<p><strong>ಮಂಡ್ಯ:</strong> ‘ರಾಜ ಮಹಾರಾಜರ ಕಾಲದಲ್ಲಿ ಸಂಗೀತ, ನೃತ್ಯ ಮತ್ತು ಕಲೆಗಳಿಗೆ ಅದ್ಭುತವಾದ ಪ್ರೋತ್ಸಾಹ ದೊರೆಯುತ್ತಿತ್ತು. ಮೈಸೂರು ಅರಸರು ಕೇವಲ ಆಡಳಿತಗಾರರಾಗಿರದೆ, ಕಲೆಗಳ ಪೋಷಕರೂ ಆಗಿದ್ದರು’ ಎಂದು ಮೈಸೂರು ಅರಮನೆ ಪೊಲೀಸ್ ಬ್ಯಾಂಡ್ ನಿವೃತ್ತ ವಾದ್ಯಗಾರ ವಿನ್ಸೆಂಟ್ ಅಭಿಪ್ರಾಯ ಪಟ್ಟರು.</p>.<p>ನಗರದ ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಕಚೇರಿಯಲ್ಲಿ ಗುರುವಾರ ನಡೆದ ಪ್ರತಿಭಾಂಜಲಿ- 25ನೇ ವರ್ಷದ ಸಂಭ್ರಮಾಚರಣೆ ಸಂಚಿಕೆ-4 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಜಯಚಾಮರಾಜ ಒಡೆಯರ್ ಅವರು ವಿದೇಶಗಳಿಂದ ಸಂಗೀತಗಾರರನ್ನು ಆಹ್ವಾನಿಸಿ ಸಂಗೀತ ಪರಂಪರೆಗೆ ನಾಂದಿ ಹಾಡಿದ್ದರು ಎಂದು ತಿಳಿಸಿದರು.</p>.<p>ದೇವರ ಸೃಷ್ಟಿಯಲ್ಲಿ ಸಂಗೀತವೂ ಒಂದು. ಕಲ್ಲು ಹೃದಯವನ್ನೂ ಕರಗಿಸುವ ಶಕ್ತಿ ಸಂಗೀತಕ್ಕಿದೆ. ಸಂಗೀತವು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶಿಸ್ತು, ಏಕಾಗ್ರತೆ, ತಾಳ್ಮೆ ಎಲ್ಲವನ್ನೂ ಕಲಿಸುತ್ತದೆ. ವಿಶೇಷ ಗೌರವವೂ ಸಿಗುತ್ತದೆ. ಹಾಡುಗಾರಿಕೆ ಮತ್ತು ವಾದ್ಯ ನುಡಿಸುವಿಕೆಯತ್ತ ಯುವಜನರು ಆಸಕ್ತಿ ತೋರಬೇಕು ಎಂದು ಸಲಹೆ ನೀಡಿದರು.</p>.<p>ಪತ್ರಕರ್ತ ನವೀನ್ ಚಿಕ್ಕಮಂಡ್ಯ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಡೇವಿಡ್ ಪ್ರತಿಭಾಂಜಲಿ, ಗಾಯಕರಾದ ಶಂಕರ್ ರಾಚಪ್ಪ, ಹಂಸಾ, ವಂದನಾ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-40-1000545154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ರಾಜ ಮಹಾರಾಜರ ಕಾಲದಲ್ಲಿ ಸಂಗೀತ, ನೃತ್ಯ ಮತ್ತು ಕಲೆಗಳಿಗೆ ಅದ್ಭುತವಾದ ಪ್ರೋತ್ಸಾಹ ದೊರೆಯುತ್ತಿತ್ತು. ಮೈಸೂರು ಅರಸರು ಕೇವಲ ಆಡಳಿತಗಾರರಾಗಿರದೆ, ಕಲೆಗಳ ಪೋಷಕರೂ ಆಗಿದ್ದರು’ ಎಂದು ಮೈಸೂರು ಅರಮನೆ ಪೊಲೀಸ್ ಬ್ಯಾಂಡ್ ನಿವೃತ್ತ ವಾದ್ಯಗಾರ ವಿನ್ಸೆಂಟ್ ಅಭಿಪ್ರಾಯ ಪಟ್ಟರು.</p>.<p>ನಗರದ ಪ್ರತಿಭಾಂಜಲಿ ಸುಗಮ ಸಂಗೀತ ಅಕಾಡೆಮಿ ಕಚೇರಿಯಲ್ಲಿ ಗುರುವಾರ ನಡೆದ ಪ್ರತಿಭಾಂಜಲಿ- 25ನೇ ವರ್ಷದ ಸಂಭ್ರಮಾಚರಣೆ ಸಂಚಿಕೆ-4 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಜಯಚಾಮರಾಜ ಒಡೆಯರ್ ಅವರು ವಿದೇಶಗಳಿಂದ ಸಂಗೀತಗಾರರನ್ನು ಆಹ್ವಾನಿಸಿ ಸಂಗೀತ ಪರಂಪರೆಗೆ ನಾಂದಿ ಹಾಡಿದ್ದರು ಎಂದು ತಿಳಿಸಿದರು.</p>.<p>ದೇವರ ಸೃಷ್ಟಿಯಲ್ಲಿ ಸಂಗೀತವೂ ಒಂದು. ಕಲ್ಲು ಹೃದಯವನ್ನೂ ಕರಗಿಸುವ ಶಕ್ತಿ ಸಂಗೀತಕ್ಕಿದೆ. ಸಂಗೀತವು ವಿದ್ಯಾರ್ಥಿಗಳಿಗೆ ಜೀವನದಲ್ಲಿ ಶಿಸ್ತು, ಏಕಾಗ್ರತೆ, ತಾಳ್ಮೆ ಎಲ್ಲವನ್ನೂ ಕಲಿಸುತ್ತದೆ. ವಿಶೇಷ ಗೌರವವೂ ಸಿಗುತ್ತದೆ. ಹಾಡುಗಾರಿಕೆ ಮತ್ತು ವಾದ್ಯ ನುಡಿಸುವಿಕೆಯತ್ತ ಯುವಜನರು ಆಸಕ್ತಿ ತೋರಬೇಕು ಎಂದು ಸಲಹೆ ನೀಡಿದರು.</p>.<p>ಪತ್ರಕರ್ತ ನವೀನ್ ಚಿಕ್ಕಮಂಡ್ಯ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಡೇವಿಡ್ ಪ್ರತಿಭಾಂಜಲಿ, ಗಾಯಕರಾದ ಶಂಕರ್ ರಾಚಪ್ಪ, ಹಂಸಾ, ವಂದನಾ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260509-40-1000545154</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>