<p><strong>ಮಂಡ್ಯ:</strong> ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದ ಜಯನಗರ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ದಂಪತಿ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು. ತಾಲ್ಲೂಕಿನ ಹೊಸಕೋಟೆ ಗ್ರಾಮದ ದರ್ಶನ್ (29)–ದಿವ್ಯಶ್ರೀ (25) ಮೃತ ದಂಪತಿ. ಘಟನೆಗೆ ಕಾರಣ ತಿಳಿದುಬಂದಿಲ್ಲ. </p><p>‘ದಂಪತಿಯ ಎರಡು ವರ್ಷದ ಹೆಣ್ಣುಮಗುವಿನ ಕುತ್ತಿಗೆ ಭಾಗದಲ್ಲಿ ಕೆಂಪು ಕಲೆ ಕಂಡುಬಂದಿದೆ. ಮಗುವನ್ನು ಸಾಯಿಸುವ ಉದ್ದೇಶದಿಂದ ಕುತ್ತಿಗೆ ಹಿಸುಕಿ ಹೀಗಾಗಿರಬಹುದು’ ಎಂದು ಶಂಕಿಸಿರುವ ಪೊಲೀಸರು, ‘ಮಗು ಪ್ರಾಣಾಪಾಯದಿಂದ ಪಾರಾಗಿದೆ’ ಎಂದು ತಿಳಿಸಿದ್ದಾರೆ.</p><p>‘ಪತ್ನಿಯು ಆತ್ಮಹತ್ಯೆಗೆ ಮಾಡಿಕೊಂಡಿದ್ದನ್ನು ನೋಡಿದ ಪತಿಯು ತನ್ನ ಅಣ್ಣನಿಗೆ ಕರೆ ಮಾಡಿ ಘಟನೆ ವಿವರಿಸಿ, ತಾನೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದರು. ತಾಳ್ಮೆ, ಧೈರ್ಯದಿಂದ ಇರುವಂತೆ ಅಣ್ಣ ಧೈರ್ಯ ತುಂಬಿದ್ದರು. ಆದರೆ ಅವರು ಬರುವಷ್ಟರಲ್ಲಿ ದರ್ಶನ್ ಆತ್ಮಹತ್ಯೆ ಮಾಡಿಕೊಂಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ. </p><p>ನಾಟನಹಳ್ಳಿಯ ದಿವ್ಯಶ್ರೀ ಅವರ ಮದುವೆ ಮೂರು ವರ್ಷಗಳ ಹಿಂದೆ ದರ್ಶನ್ ಅವರೊಂದಿಗೆ ನಡೆದಿತ್ತು. ದರ್ಶನ್ ತಂದೆ ಗಣೇಶಗೌಡ ಅವರ ದೂರಿನ ಮೇರೆಗೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇನ್ಸ್ಪೆಕ್ಟರ್ ಸುನಿಲ್ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಜಿಲ್ಲೆಯ ಕೆ.ಆರ್. ಪೇಟೆ ಪಟ್ಟಣದ ಜಯನಗರ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ದಂಪತಿ ಸೋಮವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡರು. ತಾಲ್ಲೂಕಿನ ಹೊಸಕೋಟೆ ಗ್ರಾಮದ ದರ್ಶನ್ (29)–ದಿವ್ಯಶ್ರೀ (25) ಮೃತ ದಂಪತಿ. ಘಟನೆಗೆ ಕಾರಣ ತಿಳಿದುಬಂದಿಲ್ಲ. </p><p>‘ದಂಪತಿಯ ಎರಡು ವರ್ಷದ ಹೆಣ್ಣುಮಗುವಿನ ಕುತ್ತಿಗೆ ಭಾಗದಲ್ಲಿ ಕೆಂಪು ಕಲೆ ಕಂಡುಬಂದಿದೆ. ಮಗುವನ್ನು ಸಾಯಿಸುವ ಉದ್ದೇಶದಿಂದ ಕುತ್ತಿಗೆ ಹಿಸುಕಿ ಹೀಗಾಗಿರಬಹುದು’ ಎಂದು ಶಂಕಿಸಿರುವ ಪೊಲೀಸರು, ‘ಮಗು ಪ್ರಾಣಾಪಾಯದಿಂದ ಪಾರಾಗಿದೆ’ ಎಂದು ತಿಳಿಸಿದ್ದಾರೆ.</p><p>‘ಪತ್ನಿಯು ಆತ್ಮಹತ್ಯೆಗೆ ಮಾಡಿಕೊಂಡಿದ್ದನ್ನು ನೋಡಿದ ಪತಿಯು ತನ್ನ ಅಣ್ಣನಿಗೆ ಕರೆ ಮಾಡಿ ಘಟನೆ ವಿವರಿಸಿ, ತಾನೂ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದರು. ತಾಳ್ಮೆ, ಧೈರ್ಯದಿಂದ ಇರುವಂತೆ ಅಣ್ಣ ಧೈರ್ಯ ತುಂಬಿದ್ದರು. ಆದರೆ ಅವರು ಬರುವಷ್ಟರಲ್ಲಿ ದರ್ಶನ್ ಆತ್ಮಹತ್ಯೆ ಮಾಡಿಕೊಂಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ. </p><p>ನಾಟನಹಳ್ಳಿಯ ದಿವ್ಯಶ್ರೀ ಅವರ ಮದುವೆ ಮೂರು ವರ್ಷಗಳ ಹಿಂದೆ ದರ್ಶನ್ ಅವರೊಂದಿಗೆ ನಡೆದಿತ್ತು. ದರ್ಶನ್ ತಂದೆ ಗಣೇಶಗೌಡ ಅವರ ದೂರಿನ ಮೇರೆಗೆ ಪಟ್ಟಣ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇನ್ಸ್ಪೆಕ್ಟರ್ ಸುನಿಲ್ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. </p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>