<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ಚಲಿಸುತ್ತಿದ್ದ ಟಿಪ್ಪರ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಅಣ್ಣ– ತಂಗಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿ, ಮೂವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬೇಗಮಂಗಲ ಅಂಚೆಭೂವನಹಳ್ಳಿ ನಡುವಿನ ಚಾಮರಾಜನಗರ– ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.</p>.<p>ಬೆಂಗಳೂರಿನ ಕತ್ತರಗುಪ್ಪೆಯ ನಿವಾಸಿಗಳಾದ ರವೀಂದ್ರರಾಜ್ ಕೃಷ್ಣ ಅವರ ಮಕ್ಕಳಾದ ಮವೀನ (20) ಮತ್ತು ಶ್ಯಾಮ್ (21) ಮೃತಪಟ್ಟವರು. ಕಾರಿನಲ್ಲಿದ್ದ ಹಿತಶ್ರೀ, ಕಲಾಶ್ರೀ ಹಾಗೂ ಕಾರು ಚಾಲಕ ಚೇತನ್ ಗಾಯಗೊಂಡಿದ್ದಾರೆ.</p>.<p>ಬೆಂಗಳೂರಿನಿಂದ ಕಾರಿನಲ್ಲಿ ಒಂದೇ ಕುಟುಂಬದ ಐವರು ತಾಲ್ಲೂಕಿನ ಕೋಟೆಬೆಟ್ಟದಲ್ಲಿ ನಡೆಯುತ್ತಿದ್ದ ಜಾತ್ರಾ ಮಹೋತ್ಸವಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಗಮಂಗಲ ಕಡೆಗೆ ಚಲಿಸುತ್ತಿದ್ದ ಟಿಪ್ಪರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ (ಮಂಡ್ಯ ಜಿಲ್ಲೆ):</strong> ಚಲಿಸುತ್ತಿದ್ದ ಟಿಪ್ಪರ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಅಣ್ಣ– ತಂಗಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿ, ಮೂವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬೇಗಮಂಗಲ ಅಂಚೆಭೂವನಹಳ್ಳಿ ನಡುವಿನ ಚಾಮರಾಜನಗರ– ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.</p>.<p>ಬೆಂಗಳೂರಿನ ಕತ್ತರಗುಪ್ಪೆಯ ನಿವಾಸಿಗಳಾದ ರವೀಂದ್ರರಾಜ್ ಕೃಷ್ಣ ಅವರ ಮಕ್ಕಳಾದ ಮವೀನ (20) ಮತ್ತು ಶ್ಯಾಮ್ (21) ಮೃತಪಟ್ಟವರು. ಕಾರಿನಲ್ಲಿದ್ದ ಹಿತಶ್ರೀ, ಕಲಾಶ್ರೀ ಹಾಗೂ ಕಾರು ಚಾಲಕ ಚೇತನ್ ಗಾಯಗೊಂಡಿದ್ದಾರೆ.</p>.<p>ಬೆಂಗಳೂರಿನಿಂದ ಕಾರಿನಲ್ಲಿ ಒಂದೇ ಕುಟುಂಬದ ಐವರು ತಾಲ್ಲೂಕಿನ ಕೋಟೆಬೆಟ್ಟದಲ್ಲಿ ನಡೆಯುತ್ತಿದ್ದ ಜಾತ್ರಾ ಮಹೋತ್ಸವಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಗಮಂಗಲ ಕಡೆಗೆ ಚಲಿಸುತ್ತಿದ್ದ ಟಿಪ್ಪರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>