ನ.12ರಂದು ಮಧ್ಯಪ್ರದೇಶ ಚುನಾವಣಾ ಕಾರ್ಯಕ್ಕೆ ಮಂಡ್ಯ ಜಿಲ್ಲೆಯ ವಿವಿಧ ಠಾಣೆಯ ಗೃಹ ರಕ್ಷಕ ದಳದ ಸಿಬ್ಬಂದಿ ತೆರಳಿದ್ದರು. ಶುಕ್ರವಾರ ರಾತ್ರಿ ರೈಲಿನಲ್ಲಿ ವಾಪಸ್ ಬರುವ ವೇಳೆ ತೀವ್ರ ಅನಾರೋಗ್ಯದಿಂದ ಮೃತಪಟ್ಟಿದ್ದರು. ಅವರಿಗೆ ತಾಯಿ, ಪತ್ನಿ, ಇಬ್ಬರು ಸಣ್ಣ ವಯಸ್ಸಿನ ಮಕ್ಕಳು ಇದ್ದಾರೆ. ಗ್ರಾಮದ ಹೊರವಲಯದ ಕಾವೇರಿ ನದಿ ತೀರದ ಸ್ಮಶಾನದಲ್ಲಿ ಶನಿವಾರ ಅಂತ್ಯಕ್ರಿಯೆ ನಡೆಯಿತು.