<p><strong>ಮಂಡ್ಯ:</strong> ಮಿಮ್ಸ್ನಲ್ಲಿ ಭ್ರಷ್ಟಾಚಾರ, ಅವ್ಯವಸ್ಥೆ, ಅಧಿಕಾರ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.</p>.<p>ಮಂಡ್ಯ ವೈದ್ಯಕೀಯ ವಿಜ್ಞಾನಗಳ ವಿಜ್ಞಾನ ಸಂಸ್ಥೆಯ ಮುಖ್ಯ ದ್ವಾರದಲ್ಲಿಯೇ ಧರಣಿ ಕುಳಿತ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಿಮ್ಸ್ ಭ್ರಷ್ಟಾಚಾರದ ಕೊಂಪೆಯಾಗಿ ಅವ್ಯವಸ್ಥೆಯ ಆಗರವಾಗಿದೆ. 158 ಜನ ವೈದ್ಯರಿದ್ದರೂ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿಲ್ಲ. ₹2ರಿಂದ ₹3 ಲಕ್ಷ ವೇತನ ಪಡೆಯುವ ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವುದಿಲ್ಲ. ಬದಲಿಗೆ ಖಾಸಗಿ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸಿ ಕಮಿಷನ್ ಪಡೆಯುವುದು ಇವರ ಕಾಯಕವಾಗಿದೆ’ ಎಂದು ಕಿಡಿಕಾರಿದರು.</p>.<p>ಆಸ್ಪತ್ರೆಯ ಯಂತ್ರೋಪಕರಣಗಳು ಹಾಗೂ ಚಿಕಿತ್ಸೆಗೆಂದು ಕೋಟ್ಯಂತರ ರೂಪಾಯಿ ಹಣವನ್ನು ನೀಡಲಾಗುತ್ತಿದೆ. ಯಂತ್ರಗಳನ್ನು ತುಕ್ಕು ಹಿಡಿಯಲು ಬಿಟ್ಟಿದ್ದಾರೆ. ಔಷಧಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ. ಈಗಾಗಲೇ ಆರೋಗ್ಯ, ಶಿಕ್ಷಣ, ವಸತಿ ಆಹಾರ ಎಲ್ಲವೂ ದುಬಾರಿಯಾಗಿರುವ ಹೊತ್ತಿನಲ್ಲಿ ಜನಸಾಮಾನ್ಯರಿಗೆ ತೊಂದರೆ ಕೊಡುವುದು ನ್ಯಾಯವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕ್ಯಾನ್ಸರ್ ಚಿಕಿತ್ಸೆ ಕೇಂದ್ರದ ಕಟ್ಟಡ ನಿರ್ಮಾಣವಾಗಿ ಹಲವು ವರ್ಷವೇ ಆದರೂ ಇನ್ನೂ ಉದ್ಘಾಟನೆ ಮಾಡಿಲ್ಲ. ಪರಿಣಾಮ ಬಡ ರೋಗಿಗಳು ಬೆಂಗಳೂರು-ಮೈಸೂರಿಗೆ ಹೋಗಿ ದುಬಾರಿ ಹಣ ಕೊಟ್ಟು ಚಿಕಿತ್ಸೆ ಪಡೆಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.</p>.<p>‘ಉಪಲೋಕಾಯುಕ್ತರು ಛೀಮಾರಿ ಹಾಕಿದ್ದರೂ ಇಲ್ಲಿ ಸುಧಾರಣೆ ಕಂಡಿಲ್ಲ. ವೈದ್ಯರು, ದಾದಿಯರ ವಸತಿಗೃಹಗಳು ಇವೆ. ಅಲ್ಲಿ ಯಾರೂ ಇರುವುದಿಲ್ಲ. ಅವರೆಲ್ಲರೂ ಹೊರಗೆ ಇದ್ದಾರೆ. ಈ ಆಸ್ಪತ್ರೆ ಸುಧಾರಣೆ ಕಾಣುವವರೆಗೂ ಧರಣಿ ವಾಪಸ್ ಪಡೆಯುವ ಮಾತಿಲ್ಲ’ ಎಂದು ಮುಖಂಡರಾದ ಅಣ್ಣಯ್ಯ, ಎಚ್.ಡಿ.ಜಯರಾಂ ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ರಾಣಿ ಹುಳ್ಳೇನಹಳ್ಳಿ, ಮಮತಾ, ವಿಜಯಕುಮಾರ್, ಶಿವರಾಮು, ಕಿರಣ್, ಕೃಷ್ಣ, ಲತಾ ಶಂಕರ್, ಸಾಗರ್, ಕನ್ನಲಿ ನವೀನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಮಿಮ್ಸ್ನಲ್ಲಿ ಭ್ರಷ್ಟಾಚಾರ, ಅವ್ಯವಸ್ಥೆ, ಅಧಿಕಾರ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.</p>.<p>ಮಂಡ್ಯ ವೈದ್ಯಕೀಯ ವಿಜ್ಞಾನಗಳ ವಿಜ್ಞಾನ ಸಂಸ್ಥೆಯ ಮುಖ್ಯ ದ್ವಾರದಲ್ಲಿಯೇ ಧರಣಿ ಕುಳಿತ ಕಾರ್ಯಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮಿಮ್ಸ್ ಭ್ರಷ್ಟಾಚಾರದ ಕೊಂಪೆಯಾಗಿ ಅವ್ಯವಸ್ಥೆಯ ಆಗರವಾಗಿದೆ. 158 ಜನ ವೈದ್ಯರಿದ್ದರೂ ಪಾಳಿಯಲ್ಲಿ ಕೆಲಸ ನಿರ್ವಹಿಸುತ್ತಿಲ್ಲ. ₹2ರಿಂದ ₹3 ಲಕ್ಷ ವೇತನ ಪಡೆಯುವ ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುವುದಿಲ್ಲ. ಬದಲಿಗೆ ಖಾಸಗಿ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸಿ ಕಮಿಷನ್ ಪಡೆಯುವುದು ಇವರ ಕಾಯಕವಾಗಿದೆ’ ಎಂದು ಕಿಡಿಕಾರಿದರು.</p>.<p>ಆಸ್ಪತ್ರೆಯ ಯಂತ್ರೋಪಕರಣಗಳು ಹಾಗೂ ಚಿಕಿತ್ಸೆಗೆಂದು ಕೋಟ್ಯಂತರ ರೂಪಾಯಿ ಹಣವನ್ನು ನೀಡಲಾಗುತ್ತಿದೆ. ಯಂತ್ರಗಳನ್ನು ತುಕ್ಕು ಹಿಡಿಯಲು ಬಿಟ್ಟಿದ್ದಾರೆ. ಔಷಧಗಳನ್ನು ಸಮರ್ಪಕವಾಗಿ ನೀಡುತ್ತಿಲ್ಲ. ಈಗಾಗಲೇ ಆರೋಗ್ಯ, ಶಿಕ್ಷಣ, ವಸತಿ ಆಹಾರ ಎಲ್ಲವೂ ದುಬಾರಿಯಾಗಿರುವ ಹೊತ್ತಿನಲ್ಲಿ ಜನಸಾಮಾನ್ಯರಿಗೆ ತೊಂದರೆ ಕೊಡುವುದು ನ್ಯಾಯವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಕ್ಯಾನ್ಸರ್ ಚಿಕಿತ್ಸೆ ಕೇಂದ್ರದ ಕಟ್ಟಡ ನಿರ್ಮಾಣವಾಗಿ ಹಲವು ವರ್ಷವೇ ಆದರೂ ಇನ್ನೂ ಉದ್ಘಾಟನೆ ಮಾಡಿಲ್ಲ. ಪರಿಣಾಮ ಬಡ ರೋಗಿಗಳು ಬೆಂಗಳೂರು-ಮೈಸೂರಿಗೆ ಹೋಗಿ ದುಬಾರಿ ಹಣ ಕೊಟ್ಟು ಚಿಕಿತ್ಸೆ ಪಡೆಯಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.</p>.<p>‘ಉಪಲೋಕಾಯುಕ್ತರು ಛೀಮಾರಿ ಹಾಕಿದ್ದರೂ ಇಲ್ಲಿ ಸುಧಾರಣೆ ಕಂಡಿಲ್ಲ. ವೈದ್ಯರು, ದಾದಿಯರ ವಸತಿಗೃಹಗಳು ಇವೆ. ಅಲ್ಲಿ ಯಾರೂ ಇರುವುದಿಲ್ಲ. ಅವರೆಲ್ಲರೂ ಹೊರಗೆ ಇದ್ದಾರೆ. ಈ ಆಸ್ಪತ್ರೆ ಸುಧಾರಣೆ ಕಾಣುವವರೆಗೂ ಧರಣಿ ವಾಪಸ್ ಪಡೆಯುವ ಮಾತಿಲ್ಲ’ ಎಂದು ಮುಖಂಡರಾದ ಅಣ್ಣಯ್ಯ, ಎಚ್.ಡಿ.ಜಯರಾಂ ಎಚ್ಚರಿಕೆ ನೀಡಿದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ರಾಣಿ ಹುಳ್ಳೇನಹಳ್ಳಿ, ಮಮತಾ, ವಿಜಯಕುಮಾರ್, ಶಿವರಾಮು, ಕಿರಣ್, ಕೃಷ್ಣ, ಲತಾ ಶಂಕರ್, ಸಾಗರ್, ಕನ್ನಲಿ ನವೀನ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>