ವಿಧಾನ ಪರಿಷತ್ ಚುನಾವಣೆ: ಡಾ.ಕೆ. ಸುಧಾಕರ್– ನಾರಾಯಣ ಗೌಡ ಜಟಾಪಟಿ

ಬೆಳಗಾವಿ (ಸುವರ್ಣ ವಿಧಾನಸೌಧ): ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೇವಲ 50 ಮತ ಗಳಿಸಿರುವ ವಿಚಾರ ಸಚಿವರಾದ ಡಾ.ಕೆ. ಸುಧಾಕರ್ ಮತ್ತು ಕೆ.ಸಿ. ನಾರಾಯಣ ಗೌಡ ನಡುವೆ ಬುಧವಾರ ಜಟಾಪಟಿಗೆ ಕಾರಣವಾಯಿತು.
ಸುವರ್ಣ ವಿಧಾನಸೌಧದ ಮೊಗಸಾಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್, ‘ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿಗೆ ಕಡಿಮೆ ಮತ ಬಂದಿದೆ. ಇದು ನಿಜಕ್ಕೂ ದುರದೃಷ್ಟಕರ. ಈ ಕುರಿತು ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ನಡೆಸುತ್ತೇವೆ’ ಎಂದರು.
ಆರೋಗ್ಯ ಸಚಿವರ ಹೇಳಿಕೆಗೆ ತಕ್ಷಣವೇ ಪ್ರತಿಕ್ರಿಯೆ ನೀಡಿದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ, ‘ಸುಧಾಕರ್ ಏನು ನಮ್ಮ ನಾಯಕರಾ? ಅವರು ಅವರ ಕ್ಷೇತ್ರದ ಬಗ್ಗೆ ಮಾತನಾಡಲಿ. ನಾವು ನಮ್ಮ ಕ್ಷೇತ್ರದ ಬಗ್ಗೆ ಹೇಳುತ್ತೇವೆ. ಮಂಡ್ಯದ ಬಗ್ಗೆ ಅವರಿಗೆ ಏನು ಗೊತ್ತು? ನನಗೆ ಗೊತ್ತಿದೆ, ನಾನು ಮಾತನಾಡುತ್ತೇನೆ’ ಎಂದು ಹೇಳಿದರು.
‘ಪ್ರಾಮಾಣಿಕವಾಗಿ ಚುನಾವಣೆ ಎದುರಿಸಿದ್ದೇವೆ. ಪಕ್ಷ ಬೆಳೆಸುವ ಜವಾಬ್ದಾರಿ ಇದೆ. ನಾನು ಜವಾಬ್ದಾರಿಯಿಂದಲೇ ಕೆಲಸ ಮಾಡುತ್ತಿದ್ದೇನೆ. ಕೊನೆಯ ಕ್ಷಣದಲ್ಲಿ ನಮ್ಮ ಅಭ್ಯರ್ಥಿ ಸ್ವಲ್ಪ ಧೈರ್ಯ ತೋರಿಸಲಿಲ್ಲ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.