<p><strong>ಮಂಡ್ಯ</strong>: ನಗರದ ಗುತ್ತಲು- ಯತ್ತಗದಹಳ್ಳಿ ಕೆರೆಗೆ ತ್ಯಾಜ್ಯ ನೀರು ಸೇರುವುದನ್ನು ತಡೆಗಟ್ಟಲು ನಿರ್ಮಿಸುತ್ತಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣ ಕಾಮಗಾರಿಗಳನ್ನು ಅಗಸ್ಟ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗುತ್ತಲು ಮತ್ತು ಚಿಕ್ಕೇಗೌಡನದೊಡ್ಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣ ಕಾಮಗಾರಿಗಳು ಹಾಗೂ ನಗರದಲ್ಲಿ ಬಿಟ್ಟು ಹೋಗಿರುವ ಒಳಚರಂಡಿ ಪೈಪ್ ಲೈನ್ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಕೆರೆಗಳಿಗೆ ನಗರದ ತ್ಯಾಜ್ಯ ನೀರು ಸೇರುತ್ತಿದ್ದ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತರು ಸ್ಥಳ ಪರಿಶೀಲನೆ ನಡೆಸುವ ಜತೆಗೆ ಲೋಕಾಯುಕ್ತದಲ್ಲೂ ಸ್ವಯಂ ಪ್ರೇರಿತರ ದೂರು ದಾಖಲಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆರೆ ಅಭಿವೃದ್ಧಿಯ ಜತೆಗೆ ಕೆರೆಗೆ ತ್ಯಾಜ್ಯ ನೀರು ಸೇರುವುದನ್ನು ತಡೆಯಲು ಗುತ್ತಲು, ಚಿಕ್ಕೇಗೌಡನದೊಡ್ಡಿ ಬಳಿ ನಿರ್ಮಿಸಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಉನ್ನತೀಕರಿಸಲಾಗುತ್ತಿದೆ’ ಎಂದರು.</p>.<p>ಪಾಂಡವಪುರ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಾಣ ಮಾಡಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಕಾಮಗಾರಿ ಪ್ರಾರಂಭವಾಗಬೇಕಿದೆ ಎಂದು ತಿಳಿಸಿದರು.</p>.<p>‘ಶ್ರೀರಂಗಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ ಬಳಸಿದ ನೀರು ನಿರ್ವಹಣೆ ಯೋಜನೆಯಡಿ ₹18.12 ಕೋಟಿ ಮೊತ್ತದ ಒಳಚರಂಡಿ ಮಿಸ್ಸಿಂಗ್ ಲಿಂಕ್ ಮತ್ತು 4 ವೆಟ್ವೆಲ್ಗಳ ನಿರ್ಮಾಣಕ್ಕಾಗಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಟೆಂಡರ್ ಕರೆದು ಸಿ.ವಿ.ಕೆ. ಕನ್ಸ್ಟ್ರಕ್ಷನ್ ಬೆಂಗಳೂರು ಸಂಸ್ಥೆಗೆ ಕಾಮಗಾರಿ ವಹಿಸಲಾಗಿರುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಟಿ.ಎನ್. ನರಸಿಂಹಮೂರ್ತಿ, ಕಾರ್ಯಪಾಲಕ ಎಂಜಿನಿಯರ್ ಪ್ರತಾಪ್, ನಗರಸಭೆ ಪೌರಾಯುಕ್ತ ಯು.ಪಿ. ಪಂಪಾಶ್ರೀ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-40-1747314614</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ನಗರದ ಗುತ್ತಲು- ಯತ್ತಗದಹಳ್ಳಿ ಕೆರೆಗೆ ತ್ಯಾಜ್ಯ ನೀರು ಸೇರುವುದನ್ನು ತಡೆಗಟ್ಟಲು ನಿರ್ಮಿಸುತ್ತಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣ ಕಾಮಗಾರಿಗಳನ್ನು ಅಗಸ್ಟ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಸೂಚಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಗುತ್ತಲು ಮತ್ತು ಚಿಕ್ಕೇಗೌಡನದೊಡ್ಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಉನ್ನತೀಕರಣ ಕಾಮಗಾರಿಗಳು ಹಾಗೂ ನಗರದಲ್ಲಿ ಬಿಟ್ಟು ಹೋಗಿರುವ ಒಳಚರಂಡಿ ಪೈಪ್ ಲೈನ್ ಕಾಮಗಾರಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಕೆರೆಗಳಿಗೆ ನಗರದ ತ್ಯಾಜ್ಯ ನೀರು ಸೇರುತ್ತಿದ್ದ ಹಿನ್ನೆಲೆಯಲ್ಲಿ ಉಪ ಲೋಕಾಯುಕ್ತರು ಸ್ಥಳ ಪರಿಶೀಲನೆ ನಡೆಸುವ ಜತೆಗೆ ಲೋಕಾಯುಕ್ತದಲ್ಲೂ ಸ್ವಯಂ ಪ್ರೇರಿತರ ದೂರು ದಾಖಲಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೆರೆ ಅಭಿವೃದ್ಧಿಯ ಜತೆಗೆ ಕೆರೆಗೆ ತ್ಯಾಜ್ಯ ನೀರು ಸೇರುವುದನ್ನು ತಡೆಯಲು ಗುತ್ತಲು, ಚಿಕ್ಕೇಗೌಡನದೊಡ್ಡಿ ಬಳಿ ನಿರ್ಮಿಸಿರುವ ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು ಉನ್ನತೀಕರಿಸಲಾಗುತ್ತಿದೆ’ ಎಂದರು.</p>.<p>ಪಾಂಡವಪುರ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಾಣ ಮಾಡಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಕಾಮಗಾರಿ ಪ್ರಾರಂಭವಾಗಬೇಕಿದೆ ಎಂದು ತಿಳಿಸಿದರು.</p>.<p>‘ಶ್ರೀರಂಗಪಟ್ಟಣ ಪುರಸಭೆ ವ್ಯಾಪ್ತಿಯಲ್ಲಿ ಬಳಸಿದ ನೀರು ನಿರ್ವಹಣೆ ಯೋಜನೆಯಡಿ ₹18.12 ಕೋಟಿ ಮೊತ್ತದ ಒಳಚರಂಡಿ ಮಿಸ್ಸಿಂಗ್ ಲಿಂಕ್ ಮತ್ತು 4 ವೆಟ್ವೆಲ್ಗಳ ನಿರ್ಮಾಣಕ್ಕಾಗಿ ಕೆ.ಯು.ಐ.ಡಿ.ಎಫ್.ಸಿ. ವತಿಯಿಂದ ಟೆಂಡರ್ ಕರೆದು ಸಿ.ವಿ.ಕೆ. ಕನ್ಸ್ಟ್ರಕ್ಷನ್ ಬೆಂಗಳೂರು ಸಂಸ್ಥೆಗೆ ಕಾಮಗಾರಿ ವಹಿಸಲಾಗಿರುತ್ತದೆ’ ಎಂದು ತಿಳಿಸಿದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಟಿ.ಎನ್. ನರಸಿಂಹಮೂರ್ತಿ, ಕಾರ್ಯಪಾಲಕ ಎಂಜಿನಿಯರ್ ಪ್ರತಾಪ್, ನಗರಸಭೆ ಪೌರಾಯುಕ್ತ ಯು.ಪಿ. ಪಂಪಾಶ್ರೀ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-40-1747314614</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>