<p><strong>ಮಂಡ್ಯ:</strong> ತಾಲ್ಲೂಕಿನ ಹಾಡ್ಯ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಒತ್ತಾಯಿಸಿ ಶವವಿಟ್ಟು 24 ಗಂಟೆ ಪ್ರತಿಭಟನೆ ನಡೆಸಲಾಯಿತು. ಅಧಿಕಾರಿಗಳ ಭರವಸೆ ಹಾಗೂ ಮನವೊಲಿಕೆ ಮೇರೆಗೆ ಪ್ರತಿಭಟನೆ ಕೈಬಿಟ್ಟು, ಶನಿವಾರ ಅಂತ್ಯಸಂಸ್ಕಾರ ನೆರವೇರಿತು.</p>.<p>ಗ್ರಾಮದ ಪೌರಕಾರ್ಮಿಕ ಕುಪ್ಪಯ್ಯ(70) ಎಂಬುವವರು ಶುಕ್ರವಾರ ಸಂಜೆ ಮೃತಪಟ್ಟಿದ್ದರು. ಆದರೆ ಅಂತ್ಯಸಂಸ್ಕಾರ ಮಾಡಲು ಜಾಗವಿಲ್ಲದ ಕಾರಣ ಹುಳ್ಳೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶವ ಇಟ್ಟು ಪ್ರತಿಭಟನೆ ನಡೆಸಿದರು.</p>.<p>ಹಲವು ಬಾರಿ ಮನವಿ ಮಾಡಿದರೂ ಕ್ರಮವಹಿಸದ ಜನಪ್ರತಿನಿಧಿಗಳು, ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ತಹಸೀಲ್ದಾರ್ ವಿಶ್ವನಾಥ್ ಭೇಟಿ ನೀಡಿ ಮನವೊಲಿಸಲು ಯತ್ನಿಸಿದರಾದರೂ ಸಫಲವಾಗಲಿಲ್ಲ.</p>.<p>ಸ್ಮಶಾನ ಜಾಗ ಗುರುತಿಸಿಕೊಡುವವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಹೇಳಿ ಶವವನ್ನು ಹಾಡ್ಯ ಗ್ರಾಮಕ್ಕೆ ವಾಪಸ್ ತೆಗೆದುಕೊಂಡು ಹೋಗಲಾಯಿತು. ಅಲ್ಲಿಯೂ ಮನೆ ಎದುರೇ ಶವ ಇಟ್ಟು ಪ್ರತಿಭಟನೆ ಮುಂದುವರಿಸಲಾಯಿತು.</p>.<p>‘ಸ್ಮಶಾನಕ್ಕೆ ಸ್ಥಳವಿಲ್ಲದ ಕಾರಣ ಖಾಸಗಿ ವ್ಯಕ್ತಿಯ ಜಾಗದಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. ಪೌರಕಾರ್ಮಿಕ ಕುಪ್ಪಯ್ಯ ಕುಟುಂಬ ಗುಡಿಸಲಿನಲ್ಲಿ ವಾಸುತ್ತಿದ್ದು, ಆಶ್ರಯ ಯೋಜನೆಯಡಿ ಮನೆ ನೀಡುವಂತೆ ಹಲವು ಬಾರಿ ಅರ್ಜಿ ಸಲ್ಲಿಸಿದ್ದರೂ ಮನೆ ನೀಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರಾದ ಬೆಟ್ಟಸ್ವಾಮಿ, ಶಿವಕುಮಾರ್, ಮಂಚೇಗೌಡ, ಪೌರಕಾರ್ಮಿಕರಾದ ರಾಜು, ಮುರುಗೇಶ, ವಿಜಯ್ಕುಮಾರ್, ಗಣೇಶ್, ಚೆಲುವ ಹಾಗೂ ಕುಪ್ಪಯ್ಯ ಕುಟುಂಬಸ್ಥರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-40-829686927</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ತಾಲ್ಲೂಕಿನ ಹಾಡ್ಯ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಒತ್ತಾಯಿಸಿ ಶವವಿಟ್ಟು 24 ಗಂಟೆ ಪ್ರತಿಭಟನೆ ನಡೆಸಲಾಯಿತು. ಅಧಿಕಾರಿಗಳ ಭರವಸೆ ಹಾಗೂ ಮನವೊಲಿಕೆ ಮೇರೆಗೆ ಪ್ರತಿಭಟನೆ ಕೈಬಿಟ್ಟು, ಶನಿವಾರ ಅಂತ್ಯಸಂಸ್ಕಾರ ನೆರವೇರಿತು.</p>.<p>ಗ್ರಾಮದ ಪೌರಕಾರ್ಮಿಕ ಕುಪ್ಪಯ್ಯ(70) ಎಂಬುವವರು ಶುಕ್ರವಾರ ಸಂಜೆ ಮೃತಪಟ್ಟಿದ್ದರು. ಆದರೆ ಅಂತ್ಯಸಂಸ್ಕಾರ ಮಾಡಲು ಜಾಗವಿಲ್ಲದ ಕಾರಣ ಹುಳ್ಳೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಎದುರು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಶವ ಇಟ್ಟು ಪ್ರತಿಭಟನೆ ನಡೆಸಿದರು.</p>.<p>ಹಲವು ಬಾರಿ ಮನವಿ ಮಾಡಿದರೂ ಕ್ರಮವಹಿಸದ ಜನಪ್ರತಿನಿಧಿಗಳು, ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ತಹಸೀಲ್ದಾರ್ ವಿಶ್ವನಾಥ್ ಭೇಟಿ ನೀಡಿ ಮನವೊಲಿಸಲು ಯತ್ನಿಸಿದರಾದರೂ ಸಫಲವಾಗಲಿಲ್ಲ.</p>.<p>ಸ್ಮಶಾನ ಜಾಗ ಗುರುತಿಸಿಕೊಡುವವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಹೇಳಿ ಶವವನ್ನು ಹಾಡ್ಯ ಗ್ರಾಮಕ್ಕೆ ವಾಪಸ್ ತೆಗೆದುಕೊಂಡು ಹೋಗಲಾಯಿತು. ಅಲ್ಲಿಯೂ ಮನೆ ಎದುರೇ ಶವ ಇಟ್ಟು ಪ್ರತಿಭಟನೆ ಮುಂದುವರಿಸಲಾಯಿತು.</p>.<p>‘ಸ್ಮಶಾನಕ್ಕೆ ಸ್ಥಳವಿಲ್ಲದ ಕಾರಣ ಖಾಸಗಿ ವ್ಯಕ್ತಿಯ ಜಾಗದಲ್ಲಿ ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲಾಗುತ್ತಿದೆ. ಪೌರಕಾರ್ಮಿಕ ಕುಪ್ಪಯ್ಯ ಕುಟುಂಬ ಗುಡಿಸಲಿನಲ್ಲಿ ವಾಸುತ್ತಿದ್ದು, ಆಶ್ರಯ ಯೋಜನೆಯಡಿ ಮನೆ ನೀಡುವಂತೆ ಹಲವು ಬಾರಿ ಅರ್ಜಿ ಸಲ್ಲಿಸಿದ್ದರೂ ಮನೆ ನೀಡಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡರಾದ ಬೆಟ್ಟಸ್ವಾಮಿ, ಶಿವಕುಮಾರ್, ಮಂಚೇಗೌಡ, ಪೌರಕಾರ್ಮಿಕರಾದ ರಾಜು, ಮುರುಗೇಶ, ವಿಜಯ್ಕುಮಾರ್, ಗಣೇಶ್, ಚೆಲುವ ಹಾಗೂ ಕುಪ್ಪಯ್ಯ ಕುಟುಂಬಸ್ಥರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-40-829686927</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>