<p><strong>ಮಂಡ್ಯ:</strong> ನವದೆಹಲಿಯ ಕೆಂಪುಕೋಟೆಯಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವದ ಪರೇಡ್ನಲ್ಲಿ ಮಂಡ್ಯ ಬೆಲ್ಲ ರೈತ ಉತ್ಪಾದಕರ ಕಂಪನಿಯು ಭಾಗವಹಿಸಲಿದೆ.</p>.<p>ಮಂಡ್ಯದ ರಾಸಾಯನಿಕ ಮುಕ್ತ ಬೆಲ್ಲದ ಘಮಲನ್ನು ನಾಡಿನಾದ್ಯಂತ ಪಸರಿಸುತ್ತಿರುವ ಈ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಕಾರಸವಾಡಿ ಮಹದೇವ್ ಮತ್ತು ಪದಾಧಿಕಾರಿಗಳಾದ ಹಳುವಾಡಿ ಕೃಷ್ಣ, ವೆಂಕಟೇಗೌಡ, ಪ್ರಕಾಶ್ ಮಂಗಲ ಅವರ ತಂಡ ಆಯ್ಕೆಯಾಗಿದೆ.</p>.<p>‘ರಾಷ್ಟ್ರೀಯ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಸಕ್ತಿಯಿಂದ ಅವಕಾಶ ಸಿಕ್ಕಿದೆ’ ಎಂದು ತಂಡ ಹೇಳುತ್ತದೆ.</p>.<p>‘ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧಿಕಾರಿಗಳ ತಂಡ ಮತ್ತು ಪ್ರಧಾನ ಮಂತ್ರಿ ಕಾರ್ಯಾಲಯದ ಆದೇಶದ ಮೇರೆಗೆ ಈ ಸಮಾರಂಭಕ್ಕೆ ಆಹ್ವಾನಿಸಿದ್ದು ತಂಡವು ಜ.22ರಂದು ಮಂಡ್ಯದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದೆ’ ಎಂದು ಕಾರಸವಾಡಿ ಮಹದೇವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ನವದೆಹಲಿಯ ಕೆಂಪುಕೋಟೆಯಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವದ ಪರೇಡ್ನಲ್ಲಿ ಮಂಡ್ಯ ಬೆಲ್ಲ ರೈತ ಉತ್ಪಾದಕರ ಕಂಪನಿಯು ಭಾಗವಹಿಸಲಿದೆ.</p>.<p>ಮಂಡ್ಯದ ರಾಸಾಯನಿಕ ಮುಕ್ತ ಬೆಲ್ಲದ ಘಮಲನ್ನು ನಾಡಿನಾದ್ಯಂತ ಪಸರಿಸುತ್ತಿರುವ ಈ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಕಾರಸವಾಡಿ ಮಹದೇವ್ ಮತ್ತು ಪದಾಧಿಕಾರಿಗಳಾದ ಹಳುವಾಡಿ ಕೃಷ್ಣ, ವೆಂಕಟೇಗೌಡ, ಪ್ರಕಾಶ್ ಮಂಗಲ ಅವರ ತಂಡ ಆಯ್ಕೆಯಾಗಿದೆ.</p>.<p>‘ರಾಷ್ಟ್ರೀಯ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನೆನಪಿಗಾಗಿ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಸಕ್ತಿಯಿಂದ ಅವಕಾಶ ಸಿಕ್ಕಿದೆ’ ಎಂದು ತಂಡ ಹೇಳುತ್ತದೆ.</p>.<p>‘ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧಿಕಾರಿಗಳ ತಂಡ ಮತ್ತು ಪ್ರಧಾನ ಮಂತ್ರಿ ಕಾರ್ಯಾಲಯದ ಆದೇಶದ ಮೇರೆಗೆ ಈ ಸಮಾರಂಭಕ್ಕೆ ಆಹ್ವಾನಿಸಿದ್ದು ತಂಡವು ಜ.22ರಂದು ಮಂಡ್ಯದಿಂದ ದೆಹಲಿಗೆ ಪ್ರಯಾಣ ಬೆಳೆಸಲಿದೆ’ ಎಂದು ಕಾರಸವಾಡಿ ಮಹದೇವ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>