಕರಣದ ಈ ಕಾಲದಲ್ಲಿ ಹಳೆಯ ದಾಖಲೆಗಳನ್ನು ಹೇಗೆ ಸಂರಕ್ಷಿಸಬೇಕು ಎಂದು ಮಾಹಿತಿ ನೀಡಿದರು.</p>.<p>ಮೈಸೂರು ವಿಭಾಗೀಯ ಪತ್ರಾಗಾರ ಕಛೇರಿ ಉಪನಿರ್ದೇಶಕ ಮಂಜುನಾಥ್ ಎಚ್.ಎಲ್, ಜಂಟಿ ನಿರ್ದೇಶಕ ನೆಲ್ಕುದ್ರಿ ಸದಾನಂದಪ್ಪ, ತಹಶೀಲ್ದಾರ್ಗಳಾದ ವಿಶ್ವನಾಥ್, ಚೇತನಾ ಯಾದವ್, ಲೋಕೇಶ್, ಅಶೋಕ್, ಪರಶುರಾಮ್ ಸತ್ತಿಗೇರಿ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಧನುಷ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-40-1485328755</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಸಾರ್ವಜನಿಕ ದಾಖಲೆಗಳನ್ನು ನಿರ್ವಹಣೆ ಮತ್ತು ಸಂರಕ್ಷಣೆ ಮಾಡುವುದು ಅತ್ಯಗತ್ಯವಾಗಿದೆ. ಸಾರ್ವಜನಿಕರಿಗೆ ಅವಶ್ಯವಾದ ದಾಖಲೆಗಳನ್ನು ಸರಿಯಾದ ಸಮಯದಲ್ಲಿ ನೀಡುವುದು ಅಧಿಕಾರಿಗಳ ಜವಾಬ್ದಾರಿ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಹೇಳಿದರು.</p>.<p>ಜಿಲ್ಲಾಧಿಕಾರಿ ಕಾರ್ಯಾಲಯ ಹಾಗೂ ಕರ್ನಾಟಕ ರಾಜ್ಯ ಪತ್ರಾಗಾರ ಮತ್ತು ಗ್ಯಾಸೆಟಿಯರ್ ಇಲಾಖೆಯ ಮೈಸೂರು ವಿಭಾಗೀಯ ಪತ್ರಾಗಾರ ಕಚೇರಿ ಸಹಯೋಗದೊಂದಿಗೆ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಾರ್ವಜನಿಕ ದಾಖಲೆಗಳ ಅಧಿನಿಯಮ ಮತ್ತು ದಾಖಲೆಗಳ ನಿರ್ವಹಣೆ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ದಾಖಲೆಗಳು ಕೇವಲ ಕಾಗದಗಳಲ್ಲ, ಅವುಗಳು ಇತಿಹಾಸ ಮತ್ತು ಆಡಳಿತದ ಸಾಕ್ಷ್ಯಗಳಾಗಿದ್ದು, ದಾಖಲೆಗಳನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಪ್ರತಿಯೊಬ್ಬ ಸರ್ಕಾರಿ ನೌಕರನ ಜವಾಬ್ದಾರಿ. ಪ್ರಸ್ತುತ ದಿನಗಳಲ್ಲಿ ಎಲ್ಲ ದಾಖಲೆಗಳು ಡಿಜಿಟಲೀಕರಣಗೊಳ್ಳುತ್ತಿರುವುದರಿಂದ ಹಳೆಯ ದಾಖಲೆಗಳನ್ನು ರಕ್ಷಣೆ ಮಾಡುವ ನಿಟ್ಟಿನಲ್ಲಿ ಈಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದರು.</p>.<p>ಕರ್ನಾಟಕ ರಾಜ್ಯ ಪತ್ರಗಾರ ಮತ್ತು ಗ್ಯಾಸೆಟಿಯರ್ ಇಲಾಖೆ ನಿರ್ದೇಶಕ ಗವಿಸಿದ್ದಯ್ಯ ಮಾತನಾಡಿ, ‘ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಈ ಕಾರ್ಯಾಗಾರದಲ್ಲಿ ಪಾಲ್ಗೊಂಡು ದಾಖಲೆಗಳ ಸಂರಕ್ಷಣೆಯಲ್ಲಿ ಎದುರಿಸುತ್ತಿರುವ ತಾಂತ್ರಿಕ ಸವಾಲುಗಳ ಕಾರ್ಯಾಗಾರದ ಉದ್ದೇಶ ಮತ್ತು ಇದರಿಂದ ಸರ್ಕಾರಿ ಕಚೇರಿಗಳಲ್ಲಿ ಆಗುವ ಸುಧಾರಣೆಗಳ ಬಗ್ಗೆ ಬೆಳಕು ಚೆಲ್ಲಿದರು. ಡಿಜಿಟಲೀಕರಣದ ಈ ಕಾಲದಲ್ಲಿ ಹಳೆಯ ದಾಖಲೆಗಳನ್ನು ಹೇಗೆ ಸಂರಕ್ಷಿಸಬೇಕು ಎಂದು ಮಾಹಿತಿ ನೀಡಿದರು.</p>.<p>ಮೈಸೂರು ವಿಭಾಗೀಯ ಪತ್ರಾಗಾರ ಕಛೇರಿ ಉಪನಿರ್ದೇಶಕ ಮಂಜುನಾಥ್ ಎಚ್.ಎಲ್, ಜಂಟಿ ನಿರ್ದೇಶಕ ನೆಲ್ಕುದ್ರಿ ಸದಾನಂದಪ್ಪ, ತಹಶೀಲ್ದಾರ್ಗಳಾದ ವಿಶ್ವನಾಥ್, ಚೇತನಾ ಯಾದವ್, ಲೋಕೇಶ್, ಅಶೋಕ್, ಪರಶುರಾಮ್ ಸತ್ತಿಗೇರಿ, ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಧನುಷ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-40-1485328755</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>