<p><strong>ಮಂಡ್ಯ:</strong> ಇಲ್ಲಿಯ ನೆಹರು ನಗರ ಬಡಾವಣೆಯ ಮನೆಯೊಂದರಲ್ಲಿ ಬುಧವಾರ ತಾಯಿ–ಮಗಳು ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಮೂಲತಃ ಕಿರುಗಾವಲು ಗ್ರಾಮದವರಾದ ರಶ್ಮಿ (28) ಮತ್ತು ಆಕೆಯ ಮಗಳು ದಿಶಾ (9) ಆತ್ಮಹತ್ಯೆಗೆ ಶರಣಾದವರು. </p><p>ರಶ್ಮಿ ಅವರನ್ನು ಹತ್ತು ವರ್ಷಗಳ ಹಿಂದೆ ಚನ್ನಪಟ್ಟಣ ಮೂಲದ ರಾಜು ಎಂಬುವರ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಐದು ವರ್ಷ ಚೆನ್ನಾಗಿದ್ದ ದಂಪತಿ, ಕೌಟುಂಬಿಕ ಕಲಹದಿಂದ ಕೆಲವು ವರ್ಷಗಳಿಂದ ಪ್ರತ್ಯೇಕವಾಗಿ ವಾಸವಿದ್ದರು. ಇವರ ಪುತ್ರಿ ದಿಶಾ ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದಳು. </p><p>‘ಗಂಡನಿಂದ ದೂರವಿದ್ದ ರಶ್ಮಿ ಮಂಡ್ಯದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಈಕೆ ಒಂಟಿತನದಿಂದ ಜುಗುಪ್ಸೆಗೊಂಡು, ತನ್ನ ಮಗಳೊಂದಿಗೆ ಒಂದೇ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ‘ಡೆತ್ ನೋಟ್’ ಲಭ್ಯವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. </p><p>ನಗರದ ಮಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಸಾಗಿಸಲಾಯಿತು. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಇಲ್ಲಿಯ ನೆಹರು ನಗರ ಬಡಾವಣೆಯ ಮನೆಯೊಂದರಲ್ಲಿ ಬುಧವಾರ ತಾಯಿ–ಮಗಳು ಇಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p><p>ಮೂಲತಃ ಕಿರುಗಾವಲು ಗ್ರಾಮದವರಾದ ರಶ್ಮಿ (28) ಮತ್ತು ಆಕೆಯ ಮಗಳು ದಿಶಾ (9) ಆತ್ಮಹತ್ಯೆಗೆ ಶರಣಾದವರು. </p><p>ರಶ್ಮಿ ಅವರನ್ನು ಹತ್ತು ವರ್ಷಗಳ ಹಿಂದೆ ಚನ್ನಪಟ್ಟಣ ಮೂಲದ ರಾಜು ಎಂಬುವರ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಐದು ವರ್ಷ ಚೆನ್ನಾಗಿದ್ದ ದಂಪತಿ, ಕೌಟುಂಬಿಕ ಕಲಹದಿಂದ ಕೆಲವು ವರ್ಷಗಳಿಂದ ಪ್ರತ್ಯೇಕವಾಗಿ ವಾಸವಿದ್ದರು. ಇವರ ಪುತ್ರಿ ದಿಶಾ ಖಾಸಗಿ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದಳು. </p><p>‘ಗಂಡನಿಂದ ದೂರವಿದ್ದ ರಶ್ಮಿ ಮಂಡ್ಯದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಈಕೆ ಒಂಟಿತನದಿಂದ ಜುಗುಪ್ಸೆಗೊಂಡು, ತನ್ನ ಮಗಳೊಂದಿಗೆ ಒಂದೇ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ‘ಡೆತ್ ನೋಟ್’ ಲಭ್ಯವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. </p><p>ನಗರದ ಮಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಸಾಗಿಸಲಾಯಿತು. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>