<p><strong>ಮಂಡ್ಯ:</strong> ನಗರದ ಮೈಷುಗರ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಳೆದ ನಾಲ್ಕು ವರ್ಷಗಳ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.</p>.<p>ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರೊಂದಿಗೆ ಈಚೆಗೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು, ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಜೂನ್ ಎರಡನೇ ವಾರದ ನಂತರ ಕಾರ್ಖಾನೆ ಪ್ರಾರಂಭಿಸಲು ಆಗ್ರಹಿಸಲಾಯಿತು . ರೈತರಿಗೆ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹50 ಮತ್ತು ಕಾರ್ಖಾನೆ ₹50 ಪ್ರೋತ್ಸಾಹಧನ ಸೇರಿ ಒಟ್ಟು ₹100 ರೈತರ ಖಾತೆಗೆ ಸಂದಾಯ ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು. ಜೂನ್ 10ರವರೆಗೆ ರೈತರಿಗೆ ತಲುಪಿಸುತ್ತೇವೆ ಎಂದು ಅಧ್ಯಕ್ಷರು ಭರವಸೆ ನೀಡಿದರು.</p>.<p>ಕಾರ್ಖಾನೆಯ ಕಬ್ಬು ಅರೆಯುವುದು, ಕಬ್ಬು ಒಪ್ಪಿಗೆ ಮಾಡಿಸಿವುದು, ಕಬ್ಬು ಕಟಾವಿಗೆ ಕಾರ್ಮಿಕರನ್ನು ಕರೆ ತರುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಕಾರ್ಖಾನೆಯಲ್ಲಿ ಬಳಕೆ ಆಗದ ವಸ್ತು ವಿಲೇವಾರಿಗಳ ಬಗ್ಗೆಯೂ ಮಾತುಕತೆ ನಡೆಯಿತು.</p>.<p>ಸಭೆಯಲ್ಲಿ ರೈತ ನಾಯಕಿ ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಕೆ.ಬೋರಯ್ಯ, ಕನ್ನಡ ಸೇನೆ ಮುಖಂಡ ಮಂಜುನಾಥ್. ಎಂ.ಬಿ. ನಾಗಣ್ಣಗೌಡ, ಒಪ್ಪಿಗೆದಾರರ ಸಂಘದ ಕೃಷ್ಣ, ಡಿಎಸ್ಎಸ್ ಎಂ.ವಿ. ಕೃಷ್ಣ, ಶಿವಳ್ಳಿ ಚಂದ್ರಶೇಖರ್, ರೈತ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-40-901130624</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ನಗರದ ಮೈಷುಗರ್ ಕಾರ್ಖಾನೆಗೆ ಸಂಬಂಧಿಸಿದಂತೆ ಕಳೆದ ನಾಲ್ಕು ವರ್ಷಗಳ ಶ್ವೇತಪತ್ರವನ್ನು ಹೊರಡಿಸಬೇಕು ಎಂದು ರೈತ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.</p>.<p>ಮೈಷುಗರ್ ಅಧ್ಯಕ್ಷ ಸಿ.ಡಿ. ಗಂಗಾಧರ್ ಅವರೊಂದಿಗೆ ಈಚೆಗೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಪದಾಧಿಕಾರಿಗಳು, ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳ ಪದಾಧಿಕಾರಿಗಳು ಸಭೆ ನಡೆಸಿದರು. ಜೂನ್ ಎರಡನೇ ವಾರದ ನಂತರ ಕಾರ್ಖಾನೆ ಪ್ರಾರಂಭಿಸಲು ಆಗ್ರಹಿಸಲಾಯಿತು . ರೈತರಿಗೆ ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹50 ಮತ್ತು ಕಾರ್ಖಾನೆ ₹50 ಪ್ರೋತ್ಸಾಹಧನ ಸೇರಿ ಒಟ್ಟು ₹100 ರೈತರ ಖಾತೆಗೆ ಸಂದಾಯ ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು. ಜೂನ್ 10ರವರೆಗೆ ರೈತರಿಗೆ ತಲುಪಿಸುತ್ತೇವೆ ಎಂದು ಅಧ್ಯಕ್ಷರು ಭರವಸೆ ನೀಡಿದರು.</p>.<p>ಕಾರ್ಖಾನೆಯ ಕಬ್ಬು ಅರೆಯುವುದು, ಕಬ್ಬು ಒಪ್ಪಿಗೆ ಮಾಡಿಸಿವುದು, ಕಬ್ಬು ಕಟಾವಿಗೆ ಕಾರ್ಮಿಕರನ್ನು ಕರೆ ತರುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಯಿತು. ಕಾರ್ಖಾನೆಯಲ್ಲಿ ಬಳಕೆ ಆಗದ ವಸ್ತು ವಿಲೇವಾರಿಗಳ ಬಗ್ಗೆಯೂ ಮಾತುಕತೆ ನಡೆಯಿತು.</p>.<p>ಸಭೆಯಲ್ಲಿ ರೈತ ನಾಯಕಿ ಸುನಂದಾ ಜಯರಾಂ, ಇಂಡುವಾಳು ಚಂದ್ರಶೇಖರ್, ಕೆ.ಬೋರಯ್ಯ, ಕನ್ನಡ ಸೇನೆ ಮುಖಂಡ ಮಂಜುನಾಥ್. ಎಂ.ಬಿ. ನಾಗಣ್ಣಗೌಡ, ಒಪ್ಪಿಗೆದಾರರ ಸಂಘದ ಕೃಷ್ಣ, ಡಿಎಸ್ಎಸ್ ಎಂ.ವಿ. ಕೃಷ್ಣ, ಶಿವಳ್ಳಿ ಚಂದ್ರಶೇಖರ್, ರೈತ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-40-901130624</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>