ನಿಖಿಲ್ ತಮ್ಮ ಕಾರಿನ ಫುಟ್ಬೋರ್ಡ್ ಮೇಲೆ ನಿಂತು ಜನರತ್ತ ಕೈ ಬೀಸುತ್ತಾ ದೊಡ್ಡರಸಿನಕೆರೆ ಮತಗಟ್ಟೆ ಬಳಿ ಬಂದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸುಮಲತಾ ಬೆಂಬಲಿಗರು, ಬಹಿರಂಗ ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ನಿಖಿಲ್ ಎದುರಲ್ಲೇ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು. ಕಾರ್ಯಕರ್ತರು ಪರಸ್ಪರ ಹಲ್ಲೆ ಮಾಡಿಕೊಂಡರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಿದರು.