<p>ಮಂಡ್ಯ: ಶ್ರೀರಾಮಾನುಜಾಚಾರ್ಯರ 40 ಅಡಿ ಪ್ರತಿಮೆಯನ್ನು ತಾಲ್ಲೂಕಿನ ತೂಬಿನಕೆರೆ ಬಳಿ ನಿರ್ಮಿಸಿ, ಆಕರ್ಷಣೀಯ ಧಾರ್ಮಿಕ ಕೇಂದ್ರ ಸ್ಥಾಪಿಸುವ ಉದ್ದೇಶ ಇಟ್ಟುಕೊಳ್ಳಲಾಗಿದೆ ಎಂದು ಮುಖಂಡ ಬೆಂಗಳೂರು ಉದ್ಯಮಿ ಜನಾರ್ದನ್ ಹೇಳಿದರು.</p>.<p>ಮೇಲುಕೋಟೆಯಲ್ಲಿ ರಾಮಾನುಜಾಚಾರ್ಯರು ಕೆಲವು ವರ್ಷ ವಾಸವಿದ್ದರು, ಆದ ಕಾರಣ ಅಲ್ಲಿಗೆ ಸಹಸ್ರಾರು ಭಕ್ತರು ಭೇಟಿ ನೀಡುತ್ತಾರೆ. ಈ ಸ್ಥಳದ ಸಂಪರ್ಕ ಮಾರ್ಗದಲ್ಲಿ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.</p>.<p>ಆ ಸ್ಥಳದಲ್ಲಿ ವಿಷ್ಣುವಿನ ದೇವಸ್ಥಾನ ನಿರ್ಮಿಸಿ ಆಧ್ಯಾತ್ಮಿಕ ಸ್ಥಳವಾಗಿ ಮಾರ್ಪಾಡು ಮಾಡಲಾಗುವುದು. ಇದಕ್ಕಾಗಿ ವಿಶಾಲವಾದ ಪಾರ್ಕಿಂಗ್, ಎಸಿ ಬಸ್, ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಈಗಾಗಲೇ ಚಟುವಟಿಕೆಗಳ ಕಾರ್ಯಾರಂಭವಾಗಿದೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-40-1560252858</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ಶ್ರೀರಾಮಾನುಜಾಚಾರ್ಯರ 40 ಅಡಿ ಪ್ರತಿಮೆಯನ್ನು ತಾಲ್ಲೂಕಿನ ತೂಬಿನಕೆರೆ ಬಳಿ ನಿರ್ಮಿಸಿ, ಆಕರ್ಷಣೀಯ ಧಾರ್ಮಿಕ ಕೇಂದ್ರ ಸ್ಥಾಪಿಸುವ ಉದ್ದೇಶ ಇಟ್ಟುಕೊಳ್ಳಲಾಗಿದೆ ಎಂದು ಮುಖಂಡ ಬೆಂಗಳೂರು ಉದ್ಯಮಿ ಜನಾರ್ದನ್ ಹೇಳಿದರು.</p>.<p>ಮೇಲುಕೋಟೆಯಲ್ಲಿ ರಾಮಾನುಜಾಚಾರ್ಯರು ಕೆಲವು ವರ್ಷ ವಾಸವಿದ್ದರು, ಆದ ಕಾರಣ ಅಲ್ಲಿಗೆ ಸಹಸ್ರಾರು ಭಕ್ತರು ಭೇಟಿ ನೀಡುತ್ತಾರೆ. ಈ ಸ್ಥಳದ ಸಂಪರ್ಕ ಮಾರ್ಗದಲ್ಲಿ ಪ್ರತಿಮೆ ಸ್ಥಾಪಿಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು.</p>.<p>ಆ ಸ್ಥಳದಲ್ಲಿ ವಿಷ್ಣುವಿನ ದೇವಸ್ಥಾನ ನಿರ್ಮಿಸಿ ಆಧ್ಯಾತ್ಮಿಕ ಸ್ಥಳವಾಗಿ ಮಾರ್ಪಾಡು ಮಾಡಲಾಗುವುದು. ಇದಕ್ಕಾಗಿ ವಿಶಾಲವಾದ ಪಾರ್ಕಿಂಗ್, ಎಸಿ ಬಸ್, ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಈಗಾಗಲೇ ಚಟುವಟಿಕೆಗಳ ಕಾರ್ಯಾರಂಭವಾಗಿದೆ ಎಂದು ಹೇಳಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-40-1560252858</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>