<p><strong>ಮಂಡ್ಯ</strong>: ‘ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ದಾಸ್ತಾನು ಇಡಲು ಕ್ರಮವಹಿಸುವಂತೆ ಹಾಗೂ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಣೆಗೆ ಅಗತ್ಯ ಕ್ರವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ 2026-27ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಸರಬರಾಜು ಮತ್ತು ವಿತರಣೆ ಕುರಿತು ಸಭೆ ನಡೆಸಿ ಮಾತನಾಡಿದರು.</p>.<p>ಮುಂಗಾರು ಬಿತ್ತನೆಗೆ ರೈತರು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಬೇಕು. ಕಳಪೆ ಬೀಜ ಮತ್ತು ಗೊಬ್ಬರ ಮಾರಾಟವಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ರಸಗೊಬ್ಬರ ಮಳಿಗೆಗಳಲ್ಲಿ ರಸಗೊಬ್ಬರಗಳ ದಾಸ್ತಾನು ಹಾಗೂ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸುವುದು, ಜಿಲ್ಲೆಯ ಎಲ್ಲ ರಸಗೊಬ್ಬರ ಪರಿವೀಕ್ಷಕರು, ಕಡ್ಡಾಯವಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ರಸಗೊಬ್ಬರ ಮಳಿಗೆಗಳಿಗೆ ಭೇಟಿ ನೀಡಿ ರಸಗೊಬ್ಬರ ದಾಸ್ತಾನು ಪರಿಶೀಲಿಸಬೇಕು ಹಾಗೂ ಅಭಾವ ಸೃಷ್ಟಿಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.</p>.<p>ರಸಗೊಬ್ಬರ ಪರ್ಯಾಯವಾಗಿ ಹಸಿರೆಲೆ ಗೊಬ್ಬರ ಉಪಯೋಗಿಸುವಂತೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಬೇಕು.</p>.<p>ಬೆಳೆ ವಿಮೆ ಮಾಡಿಸಿ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅರ್ಹ ಹಾಗೂ ಆಸಕ್ತ ರೈತರು ನಿಗದಿತ ಅವಧಿಯೊಳಗೆ ಬೆಳೆ ವಿಮೆ ಮಾಡಿಸಲು ಅಗತ್ಯ ಪ್ರಚಾರ ಕೖಗೊಂಡು ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಜಂಟಿ ಕೃಷಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಶಿವಲಿಂಗಯ್ಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು, ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆದಾರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-40-246858169</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಮುಂಗಾರು ಹಂಗಾಮು ಪ್ರಾರಂಭವಾಗಿದ್ದು, ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ದಾಸ್ತಾನು ಇಡಲು ಕ್ರಮವಹಿಸುವಂತೆ ಹಾಗೂ ಗುಣಮಟ್ಟದ ಬಿತ್ತನೆ ಬೀಜಗಳನ್ನು ವಿತರಣೆಗೆ ಅಗತ್ಯ ಕ್ರವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ತಿಳಿಸಿದರು.</p>.<p>ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲೆಯ 2026-27ರ ಮುಂಗಾರು ಹಂಗಾಮಿನ ರಸಗೊಬ್ಬರಗಳ ಸಮರ್ಪಕ ಸರಬರಾಜು ಮತ್ತು ವಿತರಣೆ ಕುರಿತು ಸಭೆ ನಡೆಸಿ ಮಾತನಾಡಿದರು.</p>.<p>ಮುಂಗಾರು ಬಿತ್ತನೆಗೆ ರೈತರು ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ಬಿತ್ತನೆ ಬೀಜದ ಗುಣಮಟ್ಟ ಖಾತ್ರಿ ಪಡಿಸಿಕೊಂಡು ರೈತರಿಗೆ ವಿತರಿಸಬೇಕು. ಕಳಪೆ ಬೀಜ ಮತ್ತು ಗೊಬ್ಬರ ಮಾರಾಟವಾಗದಂತೆ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>ರಸಗೊಬ್ಬರ ಮಳಿಗೆಗಳಲ್ಲಿ ರಸಗೊಬ್ಬರಗಳ ದಾಸ್ತಾನು ಹಾಗೂ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರದರ್ಶಿಸುವುದು, ಜಿಲ್ಲೆಯ ಎಲ್ಲ ರಸಗೊಬ್ಬರ ಪರಿವೀಕ್ಷಕರು, ಕಡ್ಡಾಯವಾಗಿ ತಮ್ಮ ವ್ಯಾಪ್ತಿಯಲ್ಲಿ ಬರುವ ರಸಗೊಬ್ಬರ ಮಳಿಗೆಗಳಿಗೆ ಭೇಟಿ ನೀಡಿ ರಸಗೊಬ್ಬರ ದಾಸ್ತಾನು ಪರಿಶೀಲಿಸಬೇಕು ಹಾಗೂ ಅಭಾವ ಸೃಷ್ಟಿಯಾಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.</p>.<p>ರಸಗೊಬ್ಬರ ಪರ್ಯಾಯವಾಗಿ ಹಸಿರೆಲೆ ಗೊಬ್ಬರ ಉಪಯೋಗಿಸುವಂತೆ ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಅವರು ತಿಳಿಸಬೇಕು.</p>.<p>ಬೆಳೆ ವಿಮೆ ಮಾಡಿಸಿ: ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅರ್ಹ ಹಾಗೂ ಆಸಕ್ತ ರೈತರು ನಿಗದಿತ ಅವಧಿಯೊಳಗೆ ಬೆಳೆ ವಿಮೆ ಮಾಡಿಸಲು ಅಗತ್ಯ ಪ್ರಚಾರ ಕೖಗೊಂಡು ರೈತರಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p>ಜಂಟಿ ಕೃಷಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ರೂಪಶ್ರೀ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ.ಶಿವಲಿಂಗಯ್ಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು, ರಸಗೊಬ್ಬರ, ಬಿತ್ತನೆ ಬೀಜ ಪೂರೈಕೆದಾರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-40-246858169</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>