ಮಂಡ್ಯ: ‘ನಾಗಮಂಗಲ ತಾಲ್ಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಹಾಗೂ ಕಲ್ಲು ಗಣಿ ಗುತ್ತಿಗೆಯಲ್ಲಿ ಆಗಿರುವ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿ ಮೇ 31ರಂದು ನಾಗಮಂಗಲದಿಂದ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಲಾಗುವುದು’ ಎಂದು ಅಖಿಲ ಕರ್ನಾಟಕ ಭೋವಿ ಯುವ ವೇದಿಕೆಯ ಮುಖಂಡ ಗೋವಿಂದರಾಜು ತಿಳಿಸಿದರು.