<p><strong>ಮದ್ದೂರು:</strong> ರಾಗಿ ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗದಂತಾಗಿದೆ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ರೈತರು ಕೃಷಿ ಇಲಾಖೆ ಅಧಿಕಾರಿಗಳನ್ನು ಆಗ್ರಹಿಸಿದರು.</p>.<p>ನಗರದಲ್ಲಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ರೈತರೊಂದಿಗೆ ಸಭೆಯಲ್ಲಿ ಕೃಷಿ ಅಧಿಕಾರಿಗೆ ಕ್ರಮ ಕೈಗೊಳ್ಳಲು ಆಗ್ರಹಿಸಿದರು.</p>.<p>ನಗರದ ರಾಗಿ ಖರೀದಿ ಕೇಂದ್ರಕ್ಕೆ ತುಮಕೂರು, ಕುಣಿಗಲ್ ಸೇರಿ ಬೇರೆ ಕಡೆಗಳಿಂದ ಲೋಡ್ಗಟ್ಟಲೆ ರಾಗಿ ಬರುತ್ತಿದೆ. ದಲ್ಲಾಳಿಗಳು ನೋಂದಣಿ ಮಾಡಿಸಿ ರೈತರಿಂದ ಕಡಿಮೆ ಬೆಲೆಗೆ ಖರೀದಿಸಿ ಖರೀದಿ ಕೇಂದ್ರಕ್ಕೆ ಸಾಗಿಸುತ್ತಿದ್ದಾರೆ. ಇಂತಹ ಅಕ್ರಮ ತಡೆಗಟ್ಟಬೇಕೆಂದು ಸಭೆಯಲ್ಲಿದ್ದ ರೈತ ಮುಖಂಡರು ಆಗ್ರಹಿಸಿದರು.</p>.<p>ಸರ್ಕಾರಿ ಕಚೇರಿಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲು ಕೆಲವು ಅಧಿಕಾರಿಗಳು ಅನಗತ್ಯವಾಗಿ ವಿಳಂಬ ಮಾಡುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಮೇಲಧಿಕಾರಿಗಳು ಗಮನ ಹರಿಸಿ, ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಸಾರ್ವಜನಿಕ ಕೆಲಸಗಳು ಸುಗಮವಾಗಿ ನಡೆಯುವಂತೆ ಮಾಡಬೇಕು. ಇಲಾಖೆಗಳಲ್ಲಿ ಸಿಗುವ ಸವಲತ್ತುಗಳು ಮತ್ತು ಮಾಹಿತಿಗಳನ್ನು ನಿಗದಿತ ಸಮಯಕ್ಕೆ ರೈತರಿಗೆ ತಲುಪುವಂತೆ ಮಾಡಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಿದರು.</p>.<p>ಕೃಷಿ ಇಲಾಖೆಯಿಂದ ಚಂಬೆ ಬೀಜವನ್ನು ರೈತರಿಗೆ ವಿತರಿಸುತ್ತಿಲ್ಲ. ಇತ್ತ ರಸಗೊಬ್ಬರ ಕೊರತೆಯೂ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತ ಮುಖಂಡ ವಿನೋದ್ ಮಾತನಾಡಿ, ನಗರದ ವ್ಯಾಪ್ತಿಯಲ್ಲಿರುವ ರೇಷ್ಮೆ ಮತ್ತು ತೋಟಗಾರಿಕೆ ಜಾಗಗಳನ್ನು ಅಭಿವೃದ್ಧಿಯ ನೆಪವೊಡ್ಡಿ ಬೇರೆ ಇಲಾಖೆಗಳಿಗೆ ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದರು.</p>.<p>ರೈತರ ತರಬೇತಿ ಮತ್ತು ಮಾಹಿತಿ ಕೇಂದ್ರಗಳ ಇಲಾಖೆಯ ವಶದಲ್ಲಿರುವ ರೇಷ್ಮೆ ಮತ್ತು ತೋಟಗಾರಿಕೆ ಜಾಗಗಳನ್ನು ನ್ಯಾಯಾಲಯದ ಸಂಕೀರ್ಣ, ರೈಲು ನಿಲ್ದಾಣ, ನಗರಸಭೆ, ಟ್ರಾಮಾ ಕೇರ್ ಸೆಂಟರ್ ಕಟ್ಟಡಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಆದರೆ, ಈ ಕಟ್ಟಡಗಳನ್ನು ಬೇರೆ ಸ್ಥಳಗಳಲ್ಲಿ ನಿರ್ಮಾಣ ಮಾಡಲಿ, ರೈತರ ಇಲಾಖಾ ಜಾಗಗಳನ್ನು ಬೇರೆ ಇಲಾಖೆಗಳಿಗೆ ಯಾವುದೇ ಕಾರಣಕ್ಕೂ ನೀಡಬಾರದು ಎಂದು ಅಧಿಕಾರಿಗಳಿಗೆ ಆಗ್ರಹಿಸಿದರು.</p>.<p>ತಾಲ್ಲೂಕಿನ ಆತಗೂರು ಮರು ಸರ್ವೇ ಕಾರ್ಯ ವಿಳಂಬವಾಗಿರುವುದರಿಂದ ಸಮಸ್ಯೆ ತಲೆದೋರಿದೆ. ಯಾವ ಅಧಿಕಾರಿಗಳು ಸಹ ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾಗುತ್ತಿಲ್ಲ ಎಂದು ರೈತ ಮುಖಂಡ ಉಮೇಶ್ ಬೇಸರ ವ್ಯಕ್ತಪಡಿಸಿದರು.</p>.<p>ಅಷ್ಟೇ ಅಲ್ಲದೇ ತಾಲ್ಲೂಕಿನ ಕೊನೆ ಭಾಗದ ರೈತರಿಗೆ ನಾಲೆಗಳ ಮೂಲಕ ನೀರು ಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಇದಕ್ಕೆ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಆತಗೂರು ಹೋಬಳಿಯ ಮರು ಸರ್ವೇ ಸಮಸ್ಯೆ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿ ಸರ್ಕಾರದ ಗಮನಕ್ಕೆ ತಂದಿದ್ದಾರೆ ಎಂದರು.</p>.<p>ತಾ.ಪಂ ಇಒ ರಾಮಲಿಂಗಯ್ಯ, ಗ್ರೇಡ್ 2 ತಹಶೀಲ್ದಾರ್ ಸೋಮಶೇಖರ್, ವಲಯ ಅರಣ್ಯಾಧಿಕಾರಿ ಗವಿಯಪ್ಪ, ಟಿಎಚ್ಒ ಡಾ.ರವಿಶಂಕರ್, ಸಿಡಿಪಿಒ ಅರುಣ್ ಕುಮಾರ್ ಸೇರಿ ತಾಲ್ಲೂಕು ಮಟ್ಟದ ಹಲವು ಅಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-40-784310211</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ರಾಗಿ ಖರೀದಿ ಕೇಂದ್ರದಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ರೈತರ ಬೆಳೆಗಳಿಗೆ ಸರಿಯಾದ ಬೆಲೆ ಸಿಗದಂತಾಗಿದೆ. ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ರೈತರು ಕೃಷಿ ಇಲಾಖೆ ಅಧಿಕಾರಿಗಳನ್ನು ಆಗ್ರಹಿಸಿದರು.</p>.<p>ನಗರದಲ್ಲಿ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ರೈತರೊಂದಿಗೆ ಸಭೆಯಲ್ಲಿ ಕೃಷಿ ಅಧಿಕಾರಿಗೆ ಕ್ರಮ ಕೈಗೊಳ್ಳಲು ಆಗ್ರಹಿಸಿದರು.</p>.<p>ನಗರದ ರಾಗಿ ಖರೀದಿ ಕೇಂದ್ರಕ್ಕೆ ತುಮಕೂರು, ಕುಣಿಗಲ್ ಸೇರಿ ಬೇರೆ ಕಡೆಗಳಿಂದ ಲೋಡ್ಗಟ್ಟಲೆ ರಾಗಿ ಬರುತ್ತಿದೆ. ದಲ್ಲಾಳಿಗಳು ನೋಂದಣಿ ಮಾಡಿಸಿ ರೈತರಿಂದ ಕಡಿಮೆ ಬೆಲೆಗೆ ಖರೀದಿಸಿ ಖರೀದಿ ಕೇಂದ್ರಕ್ಕೆ ಸಾಗಿಸುತ್ತಿದ್ದಾರೆ. ಇಂತಹ ಅಕ್ರಮ ತಡೆಗಟ್ಟಬೇಕೆಂದು ಸಭೆಯಲ್ಲಿದ್ದ ರೈತ ಮುಖಂಡರು ಆಗ್ರಹಿಸಿದರು.</p>.<p>ಸರ್ಕಾರಿ ಕಚೇರಿಗಳಲ್ಲಿ ರೈತರ ಹಾಗೂ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲು ಕೆಲವು ಅಧಿಕಾರಿಗಳು ಅನಗತ್ಯವಾಗಿ ವಿಳಂಬ ಮಾಡುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಮೇಲಧಿಕಾರಿಗಳು ಗಮನ ಹರಿಸಿ, ಇಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಸಾರ್ವಜನಿಕ ಕೆಲಸಗಳು ಸುಗಮವಾಗಿ ನಡೆಯುವಂತೆ ಮಾಡಬೇಕು. ಇಲಾಖೆಗಳಲ್ಲಿ ಸಿಗುವ ಸವಲತ್ತುಗಳು ಮತ್ತು ಮಾಹಿತಿಗಳನ್ನು ನಿಗದಿತ ಸಮಯಕ್ಕೆ ರೈತರಿಗೆ ತಲುಪುವಂತೆ ಮಾಡಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಿದರು.</p>.<p>ಕೃಷಿ ಇಲಾಖೆಯಿಂದ ಚಂಬೆ ಬೀಜವನ್ನು ರೈತರಿಗೆ ವಿತರಿಸುತ್ತಿಲ್ಲ. ಇತ್ತ ರಸಗೊಬ್ಬರ ಕೊರತೆಯೂ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರೈತ ಮುಖಂಡ ವಿನೋದ್ ಮಾತನಾಡಿ, ನಗರದ ವ್ಯಾಪ್ತಿಯಲ್ಲಿರುವ ರೇಷ್ಮೆ ಮತ್ತು ತೋಟಗಾರಿಕೆ ಜಾಗಗಳನ್ನು ಅಭಿವೃದ್ಧಿಯ ನೆಪವೊಡ್ಡಿ ಬೇರೆ ಇಲಾಖೆಗಳಿಗೆ ಬಳಕೆ ಮಾಡಿಕೊಳ್ಳುವುದು ಸರಿಯಲ್ಲ ಎಂದರು.</p>.<p>ರೈತರ ತರಬೇತಿ ಮತ್ತು ಮಾಹಿತಿ ಕೇಂದ್ರಗಳ ಇಲಾಖೆಯ ವಶದಲ್ಲಿರುವ ರೇಷ್ಮೆ ಮತ್ತು ತೋಟಗಾರಿಕೆ ಜಾಗಗಳನ್ನು ನ್ಯಾಯಾಲಯದ ಸಂಕೀರ್ಣ, ರೈಲು ನಿಲ್ದಾಣ, ನಗರಸಭೆ, ಟ್ರಾಮಾ ಕೇರ್ ಸೆಂಟರ್ ಕಟ್ಟಡಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಆದರೆ, ಈ ಕಟ್ಟಡಗಳನ್ನು ಬೇರೆ ಸ್ಥಳಗಳಲ್ಲಿ ನಿರ್ಮಾಣ ಮಾಡಲಿ, ರೈತರ ಇಲಾಖಾ ಜಾಗಗಳನ್ನು ಬೇರೆ ಇಲಾಖೆಗಳಿಗೆ ಯಾವುದೇ ಕಾರಣಕ್ಕೂ ನೀಡಬಾರದು ಎಂದು ಅಧಿಕಾರಿಗಳಿಗೆ ಆಗ್ರಹಿಸಿದರು.</p>.<p>ತಾಲ್ಲೂಕಿನ ಆತಗೂರು ಮರು ಸರ್ವೇ ಕಾರ್ಯ ವಿಳಂಬವಾಗಿರುವುದರಿಂದ ಸಮಸ್ಯೆ ತಲೆದೋರಿದೆ. ಯಾವ ಅಧಿಕಾರಿಗಳು ಸಹ ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾಗುತ್ತಿಲ್ಲ ಎಂದು ರೈತ ಮುಖಂಡ ಉಮೇಶ್ ಬೇಸರ ವ್ಯಕ್ತಪಡಿಸಿದರು.</p>.<p>ಅಷ್ಟೇ ಅಲ್ಲದೇ ತಾಲ್ಲೂಕಿನ ಕೊನೆ ಭಾಗದ ರೈತರಿಗೆ ನಾಲೆಗಳ ಮೂಲಕ ನೀರು ಹರಿಸಲು ನೀರಾವರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಇದಕ್ಕೆ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಆತಗೂರು ಹೋಬಳಿಯ ಮರು ಸರ್ವೇ ಸಮಸ್ಯೆ ಬಗ್ಗೆ ಸದನದಲ್ಲಿ ಚರ್ಚೆ ನಡೆಸಿ ಸರ್ಕಾರದ ಗಮನಕ್ಕೆ ತಂದಿದ್ದಾರೆ ಎಂದರು.</p>.<p>ತಾ.ಪಂ ಇಒ ರಾಮಲಿಂಗಯ್ಯ, ಗ್ರೇಡ್ 2 ತಹಶೀಲ್ದಾರ್ ಸೋಮಶೇಖರ್, ವಲಯ ಅರಣ್ಯಾಧಿಕಾರಿ ಗವಿಯಪ್ಪ, ಟಿಎಚ್ಒ ಡಾ.ರವಿಶಂಕರ್, ಸಿಡಿಪಿಒ ಅರುಣ್ ಕುಮಾರ್ ಸೇರಿ ತಾಲ್ಲೂಕು ಮಟ್ಟದ ಹಲವು ಅಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-40-784310211</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>