ಮಾಧ್ಯಮ ಪ್ರತಿನಿಧಿಗಳನ್ನು ಹೊರಗಿಟ್ಟು ಸಭೆ ಆಯೋಜನೆ ಮಾಡಲಾಗಿತ್ತು. ಮುಂಬೈ ವಲಸಿಗರ ಸಂಖ್ಯೆ ಹೆಚ್ಚಳ, ಕ್ವಾರಂಟೈನ್ ವಾಸಿಗಳಿಗೆ ಸೌಲಭ್ಯ ವಿಚಾರಕ್ಕೆ ಶಾಸಕ ಸುರೇಶ್ಗೌಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರವೀಂದ್ರ ಶ್ರೀಕಂಠಯ್ಯ ಅವರೂ ಧ್ವನಿಗೂಡಿಸಿದ್ದಾರೆ. ಈ ಸಂದರ್ಭದಲ್ಲಿ ಸಚಿವರು, ನೀವು ಹೇಳುವುದನ್ನೆಲ್ಲಾ ಕೇಳಿಸಿಕೊಳ್ಳಲು ನಾನು ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.