<p>ಹಲಗೂರು: ನಿಮ್ಮ ಸುತ್ತ ಮಾದಕ ವಸ್ತು ಸೇವನೆ, ಸಾಗಣೆ ಮತ್ತು ಮಾದಕ ವಸ್ತು ಕೃಷಿ ಬಗ್ಗೆ ಮಾಹಿತಿ ದೊರೆತರೆ ಪೊಲೀಸ್ ಠಾಣೆಗೆ ಮಾಹಿತಿ ಕೊಡಿ ಎಂದು ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್. ಶ್ರೀಧರ್ ಮನವಿ ಮಾಡಿದರು.</p>.<p>ಬಾಳೆಹೊನ್ನಿಗ ಗ್ರಾಮದಲ್ಲಿ ಬುಧವಾರ ಬಸವೇಶ್ವರ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ 'ಮಾದಕ ದ್ರವ್ಯ ಮುಕ್ತ ಕರ್ನಾಟಕ' ಮತ್ರು 'ಕೌಟುಂಬಿಕ ದೌರ್ಜನ್ಯ ತಡೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಾಜ್ಯವನ್ನು ಮಾದಕ ದ್ರವ್ಯ ಮುಕ್ತವನ್ನಾಗಿಸಲು ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಕೆಎಸ್ಪಿ ಆ್ಯಪ್ ಇದ್ದು, ಪ್ಲೇ ಸ್ಟೋರ್ ಮೂಲಕ ಅ್ಯಪ್ ಡೌನ್ಲೋಡ್ ಮಾಡಿ ಅನ್ಲೈನ್ ಮೂಲಕ ಇಲಾಖೆಗೆ ಮಾಹಿತಿ ನೀಡಬಹುದು. ದೂರುದಾರರ ಬಗ್ಗೆ ಮಾಹಿತಿ ಗೋಪ್ಯವಾಗಿ ಇರಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಪಿಎಸ್ಐ ಲೋಕೇಶ್ ಮಾತನಾಡಿ, ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ತಡೆಗಟ್ಟಲು ಕಾನೂನಿನಲ್ಲಿ ಅವಕಾಶ ಕಲ್ಪಿಸಿದೆ. ವರದಕ್ಷಿಣೆ ಪ್ರಕರಣದ ದೂರಿನಲ್ಲೂ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.</p>.<p>ಪ್ರೊಬೇಷನರಿ ಪಿಎಸ್ಐಗಳಾದ ಜಯಂತ್, ಸುನೀಲ್, ಗ್ರಾಮದ ಮುಖಂಡರಾದ ಬಿ.ವಿ.ಪ್ರಕಾಶ್, ನಾಗರಾಜು, ಸಿಬ್ಬಂದಿ ರಫೀಕ್ ನದಾಫ್, ಮೋಹನ್, ಶಿವರಾಜು, ಕಾಮೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-40-243474239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಲಗೂರು: ನಿಮ್ಮ ಸುತ್ತ ಮಾದಕ ವಸ್ತು ಸೇವನೆ, ಸಾಗಣೆ ಮತ್ತು ಮಾದಕ ವಸ್ತು ಕೃಷಿ ಬಗ್ಗೆ ಮಾಹಿತಿ ದೊರೆತರೆ ಪೊಲೀಸ್ ಠಾಣೆಗೆ ಮಾಹಿತಿ ಕೊಡಿ ಎಂದು ಹಲಗೂರು ಸರ್ಕಲ್ ಇನ್ಸ್ಪೆಕ್ಟರ್ ಬಿ.ಎಸ್. ಶ್ರೀಧರ್ ಮನವಿ ಮಾಡಿದರು.</p>.<p>ಬಾಳೆಹೊನ್ನಿಗ ಗ್ರಾಮದಲ್ಲಿ ಬುಧವಾರ ಬಸವೇಶ್ವರ ದೇವಾಲಯದ ಆವರಣದಲ್ಲಿ ಆಯೋಜಿಸಿದ್ದ 'ಮಾದಕ ದ್ರವ್ಯ ಮುಕ್ತ ಕರ್ನಾಟಕ' ಮತ್ರು 'ಕೌಟುಂಬಿಕ ದೌರ್ಜನ್ಯ ತಡೆ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಾಜ್ಯವನ್ನು ಮಾದಕ ದ್ರವ್ಯ ಮುಕ್ತವನ್ನಾಗಿಸಲು ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಕೆಎಸ್ಪಿ ಆ್ಯಪ್ ಇದ್ದು, ಪ್ಲೇ ಸ್ಟೋರ್ ಮೂಲಕ ಅ್ಯಪ್ ಡೌನ್ಲೋಡ್ ಮಾಡಿ ಅನ್ಲೈನ್ ಮೂಲಕ ಇಲಾಖೆಗೆ ಮಾಹಿತಿ ನೀಡಬಹುದು. ದೂರುದಾರರ ಬಗ್ಗೆ ಮಾಹಿತಿ ಗೋಪ್ಯವಾಗಿ ಇರಿಸಲಾಗುತ್ತದೆ ಎಂದು ತಿಳಿಸಿದರು.</p>.<p>ಪಿಎಸ್ಐ ಲೋಕೇಶ್ ಮಾತನಾಡಿ, ಮಹಿಳೆಯರ ಮೇಲಿನ ಕೌಟುಂಬಿಕ ದೌರ್ಜನ್ಯ ತಡೆಗಟ್ಟಲು ಕಾನೂನಿನಲ್ಲಿ ಅವಕಾಶ ಕಲ್ಪಿಸಿದೆ. ವರದಕ್ಷಿಣೆ ಪ್ರಕರಣದ ದೂರಿನಲ್ಲೂ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.</p>.<p>ಪ್ರೊಬೇಷನರಿ ಪಿಎಸ್ಐಗಳಾದ ಜಯಂತ್, ಸುನೀಲ್, ಗ್ರಾಮದ ಮುಖಂಡರಾದ ಬಿ.ವಿ.ಪ್ರಕಾಶ್, ನಾಗರಾಜು, ಸಿಬ್ಬಂದಿ ರಫೀಕ್ ನದಾಫ್, ಮೋಹನ್, ಶಿವರಾಜು, ಕಾಮೇಶ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-40-243474239</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>