<p>ಮಂಡ್ಯ: ಅಟ್ಟುಣ್ಣುವ ಜಾತ್ರೆಯೆಂದೇ ಹೆಸರುವಾಸಿಯಾದ ತಾಲ್ಲೂಕಿನ ಸಂತೆಕಸಲಗೆರೆ ಹೊರವಲಯದಲ್ಲಿರುವ ಭೂಮಿ ಸಿದ್ದೇಶ್ವರ ಸ್ವಾಮಿಯ ಜಾತ್ರೆಯು ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.</p>.<p>ಭೂಮಿ ಸಿದ್ದೇಶ್ವರ ದೇವಾಲಯದ ಸುತ್ತಮುತ್ತಲಿನ ಏಳು ಗ್ರಾಮಗಳ ಜನರು ಸೇರಿ ಭಕ್ತಿಭಾವದಿಂದ ದೇವರಿಗೆ ಪೂಜೆ ಸಲ್ಲಿಸಿದರು. ದೇವಾಲಯದಲ್ಲಿ ಗುರುವಾರ ಸಂಜೆಯಿಂದಲೇ ದೇವರ ಪೂಜಾ ಕಾರ್ಯ ಆರಂಭವಾಗಿತ್ತು. ಸುತ್ತಲಿನ ಗ್ರಾಮಸ್ಥರು ಬಾಯಿಬೀಗ ಹಾಕಿಸಿಕೊಂಡು ದೇವಾಲಯಕ್ಕೆ ಬಂದು ಹರಕೆ ತೀರಿಸಿದರು.</p>.<p>ಬೆಳಗಿನ ಜಾವದಲ್ಲಿ ಏಕವಾರ ರುದ್ರಾಭಿಷೇಕ ಪೂಜೆ ನೆರವೇರಿಸಲಾಯಿತು. ನಂತರ ವಿವಿಧ ಹೂವುಗಳಿಂದ ಸ್ವಾಮಿಗೆ ಅಲಂಕಾರ ಮಾಡಲಾಗಿತ್ತು, ಸಾವಿರಾರು ಭಕ್ತರು ಬಂದು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.</p>.<p>ಸಂತಕಸಲಗೆರೆ, ಕಾರಸವಾಡಿ, ಮಂಗಲ, ಹನಿಯಂಬಾಡಿ, ಮೊತ್ತಹಳ್ಳಿ, ಕೊತ್ತತ್ತಿ ಹಾಗೂ ಬೇವಿನಹಳ್ಳಿಯ ಏಳು ಗ್ರಾಮಸ್ಥರು ತಮ್ಮ ಊರಿನಲ್ಲಿ ನಾಲ್ಕು ದಿಕ್ಕಿನಲ್ಲಿ ಮೂಲೆಮರಿ ಬಲಿಯೊಂದಿಗೆ ಪೂಜೆ ಮಾಡುತ್ತಾರೆ. ಮರಿಯ ಮಾಂಸವನ್ನು ಗ್ರಾಮದ ಪ್ರತಿಯೊಂದು ಮನೆಗೂ ಹಂಚಲಾಗುತ್ತದೆ. ಅದನ್ನು ಭೂಮಿಸಿದ್ದೇಶ್ವರನ ಸನ್ನಿಧಿಗೆ ತಂದು ಅಡುಗೆ ಮಾಡಿ ದೇವರಿಗೆ ನೈವೇದ್ಯ ಅರ್ಪಿಸುತ್ತಾರೆ.</p>.<p>ಮಾಡಿದ ಅಡುಗೆಯನ್ನು ಕುಟುಂಬಸ್ಥರು ಹಾಗೂ ನೆಂಟರಿಷ್ಟರೊಂದಿಗೆ ಇಲ್ಲಿಯೇ ಊಟ ಮಾಡಿ ಹೋಗುತ್ತಾರೆ. ದೇವಾಲಯದಲ್ಲಿ ಭಕ್ತರಿಗೆ ಪಾನಕ, ಮಜ್ಜಿಗೆ ಹಾಗೂ ಲಾಡು ಪ್ರಸಾದ ನೀಡಲಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಅಟ್ಟುಣ್ಣುವ ಜಾತ್ರೆಯೆಂದೇ ಹೆಸರುವಾಸಿಯಾದ ತಾಲ್ಲೂಕಿನ ಸಂತೆಕಸಲಗೆರೆ ಹೊರವಲಯದಲ್ಲಿರುವ ಭೂಮಿ ಸಿದ್ದೇಶ್ವರ ಸ್ವಾಮಿಯ ಜಾತ್ರೆಯು ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.</p>.<p>ಭೂಮಿ ಸಿದ್ದೇಶ್ವರ ದೇವಾಲಯದ ಸುತ್ತಮುತ್ತಲಿನ ಏಳು ಗ್ರಾಮಗಳ ಜನರು ಸೇರಿ ಭಕ್ತಿಭಾವದಿಂದ ದೇವರಿಗೆ ಪೂಜೆ ಸಲ್ಲಿಸಿದರು. ದೇವಾಲಯದಲ್ಲಿ ಗುರುವಾರ ಸಂಜೆಯಿಂದಲೇ ದೇವರ ಪೂಜಾ ಕಾರ್ಯ ಆರಂಭವಾಗಿತ್ತು. ಸುತ್ತಲಿನ ಗ್ರಾಮಸ್ಥರು ಬಾಯಿಬೀಗ ಹಾಕಿಸಿಕೊಂಡು ದೇವಾಲಯಕ್ಕೆ ಬಂದು ಹರಕೆ ತೀರಿಸಿದರು.</p>.<p>ಬೆಳಗಿನ ಜಾವದಲ್ಲಿ ಏಕವಾರ ರುದ್ರಾಭಿಷೇಕ ಪೂಜೆ ನೆರವೇರಿಸಲಾಯಿತು. ನಂತರ ವಿವಿಧ ಹೂವುಗಳಿಂದ ಸ್ವಾಮಿಗೆ ಅಲಂಕಾರ ಮಾಡಲಾಗಿತ್ತು, ಸಾವಿರಾರು ಭಕ್ತರು ಬಂದು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.</p>.<p>ಸಂತಕಸಲಗೆರೆ, ಕಾರಸವಾಡಿ, ಮಂಗಲ, ಹನಿಯಂಬಾಡಿ, ಮೊತ್ತಹಳ್ಳಿ, ಕೊತ್ತತ್ತಿ ಹಾಗೂ ಬೇವಿನಹಳ್ಳಿಯ ಏಳು ಗ್ರಾಮಸ್ಥರು ತಮ್ಮ ಊರಿನಲ್ಲಿ ನಾಲ್ಕು ದಿಕ್ಕಿನಲ್ಲಿ ಮೂಲೆಮರಿ ಬಲಿಯೊಂದಿಗೆ ಪೂಜೆ ಮಾಡುತ್ತಾರೆ. ಮರಿಯ ಮಾಂಸವನ್ನು ಗ್ರಾಮದ ಪ್ರತಿಯೊಂದು ಮನೆಗೂ ಹಂಚಲಾಗುತ್ತದೆ. ಅದನ್ನು ಭೂಮಿಸಿದ್ದೇಶ್ವರನ ಸನ್ನಿಧಿಗೆ ತಂದು ಅಡುಗೆ ಮಾಡಿ ದೇವರಿಗೆ ನೈವೇದ್ಯ ಅರ್ಪಿಸುತ್ತಾರೆ.</p>.<p>ಮಾಡಿದ ಅಡುಗೆಯನ್ನು ಕುಟುಂಬಸ್ಥರು ಹಾಗೂ ನೆಂಟರಿಷ್ಟರೊಂದಿಗೆ ಇಲ್ಲಿಯೇ ಊಟ ಮಾಡಿ ಹೋಗುತ್ತಾರೆ. ದೇವಾಲಯದಲ್ಲಿ ಭಕ್ತರಿಗೆ ಪಾನಕ, ಮಜ್ಜಿಗೆ ಹಾಗೂ ಲಾಡು ಪ್ರಸಾದ ನೀಡಲಾಗುತ್ತಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>