<p>ಮಂಡ್ಯ: ‘ಕಾಂಗ್ರೆಸ್ ಸಚಿವರು ಮತ್ತು ಶಾಸಕರು ನನ್ನ ಮನೆಗೆ ಬಂದಿರುವುದನ್ನೇ ತಪ್ಪಾಗಿ ಅರ್ಥೈಸಿಕೊಂಡು ಮಾತನಾಡುವುದು ಬೇಡ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷ ಬಿಡದಿ ಬಸವರಾಜು ಮನವಿ ಮಾಡಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಮಂಡ್ಯ ಶಾಸಕ ಪಿ.ರವಿಕುಮಾರ್ ಅವರು ನನ್ನ ಅಕ್ಕನ ಮದುವೆಗೆ ಬಂದಿರಲಿಲ್ಲ, ಹಾಗಾಗಿ ಮನೆಗೆ ಸೌಹಾರ್ದಯುತ ಭೇಟಿ ನೀಡಿ ವಧು–ವರನ್ನು ಆಶೀರ್ವದಿಸಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p>.<p>‘ನಾಗಮಂಗಲದ ಮನೆಗೆ ಬಂದ ಅತಿಥಿಗಳಿಗೆ ಔತಣ ಕೂಟ ಏರ್ಪಡಿಸಲಾಗಿತ್ತು ಅಷ್ಟೇ, ನಾನು ಜೆಡಿಎಸ್ನಲ್ಲಿಯೇ ಇರುತ್ತೇನೆ. ಪಕ್ಷಾಂತರದ ಗಾಳಿ ಸುದ್ದಿ ಹರಡಬೇಡಿ, ಇದರಲ್ಲಿ ಯಾವುದೇ ಹುರುಳಿಲ್ಲ ಬದಲಿಗೆ ರಾಜಕೀಯ ಮಾತುಗಳು ನಡೆಸಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಭಾನುಪ್ರಕಾಶ್, ಲೋಕೇಶ್, ತಾಂಡವ, ಪ್ರಕಾಶ್, ಸಂತೋಷ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-40-1127924538</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಕಾಂಗ್ರೆಸ್ ಸಚಿವರು ಮತ್ತು ಶಾಸಕರು ನನ್ನ ಮನೆಗೆ ಬಂದಿರುವುದನ್ನೇ ತಪ್ಪಾಗಿ ಅರ್ಥೈಸಿಕೊಂಡು ಮಾತನಾಡುವುದು ಬೇಡ’ ಎಂದು ಜೆಡಿಎಸ್ ಜಿಲ್ಲಾ ಘಟಕದ ಮಾಜಿ ಉಪಾಧ್ಯಕ್ಷ ಬಿಡದಿ ಬಸವರಾಜು ಮನವಿ ಮಾಡಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಮಂಡ್ಯ ಶಾಸಕ ಪಿ.ರವಿಕುಮಾರ್ ಅವರು ನನ್ನ ಅಕ್ಕನ ಮದುವೆಗೆ ಬಂದಿರಲಿಲ್ಲ, ಹಾಗಾಗಿ ಮನೆಗೆ ಸೌಹಾರ್ದಯುತ ಭೇಟಿ ನೀಡಿ ವಧು–ವರನ್ನು ಆಶೀರ್ವದಿಸಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಗುರುವಾರ ತಿಳಿಸಿದರು.</p>.<p>‘ನಾಗಮಂಗಲದ ಮನೆಗೆ ಬಂದ ಅತಿಥಿಗಳಿಗೆ ಔತಣ ಕೂಟ ಏರ್ಪಡಿಸಲಾಗಿತ್ತು ಅಷ್ಟೇ, ನಾನು ಜೆಡಿಎಸ್ನಲ್ಲಿಯೇ ಇರುತ್ತೇನೆ. ಪಕ್ಷಾಂತರದ ಗಾಳಿ ಸುದ್ದಿ ಹರಡಬೇಡಿ, ಇದರಲ್ಲಿ ಯಾವುದೇ ಹುರುಳಿಲ್ಲ ಬದಲಿಗೆ ರಾಜಕೀಯ ಮಾತುಗಳು ನಡೆಸಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>ಭಾನುಪ್ರಕಾಶ್, ಲೋಕೇಶ್, ತಾಂಡವ, ಪ್ರಕಾಶ್, ಸಂತೋಷ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-40-1127924538</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>