<p><strong>ಮಂಡ್ಯ</strong>: ತಾಲ್ಲೂಕಿನ ಪಣಕನಹಳ್ಳಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ಕಾರು ಪಲ್ಟಿಯಾಗಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ತಾಲ್ಲೂಕಿನ ಕಚ್ಚೀಗೆರೆ ಗ್ರಾಮದ ನಿವಾಸಿ ಕಿರಣ್ (35) ಅವರ ಪುತ್ರ ಕಿಶೋರ್ (13) ಮೃತರು. ಪುತ್ರಿ ಕೀರ್ತನಾ(10) ಅವರು ಗಾಯಗೊಂಡಿದ್ದು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಕಾರಿನಲ್ಲಿ ಪಾಂಡವಪುರಕ್ಕೆ ತೆರಳಿದ್ದ ಮೂವರು, ಕಚ್ಚೀಗೆರೆ ಗ್ರಾಮಕ್ಕೆ ವಾಪಾಸ್ ಹೋಗುವ ವೇಳೆ ಈ ಘಟನೆ ಸಂಭವಿಸಿದೆ.</p><p>ಪಣಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮೈಸೂರು ಮಾರ್ಗದ ರಸ್ತೆಯಲ್ಲಿ ಮಗುಚಿ ಬಿದ್ದಿದೆ.</p><p>ಜಿಲ್ಲಾಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಶವಗಳನ್ನು ನೀಡಲಾಗಿದೆ. </p><p>ಪಿಎಸ್ಐ ಸುನಿಲ್ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ತಾಲ್ಲೂಕಿನ ಪಣಕನಹಳ್ಳಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಶುಕ್ರವಾರ ಕಾರು ಪಲ್ಟಿಯಾಗಿ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ತಾಲ್ಲೂಕಿನ ಕಚ್ಚೀಗೆರೆ ಗ್ರಾಮದ ನಿವಾಸಿ ಕಿರಣ್ (35) ಅವರ ಪುತ್ರ ಕಿಶೋರ್ (13) ಮೃತರು. ಪುತ್ರಿ ಕೀರ್ತನಾ(10) ಅವರು ಗಾಯಗೊಂಡಿದ್ದು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p><p>ಕಾರಿನಲ್ಲಿ ಪಾಂಡವಪುರಕ್ಕೆ ತೆರಳಿದ್ದ ಮೂವರು, ಕಚ್ಚೀಗೆರೆ ಗ್ರಾಮಕ್ಕೆ ವಾಪಾಸ್ ಹೋಗುವ ವೇಳೆ ಈ ಘಟನೆ ಸಂಭವಿಸಿದೆ.</p><p>ಪಣಕನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮೈಸೂರು ಮಾರ್ಗದ ರಸ್ತೆಯಲ್ಲಿ ಮಗುಚಿ ಬಿದ್ದಿದೆ.</p><p>ಜಿಲ್ಲಾಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಶವಗಳನ್ನು ನೀಡಲಾಗಿದೆ. </p><p>ಪಿಎಸ್ಐ ಸುನಿಲ್ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಮಂಡ್ಯ ಸೆಂಟ್ರಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>