ಆರೋಪಿ ಮರಳಿಗ ಶಿವರಾಜ್ ಕಳೆದ ಮೇ.30 ರಂದು ಗೃಹ ಸಚಿವ ಜಿ.ಪರಮೇಶ್ವರ್ ಒಬ್ಬ ಅಯೋಗ್ಯ, ಸ್ವಂತ ಮಗನನ್ನು ಉಳಿಸಿಕೊಳ್ಳಲಾಗಲಿಲ್ಲ. ಈತ ಅಂಬೇಡ್ಕರ್ ಅವರ ಆಶಯಗಳನ್ನು ಉಳಿಸಲಿಲ್ಲ. ಆರ್.ಎಸ್.ಎಸ್ ನವರ ಜೊತೆ ನಂಟು ಹೊಂದಿದ್ದಾರೆ. ಇವರ ಬಗ್ಗೆ ತಾಕತ್ ಇದ್ದವರು ಉತ್ತರಿಸಲಿ ಎಂದು ಜಾಲತಾಣದಲ್ಲಿ ಅವಹೇಳನವಾಗಿ ಪೋಸ್ಟ್ ನಿಂದಿಸಿದ್ದಾರೆ ಎಂದು ದೂರುದಾರ ದೊರೆಸ್ವಾಮಿ ದಾಖಲೆ ಸಮೇತ ಪೋಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ಪರಿಶಿಷ್ಟ ಜಾತಿ ಬಲಗೈ ಬಣದವರ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ. ಮುಂದಿನ ದಿನಗಳಲ್ಲಿ ದಲಿತ ಜನಾಂಗದವರ ನಡುವೆ ಘರ್ಷಣೆಗಳು ನಡೆದು ಶಾಂತಿ ಭಂಗ ಉಂಟಾಗುವ ಸಾಧ್ಯತೆ ಇರುವುದರಿಂದ ಮರಳಿಗ ಶಿವರಾಜ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರಿನಲ್ಲಿ ದೂರುದಾರ ದೊರೆಸ್ವಾಮಿ ಉಲ್ಲೇಖಿಸಿದ್ದಾರೆ.