ಕೆ.ಶೆಟ್ಟಿಹಳ್ಳಿ ಬಳಿ ಬೆಂಗಳೂರು–ಮೈಸೂರು ರಾಷ್ಟೀಯ ಹೆದ್ದಾರಿಗೆ ಬೃಹತ್ ಬಾಗೆ ಮರ ಉರುಳಿ ಬಿದ್ದ ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ತಕ್ಷಣ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಮಂಡ್ಯ ತಾಲ್ಲೂಕು ಕಿರಗಂದೂರು ಕೆರೆ ಹಾಗೂ ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಕೆರೆ ಕೋಡಿ ಹರಿದು ಭತ್ತದ ಗದ್ದೆಗೆ ನೀರು ನುಗ್ಗಿದೆ.