ಬಿಡದ ಸುರಿಯುತ್ತಿರುವ ಮಳೆ, ಹೇಮಾವತಿ ನದಿ ಉಕ್ಕಿ ಹರಿಯುತ್ತಿರುವುದರಿಂದ ಗೊರೂರು ಅಣೆಕಟ್ಟಿನಿಂದ 50ರಿಂದ 60ಸಾವಿರ ಕ್ಯುಸೆಕ್ಗೂ ಅಧಿಕ ನೀರು ಹೊರಬಿಡುವ ಸೂಚನೆ ಇದೆ. ಈ ಕುರಿತು ಈಗಾಗಲೇ ಇಲಾಖೆಯಿಂದ ನದಿಪಾತ್ರದ ಗ್ರಾಮಗಳಿಗೆ ತೆರಳಿ ಟಾಂಟಾಂ ಹೊಡಿಸಲಾಗಿದೆ. ನದಿಗೆ ಇಳಿಯುವುದು, ಬಟ್ಟೆ ಒಗೆಯುವುದು, ಪಾತ್ರೆ ತೊಳೆಯುವುದು, ಜಾನುವಾರುಗಳಿಗೆ ನೀರು ಕುಡಿಸು
ವುದು, ಈಜುವಂತಹ ದುಸ್ಸಾಹ ಸಕ್ಕೆ ಮುಂದಾಗಬಾರದು ಎಂದು ಮನವಿ ಮಾಡಿದರು.