<p>ಮಂಡ್ಯ: ಮಹಿಳಾ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಕಾವೇರಿ ಗೆಳತಿಯರ ಬಳಗ ಹಾಗೂ ಇಂದಿರಾ ಯುವತಿ ಬಳಗದ ಸಹಯೋಗಲ್ಲಿ ಮಂಗಳವಾರ ಕ್ರೀಡಾಕೂಟ ನಡೆಯಿತು.</p>.<p>ಕ್ರೀಡಾ ಸ್ಪರ್ಧೆಗೆ ಚಾಲನೆ ನೀಡಿದ ರೈತ ಮಹಿಳೆ ಲತಾ ಶಂಕರ್, ‘ಗ್ರಾಮೀಣ ಭಾಗದ ಮಹಿಳೆಯರು ಕೃಷಿ ಕಾಯಕದಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ. ಅವರಿಗೂ ಸ್ವಲ್ಪ ಮನರಂಜನೆ ಸಿಗಬೇಕೆನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಷಯ’ ಎಂದರು.</p>.<p>ಮುಖ್ಯ ಶಿಕ್ಷಕಿ ಭಾಗ್ಯಮ್ಮ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಕ್ರೀಡಾಕೂಟ ಆಯೋಜಿಸಿರುವುದು ಉತ್ತಮ ಕೆಲಸವಾಗಿದೆ. ಇಂತಹ ಹಲವು ಕಾರ್ಯಕ್ರಮಗಳನ್ನು ಮಹಿಳೆಯರಿಗಾಗಿ ಆಯೋಜಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಹೆಚ್ಚಾಗಿ ನಡೆಯಬೇಕು’ ಎಂದು ಸಲಹೆ ನೀಡಿದರು.</p>.<p>ಕಾವೇರಿ ಗೆಳತಿಯರ ಬಳಗದ ಅಧ್ಯಕ್ಷೆ ನಿಂಗರಾಜಮ್ಮ, ಹೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯಾ ಚೇತನ್, ಕಾರ್ಯದರ್ಶಿ ಸದಾಶಿವಮೂರ್ತಿ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಸಾವಿತ್ರಮ್ಮ, ಮಾಜಿ ಅಧ್ಯಕ್ಷರಾದ ಪದ್ಮ, ನಿರುಪಮಾ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-40-414338183</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಮಹಿಳಾ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಕಾವೇರಿ ಗೆಳತಿಯರ ಬಳಗ ಹಾಗೂ ಇಂದಿರಾ ಯುವತಿ ಬಳಗದ ಸಹಯೋಗಲ್ಲಿ ಮಂಗಳವಾರ ಕ್ರೀಡಾಕೂಟ ನಡೆಯಿತು.</p>.<p>ಕ್ರೀಡಾ ಸ್ಪರ್ಧೆಗೆ ಚಾಲನೆ ನೀಡಿದ ರೈತ ಮಹಿಳೆ ಲತಾ ಶಂಕರ್, ‘ಗ್ರಾಮೀಣ ಭಾಗದ ಮಹಿಳೆಯರು ಕೃಷಿ ಕಾಯಕದಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ. ಅವರಿಗೂ ಸ್ವಲ್ಪ ಮನರಂಜನೆ ಸಿಗಬೇಕೆನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ ವಿಷಯ’ ಎಂದರು.</p>.<p>ಮುಖ್ಯ ಶಿಕ್ಷಕಿ ಭಾಗ್ಯಮ್ಮ ಮಾತನಾಡಿ, ‘ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಕ್ರೀಡಾಕೂಟ ಆಯೋಜಿಸಿರುವುದು ಉತ್ತಮ ಕೆಲಸವಾಗಿದೆ. ಇಂತಹ ಹಲವು ಕಾರ್ಯಕ್ರಮಗಳನ್ನು ಮಹಿಳೆಯರಿಗಾಗಿ ಆಯೋಜಿಸಿ ಅವರನ್ನು ಪ್ರೋತ್ಸಾಹಿಸುವ ಕೆಲಸ ಹೆಚ್ಚಾಗಿ ನಡೆಯಬೇಕು’ ಎಂದು ಸಲಹೆ ನೀಡಿದರು.</p>.<p>ಕಾವೇರಿ ಗೆಳತಿಯರ ಬಳಗದ ಅಧ್ಯಕ್ಷೆ ನಿಂಗರಾಜಮ್ಮ, ಹೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಮ್ಯಾ ಚೇತನ್, ಕಾರ್ಯದರ್ಶಿ ಸದಾಶಿವಮೂರ್ತಿ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಸಾವಿತ್ರಮ್ಮ, ಮಾಜಿ ಅಧ್ಯಕ್ಷರಾದ ಪದ್ಮ, ನಿರುಪಮಾ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-40-414338183</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>