<p><strong>ಮಂಡ್ಯ:</strong> ಮಕಾನ್ಗೆ ಬದಲಾವಣೆ ಮಾಡಿರುವ ತಾಲ್ಲೂಕಿನ ಹೊಸಬೂದನೂರು ಗ್ರಾಮದ ಸ.ನಂ.313ರ ಜಾಗವನ್ನು ಹಿಂದಿನಂತೆಯೇ ಗ್ರಾಮದ ಸ್ಮಶಾನಕ್ಕಾಗಿಯೇ ಮೀಸಲಿಡುವಂತೆ ಆಗ್ರಹಿಸಿ ಗ್ರಾಮಸ್ಥರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಗ್ರಾಮದಲ್ಲಿ ಸ.ನಂ.313ರ ಜಾಗವು ಈ ಹಿಂದೆ ಸರ್ಕಾರಿ ಸ್ಮಶಾನವಾಗಿದ್ದು, ನಂತರ 2017ರಲ್ಲಿ ಮಕಾನ್ ಆಗಿ ಬದಲಾವಣೆಯಾಗಿರುತ್ತದೆ. ಗ್ರಾಮಸ್ಥರು ಹೋರಾಟ ಮಾಡಿದ ನಂತರ ಜಿಲ್ಲಾಡಳಿತ ಆರ್ಟಿಸಿಯನ್ನು ಸರ್ಕಾರಿ ಕಟ್ಟೆಯನ್ನಾಗಿ ಇಂಡೀಕರಿಸಿದೆ. ಅಲ್ಲಿಂದ ಇಲ್ಲಿಯವರೆಗೂ ಗ್ರಾಮಸ್ಥರು ಅದೇ ಜಾಗದಲ್ಲಿ ಶವ ಸಂಸ್ಕಾರ ಮಾಡುತ್ತಿದ್ದಾರೆ ಎಂದರು. </p>.<p>ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕೆಂಪೇಗೌಡ, ಕನ್ನಡ ಸೇನೆ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಮಹಂತಪ್ಪ, ಕುಮಾರ್, ರಂಗಣ್ಣ, ಪುಟ್ಟರಾಜು, ಲಕ್ಷ್ಮಣ, ಜಯರಾಮ, ರಮೇಶ, ಧನಂಜಯ, ಚಿಕ್ಕಸ್ವಾಮಿ, ಬೋರಪ್ಪ, ಶಿವಲಿಂಗಯ್ಯ, ಶಂಕರ, ನಾಗೇಂದ್ರ, ಅಭಿಷೇಕ್, ಬಸವರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಮಕಾನ್ಗೆ ಬದಲಾವಣೆ ಮಾಡಿರುವ ತಾಲ್ಲೂಕಿನ ಹೊಸಬೂದನೂರು ಗ್ರಾಮದ ಸ.ನಂ.313ರ ಜಾಗವನ್ನು ಹಿಂದಿನಂತೆಯೇ ಗ್ರಾಮದ ಸ್ಮಶಾನಕ್ಕಾಗಿಯೇ ಮೀಸಲಿಡುವಂತೆ ಆಗ್ರಹಿಸಿ ಗ್ರಾಮಸ್ಥರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾವಣೆಗೊಂಡ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಗ್ರಾಮದಲ್ಲಿ ಸ.ನಂ.313ರ ಜಾಗವು ಈ ಹಿಂದೆ ಸರ್ಕಾರಿ ಸ್ಮಶಾನವಾಗಿದ್ದು, ನಂತರ 2017ರಲ್ಲಿ ಮಕಾನ್ ಆಗಿ ಬದಲಾವಣೆಯಾಗಿರುತ್ತದೆ. ಗ್ರಾಮಸ್ಥರು ಹೋರಾಟ ಮಾಡಿದ ನಂತರ ಜಿಲ್ಲಾಡಳಿತ ಆರ್ಟಿಸಿಯನ್ನು ಸರ್ಕಾರಿ ಕಟ್ಟೆಯನ್ನಾಗಿ ಇಂಡೀಕರಿಸಿದೆ. ಅಲ್ಲಿಂದ ಇಲ್ಲಿಯವರೆಗೂ ಗ್ರಾಮಸ್ಥರು ಅದೇ ಜಾಗದಲ್ಲಿ ಶವ ಸಂಸ್ಕಾರ ಮಾಡುತ್ತಿದ್ದಾರೆ ಎಂದರು. </p>.<p>ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಕೆಂಪೇಗೌಡ, ಕನ್ನಡ ಸೇನೆ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಮಹಂತಪ್ಪ, ಕುಮಾರ್, ರಂಗಣ್ಣ, ಪುಟ್ಟರಾಜು, ಲಕ್ಷ್ಮಣ, ಜಯರಾಮ, ರಮೇಶ, ಧನಂಜಯ, ಚಿಕ್ಕಸ್ವಾಮಿ, ಬೋರಪ್ಪ, ಶಿವಲಿಂಗಯ್ಯ, ಶಂಕರ, ನಾಗೇಂದ್ರ, ಅಭಿಷೇಕ್, ಬಸವರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>