<p><strong>ಮಂಡ್ಯ:</strong> ‘ಮಳೆ, ಬಿಸಿಲು, ಚಳಿ ಮತ್ತು ಅವರ ಮಾನಸಿಕ, ದೈಹಿಕ ಆರೋಗ್ಯವನ್ನು ಲೆಕ್ಕಿಸದೆ ಸಮಾಜದ ರಕ್ಷಣೆಗಾಗಿ ದುಡಿಯುವ ಪೊಲೀಸರು ಸಮಾಜದ ನಿಜವಾದ ರಕ್ಷಕರು’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ -2025 ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಬಹಳ ದೊಡ್ಡದು. ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಎಲ್ಲ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಿಲ್ಲೆಯ ಶಾಂತಿ, ಸುವ್ಯವಸ್ಥೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ದೇಶದ ಗಡಿಯಲ್ಲಿ ಸೈನಿಕರು ದೇಶವನ್ನು ರಕ್ಷಿಸಿದರೆ, ದೇಶದ ಒಳಗೆ ಸಮಾಜವನ್ನು ಮತ್ತು ಜನರನ್ನು ಪೊಲೀಸ್ ಅಧಿಕಾರಿಗಳು ರಕ್ಷಿಸುತ್ತಿದ್ದಾರೆ. ಆದ್ದರಿಂದ ಗಡಿಯಲ್ಲಿ ದೇಶವನ್ನು ರಕ್ಷಿಸಲು ಯೋಧರು ಎಷ್ಟು ಮುಖ್ಯವೋ ದೇಶದ ಒಳಗೆ ಸಮಾಜವನ್ನು ರಕ್ಷಿಸಲು ಪೊಲೀಸ್ ಅಧಿಕಾರಿಗಳು ಅಷ್ಟೇ ಮುಖ್ಯವಾಗಿತ್ತಾರೆ ಎಂದು ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಮಾತನಾಡಿ, ‘ನಿಸ್ವಾರ್ಥ ಸೇವೆಗೆ ಮತ್ತು ಶಿಸ್ತಿಗೆ ಮತ್ತೊಂದು ಹೆಸರು ಪೊಲೀಸ್ ಇಲಾಖೆ. ಯಾವುದೇ ಸಮಯ, ಸಂದರ್ಭದಲ್ಲಿ ಸಮಾಜದ ರಕ್ಷಣೆಗಾಗಿ ಮತ್ತು ಜನರ ಸೇವೆಗಾಗಿ ದುಡಿಯುವವರು ಪೊಲೀಸ್ ಸಿಬ್ಬಂದಿ ಎಂದರೆ ತಪ್ಪಾಗುವುದಿಲ್ಲ’ ಎಂದರು.</p>.<p>ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ತಂತ್ರಜ್ಞಾನ ಬಳಕೆಯಿಂದ ಅಪರಾಧ ಪತ್ತೆ ಹಚ್ಚುವಲ್ಲಿ ಮತ್ತು ಅಪರಾಧ ತಡೆಯುವಲ್ಲಿ ಅದ್ವಿತೀಯ ಸಾಧನೆ ಮಾಡಿದೆ. ಮಂಡ್ಯ ಜಿಲ್ಲೆ ಪೊಲೀಸ್ ಇಲಾಖೆಯು ಬಹಳ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಾ ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಶ್ರಮಿಸುತ್ತಿದ್ದಾರೆ ಎಂದರು.</p>.<p>ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ ಮತ್ತು ತಿಮ್ಮಯ್ಯ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಮಳೆ, ಬಿಸಿಲು, ಚಳಿ ಮತ್ತು ಅವರ ಮಾನಸಿಕ, ದೈಹಿಕ ಆರೋಗ್ಯವನ್ನು ಲೆಕ್ಕಿಸದೆ ಸಮಾಜದ ರಕ್ಷಣೆಗಾಗಿ ದುಡಿಯುವ ಪೊಲೀಸರು ಸಮಾಜದ ನಿಜವಾದ ರಕ್ಷಕರು’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.</p>.<p>ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟ -2025 ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.</p>.<p>‘ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಬಹಳ ದೊಡ್ಡದು. ವಿಶೇಷವಾಗಿ ಮಂಡ್ಯ ಜಿಲ್ಲೆಯಲ್ಲಿ ಎಲ್ಲ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಿಲ್ಲೆಯ ಶಾಂತಿ, ಸುವ್ಯವಸ್ಥೆಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ’ ಎಂದು ಶ್ಲಾಘಿಸಿದರು.</p>.<p>ದೇಶದ ಗಡಿಯಲ್ಲಿ ಸೈನಿಕರು ದೇಶವನ್ನು ರಕ್ಷಿಸಿದರೆ, ದೇಶದ ಒಳಗೆ ಸಮಾಜವನ್ನು ಮತ್ತು ಜನರನ್ನು ಪೊಲೀಸ್ ಅಧಿಕಾರಿಗಳು ರಕ್ಷಿಸುತ್ತಿದ್ದಾರೆ. ಆದ್ದರಿಂದ ಗಡಿಯಲ್ಲಿ ದೇಶವನ್ನು ರಕ್ಷಿಸಲು ಯೋಧರು ಎಷ್ಟು ಮುಖ್ಯವೋ ದೇಶದ ಒಳಗೆ ಸಮಾಜವನ್ನು ರಕ್ಷಿಸಲು ಪೊಲೀಸ್ ಅಧಿಕಾರಿಗಳು ಅಷ್ಟೇ ಮುಖ್ಯವಾಗಿತ್ತಾರೆ ಎಂದು ಅಭಿಪ್ರಾಯಪಟ್ಟರು.</p>.<p>ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ ಮಾತನಾಡಿ, ‘ನಿಸ್ವಾರ್ಥ ಸೇವೆಗೆ ಮತ್ತು ಶಿಸ್ತಿಗೆ ಮತ್ತೊಂದು ಹೆಸರು ಪೊಲೀಸ್ ಇಲಾಖೆ. ಯಾವುದೇ ಸಮಯ, ಸಂದರ್ಭದಲ್ಲಿ ಸಮಾಜದ ರಕ್ಷಣೆಗಾಗಿ ಮತ್ತು ಜನರ ಸೇವೆಗಾಗಿ ದುಡಿಯುವವರು ಪೊಲೀಸ್ ಸಿಬ್ಬಂದಿ ಎಂದರೆ ತಪ್ಪಾಗುವುದಿಲ್ಲ’ ಎಂದರು.</p>.<p>ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ತಂತ್ರಜ್ಞಾನ ಬಳಕೆಯಿಂದ ಅಪರಾಧ ಪತ್ತೆ ಹಚ್ಚುವಲ್ಲಿ ಮತ್ತು ಅಪರಾಧ ತಡೆಯುವಲ್ಲಿ ಅದ್ವಿತೀಯ ಸಾಧನೆ ಮಾಡಿದೆ. ಮಂಡ್ಯ ಜಿಲ್ಲೆ ಪೊಲೀಸ್ ಇಲಾಖೆಯು ಬಹಳ ಅಚ್ಚುಕಟ್ಟಾಗಿ ಕೆಲಸ ನಿರ್ವಹಿಸುತ್ತಾ ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ಶ್ರಮಿಸುತ್ತಿದ್ದಾರೆ ಎಂದರು.</p>.<p>ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗಂಗಾಧರಸ್ವಾಮಿ ಮತ್ತು ತಿಮ್ಮಯ್ಯ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>