<p>ಮದ್ದೂರು: ನಗರದ ಗ್ರಾಮದೇವತೆಯಾದ ಮದ್ದೂರಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಭಾರಿ ದನಗಳ ಜಾತ್ರೆಯಲ್ಲಿ ಎತ್ತೊಂದು ಸಾವನ್ನಪ್ಪಿದೆ.</p>.<p>ಶಾಮಿಯಾನದ ಕೆಳಗೆ ಕಟ್ಟಿದ್ದ ಎತ್ತು ಮಧ್ಯಾಹ್ನದ ವೇಳೆಗೆ ನಿತ್ರಾಣಗೊಂಡಿತು. ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಗೋವಿಂದ್ ಸ್ಥಳಕ್ಕೆ ಧಾವಿಸಿ ಪ್ರಥಮ ಚಿಕಿತ್ಸೆ ನೀಡುವಷ್ಟರಲ್ಲಿ ಎತ್ತು ಅಸುನೀಗಿತ್ತು.</p>.<p>ಅತಿಯಾದ ತಾಪಮಾನ (ಉಷ್ಣತೆ )ಯಿಂದಾಗಿ ಎತ್ತು ಸಾವನ್ನಪ್ಪಿರುವುದಾಗಿ ಗೋವಿಂದ್ ತಿಳಿಸಿದರು. ಇಲಾಖೆಯಿಂದ ₹15 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು.</p>.<p>ತಾಲ್ಲೂಕಿನ ತಗ್ಗಹಳ್ಳಿ ಗ್ರಾಮದ ರೈತ ರಾಜು ಎಂಬುವವರಿಗೆ ಸೇರಿದ ಎತ್ತು ಸಾವನ್ನಪ್ಪಿದ್ದು, ನಗರದ ಶಿoಷಾ ಬ್ಯಾಂಕ್ ಬಳಿ ಜಾತ್ರೆಯಲ್ಲಿ ತನ್ನ ಎತ್ತುಗಳೊಂದಿಗೆ ಭಾನುವಾರದಿಂದ ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-40-1974230448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮದ್ದೂರು: ನಗರದ ಗ್ರಾಮದೇವತೆಯಾದ ಮದ್ದೂರಮ್ಮನವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಭಾರಿ ದನಗಳ ಜಾತ್ರೆಯಲ್ಲಿ ಎತ್ತೊಂದು ಸಾವನ್ನಪ್ಪಿದೆ.</p>.<p>ಶಾಮಿಯಾನದ ಕೆಳಗೆ ಕಟ್ಟಿದ್ದ ಎತ್ತು ಮಧ್ಯಾಹ್ನದ ವೇಳೆಗೆ ನಿತ್ರಾಣಗೊಂಡಿತು. ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಗೋವಿಂದ್ ಸ್ಥಳಕ್ಕೆ ಧಾವಿಸಿ ಪ್ರಥಮ ಚಿಕಿತ್ಸೆ ನೀಡುವಷ್ಟರಲ್ಲಿ ಎತ್ತು ಅಸುನೀಗಿತ್ತು.</p>.<p>ಅತಿಯಾದ ತಾಪಮಾನ (ಉಷ್ಣತೆ )ಯಿಂದಾಗಿ ಎತ್ತು ಸಾವನ್ನಪ್ಪಿರುವುದಾಗಿ ಗೋವಿಂದ್ ತಿಳಿಸಿದರು. ಇಲಾಖೆಯಿಂದ ₹15 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು.</p>.<p>ತಾಲ್ಲೂಕಿನ ತಗ್ಗಹಳ್ಳಿ ಗ್ರಾಮದ ರೈತ ರಾಜು ಎಂಬುವವರಿಗೆ ಸೇರಿದ ಎತ್ತು ಸಾವನ್ನಪ್ಪಿದ್ದು, ನಗರದ ಶಿoಷಾ ಬ್ಯಾಂಕ್ ಬಳಿ ಜಾತ್ರೆಯಲ್ಲಿ ತನ್ನ ಎತ್ತುಗಳೊಂದಿಗೆ ಭಾನುವಾರದಿಂದ ಪಾಲ್ಗೊಂಡಿದ್ದರು ಎಂದು ತಿಳಿದುಬಂದಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-40-1974230448</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>