ಈ ವಿಚಾರ ನನ್ನ ಗಮನಕ್ಕೆ ಬಂದಿಲ್ಲ, ಸಂಬಂಧಿಸಿದ ದಾಖಲೆಗಳನ್ನು ನೋಡಿ ನ್ಯೂನತೆಗಳಾಗಿದ್ದರೆ ಸರಿಪಡಿಸುವ ಕೆಲಸ ಮಾಡುತ್ತೇವೆ
ರಮೇಶ ಬಂಡಿಸಿದ್ದೇಗೌಡ, ಶ್ರೀರಂಗಪಟ್ಟಣ ಶಾಸಕ
ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಮಟ್ಟದ ಇ–ಸ್ವತ್ತು ಸಮಿತಿಗೆ ಸೂಚಿಸಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮವಹಿಸುವೆ
ಕೆ.ಆರ್.ನಂದಿನಿ, ಸಿಇಒ, ಮಂಡ್ಯ ಜಿಲ್ಲಾ ಪಂಚಾಯಿ
₹2.83 ಕೋಟಿ ದುರುಪಯೋಗ
1994-95ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಸ್ಥಳೀಯ ಲೆಕ್ಕ ಪರಿಶೋಧನಾ ವರದಿಗಳ ಪ್ರಕಾರ ಶ್ರೀರಂಗಪಟ್ಟಣ ತಾಲ್ಲೂಕಿನ 21 ಗ್ರಾಮ ಪಂಚಾಯಿತಿಗಳು ಸಂಗ್ರಹಿಸಿದ ತೆರಿಗೆಯ ಹಣದಲ್ಲಿ ₹2.83 ಕೋಟಿಯನ್ನು ಪಂಚಾಯತಿ ನಿಧಿಗೆ ಜಮಾ ಮಾಡದ ಬಗ್ಗೆ ಆಕ್ಷೇಪಣೆ ಮಾಡಿದ್ದು, ಅದನ್ನು ಅಧಿಕಾರಿಗಳು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.