<p><strong>ಮದ್ದೂರು</strong>: ಪಟ್ಟಣದ ಹೊಳೇಬೀದಿಯಲ್ಲಿರುವ ಚಿಕ್ಕ ಸವದತ್ತಿ ಎಂದೇ ಹೆಸರಾಗಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿಯವರ 54ನೇ ವರ್ಷದ ಜಾತ್ರಾಮಹೋತ್ಸವವು ಭಾನುವಾರ ಸಡಗರ ಸಂಭ್ರಮದಿಂದ ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ನಡೆಯಿತು.</p>.<p>ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭಗೊಂಡವು. ದೇವಿಯ ವಿಗ್ರಹವನ್ನು ವಿಶೇಷ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು, ಹೊಳೇಬೀದಿ, ಪೇಟೆಬೀದಿಯಲ್ಲಿ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗಿತ್ತು.</p>.<p>ಬೆಳಿಗ್ಗೆ 9ಕ್ಕೆ 27ನೇ ವರ್ಷದ ಚಂಡಿಕಾಯಾಗವು ದೇವಸ್ಥಾನದ ಆವರಣದಲ್ಲಿ ನಡೆಯಿತು. ಮಧ್ಯಾಹ್ನ 12ಕ್ಕೆ ಪೂರ್ಣಹುತಿ ನಡೆಯಿತು. ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಮಹಿಳೆಯರಿಂದ ತಂಬಿಟ್ಟಿನ ಆರತಿ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ 1 ರಿಂದ 4 ರವರೆಗೆ ಅನ್ನಸಂತರ್ಪಣೆ ನಡೆಯಿತು.</p>.<p>ಇದರ ಜೊತೆಗೆ 2.30ರಿಂದ ಸಂಜೆ 5.30ರ ವರೆಗೆ ನಿಂಬೆಹಣ್ಣಿನ ದೀಪದ ಆರತಿ ಮತ್ತು ಉಯ್ಯಾಲೋತ್ಸವವನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿತ್ತು. ಪಟ್ಟಣ ಹಾಗೂ ರಾಜ್ಯದ ಹಲವು ಕಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು. ಅನ್ನಸಂತರ್ಪಣೆಯಲ್ಲಿ ಅವರು ಪಾಲ್ಗೊಂಡಿದ್ದರು.</p>.<p>ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಹಾಗೂ ಧರ್ಮದರ್ಶಿ ಶ್ರೀನಿವಾಸ್ ಸೇರಿದಂತೆ ಪದಾಧಿಕಾರಿಗಳಾದ ಕಿರಣ್, ಸಂತೋಷ್ , ದೇವರಾಜ್ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ಪಟ್ಟಣದ ಹೊಳೇಬೀದಿಯಲ್ಲಿರುವ ಚಿಕ್ಕ ಸವದತ್ತಿ ಎಂದೇ ಹೆಸರಾಗಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿಯವರ 54ನೇ ವರ್ಷದ ಜಾತ್ರಾಮಹೋತ್ಸವವು ಭಾನುವಾರ ಸಡಗರ ಸಂಭ್ರಮದಿಂದ ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ ನಡೆಯಿತು.</p>.<p>ಮಹೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ಪೂಜಾ ಕಾರ್ಯಕ್ರಮಗಳು ಆರಂಭಗೊಂಡವು. ದೇವಿಯ ವಿಗ್ರಹವನ್ನು ವಿಶೇಷ ಹೂವುಗಳಿಂದ ಅಲಂಕಾರ ಮಾಡಲಾಗಿತ್ತು, ಹೊಳೇಬೀದಿ, ಪೇಟೆಬೀದಿಯಲ್ಲಿ ವಿದ್ಯುತ್ ದೀಪಾಲಂಕಾರವನ್ನು ಮಾಡಲಾಗಿತ್ತು.</p>.<p>ಬೆಳಿಗ್ಗೆ 9ಕ್ಕೆ 27ನೇ ವರ್ಷದ ಚಂಡಿಕಾಯಾಗವು ದೇವಸ್ಥಾನದ ಆವರಣದಲ್ಲಿ ನಡೆಯಿತು. ಮಧ್ಯಾಹ್ನ 12ಕ್ಕೆ ಪೂರ್ಣಹುತಿ ನಡೆಯಿತು. ನಂತರ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಹಾಗೂ ಮಹಿಳೆಯರಿಂದ ತಂಬಿಟ್ಟಿನ ಆರತಿ ಕಾರ್ಯಕ್ರಮಗಳು ನಡೆದವು. ಮಧ್ಯಾಹ್ನ 1 ರಿಂದ 4 ರವರೆಗೆ ಅನ್ನಸಂತರ್ಪಣೆ ನಡೆಯಿತು.</p>.<p>ಇದರ ಜೊತೆಗೆ 2.30ರಿಂದ ಸಂಜೆ 5.30ರ ವರೆಗೆ ನಿಂಬೆಹಣ್ಣಿನ ದೀಪದ ಆರತಿ ಮತ್ತು ಉಯ್ಯಾಲೋತ್ಸವವನ್ನು ದೇವಸ್ಥಾನದ ಟ್ರಸ್ಟ್ ವತಿಯಿಂದ ಏರ್ಪಡಿಸಲಾಗಿತ್ತು. ಪಟ್ಟಣ ಹಾಗೂ ರಾಜ್ಯದ ಹಲವು ಕಡೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು. ಅನ್ನಸಂತರ್ಪಣೆಯಲ್ಲಿ ಅವರು ಪಾಲ್ಗೊಂಡಿದ್ದರು.</p>.<p>ದೇವಸ್ಥಾನದ ಟ್ರಸ್ಟ್ ಕಾರ್ಯದರ್ಶಿ ಹಾಗೂ ಧರ್ಮದರ್ಶಿ ಶ್ರೀನಿವಾಸ್ ಸೇರಿದಂತೆ ಪದಾಧಿಕಾರಿಗಳಾದ ಕಿರಣ್, ಸಂತೋಷ್ , ದೇವರಾಜ್ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>