<p><strong>ಮಂಡ್ಯ:</strong> ನಗರ ವ್ಯಾಪ್ತಿಯ ಮತದಾರರಲ್ಲಿ ಕೆಲವರು ಸ್ವಂತ ಮನೆಯಿಲ್ಲವೆಂದು ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಅರ್ಹರಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿ ‘ನಾವು ದ್ರಾವಿಡ ಕನ್ನಡಿಗರು ಹೋರಾಟ ಸಮಿತಿ’ಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಕಾರ್ಯಕರ್ತರು ಮತ್ತು ನಗರದ ಕೆಇಬಿ ಕಾಲೊನಿ, ಬೀಡಿ ಕಾಲೊನಿಯ ನಿವೇಶನ ರಹಿತರು ಘೋಷಣೆ ಕೂಗಿದರು. ನಂತರ ಕಚೇರಿ ಸಹಾಯಕಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅವರು ಮನೆಯಿಲ್ಲದವರಿಗೆ ಮನೆ ಕೊಡಿಸಲು ಕಾರ್ಯಪ್ರವೃತ್ತರಾಗಿ, ಐದು ಸಾವಿರ ಮನೆಗಳಿಗೆ ಮಂಜೂರಾತಿ ಸಿಕ್ಕಿದೆ ಎಂದು ತಿಳಿಸಿದ್ದು, ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಸಂತ್ರಸ್ತರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಮುಂದಿನ ದಿನಗಳಲ್ಲಿ ಅರ್ಹ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನಿವೇಶನ, ಮನೆ ವಿತರಿಸಬೇಕೆಂದರೆ ದತ್ತಾಂಶ ಕರಾರುವಕ್ಕಾಗಿ ಇರಬೇಕಿರುವುದರಿಂದ ತಾವು ಸಂಬಂಧಪಟ್ಟವರಿಗೆ ತಿಳಿಸಿ, ಕೂಡಲೇ ಸ್ವೀಕರಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಸಂತ್ರಸ್ತರ ಪಟ್ಟಿ ಪ್ರಕಟಿಸಬೇಕು ಎಂದು ಮನವಿ ಮಾಡಿದರು.</p>.<p>ಸಮಿತಿಯ ಅಧ್ಯಕ್ಷ ಅಭಿ ಹನಕೆರೆ, ಮುಖಂಡರಾದ ತನ್ವೀರ್, ನಾಸಿರ್, ರಿಹಾನ್, ನೂರ್ಉಲ್ಲಾ, ಸಮೀಯಾ, ನಗೀನಾ, ನಬೀನಾ, ಆರ್.ಸಿಮ್ರಾನ್, ಎಸ್.ನಂದಿನಿ, ಡಿ.ಎಸ್.ಸವಿತಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ನಗರ ವ್ಯಾಪ್ತಿಯ ಮತದಾರರಲ್ಲಿ ಕೆಲವರು ಸ್ವಂತ ಮನೆಯಿಲ್ಲವೆಂದು ಅರ್ಜಿ ಸಲ್ಲಿಸಿದ್ದು, ಅದರಲ್ಲಿ ಅರ್ಹರಿಗೆ ನಿವೇಶನ ನೀಡಬೇಕೆಂದು ಆಗ್ರಹಿಸಿ ‘ನಾವು ದ್ರಾವಿಡ ಕನ್ನಡಿಗರು ಹೋರಾಟ ಸಮಿತಿ’ಯ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡ ಕಾರ್ಯಕರ್ತರು ಮತ್ತು ನಗರದ ಕೆಇಬಿ ಕಾಲೊನಿ, ಬೀಡಿ ಕಾಲೊನಿಯ ನಿವೇಶನ ರಹಿತರು ಘೋಷಣೆ ಕೂಗಿದರು. ನಂತರ ಕಚೇರಿ ಸಹಾಯಕಿ ರೋಹಿಣಿ ಅವರಿಗೆ ಮನವಿ ಸಲ್ಲಿಸಿದರು.</p>.<p>ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅವರು ಮನೆಯಿಲ್ಲದವರಿಗೆ ಮನೆ ಕೊಡಿಸಲು ಕಾರ್ಯಪ್ರವೃತ್ತರಾಗಿ, ಐದು ಸಾವಿರ ಮನೆಗಳಿಗೆ ಮಂಜೂರಾತಿ ಸಿಕ್ಕಿದೆ ಎಂದು ತಿಳಿಸಿದ್ದು, ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಸಂತ್ರಸ್ತರ ಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.</p>.<p>ಮುಂದಿನ ದಿನಗಳಲ್ಲಿ ಅರ್ಹ ಸಂತ್ರಸ್ತರಿಗೆ ಸರ್ಕಾರದ ವತಿಯಿಂದ ನಿವೇಶನ, ಮನೆ ವಿತರಿಸಬೇಕೆಂದರೆ ದತ್ತಾಂಶ ಕರಾರುವಕ್ಕಾಗಿ ಇರಬೇಕಿರುವುದರಿಂದ ತಾವು ಸಂಬಂಧಪಟ್ಟವರಿಗೆ ತಿಳಿಸಿ, ಕೂಡಲೇ ಸ್ವೀಕರಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಅರ್ಹ ಸಂತ್ರಸ್ತರ ಪಟ್ಟಿ ಪ್ರಕಟಿಸಬೇಕು ಎಂದು ಮನವಿ ಮಾಡಿದರು.</p>.<p>ಸಮಿತಿಯ ಅಧ್ಯಕ್ಷ ಅಭಿ ಹನಕೆರೆ, ಮುಖಂಡರಾದ ತನ್ವೀರ್, ನಾಸಿರ್, ರಿಹಾನ್, ನೂರ್ಉಲ್ಲಾ, ಸಮೀಯಾ, ನಗೀನಾ, ನಬೀನಾ, ಆರ್.ಸಿಮ್ರಾನ್, ಎಸ್.ನಂದಿನಿ, ಡಿ.ಎಸ್.ಸವಿತಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>