ಮೊದಲಿದ್ದ ವಿಶೇಷಾಧಿಕಾರಿ ಡಾ.ಮಹದೇವ ನಾಯಕ್ ಅವರು ಸಿಂಡಿಕೇಟ್, ಶೈಕ್ಷಣಿಕ ಮಂಡಳಿ ರಚನೆ, ರಾಜ್ಯಪಾಲರ ಅನುಮೋದನೆಗೂ ಮೊದಲು ಸಿಬ್ಬಂದಿ ನೇಮಕಾತಿ, ವಿದ್ಯಾರ್ಥಿಗಳ ದಾಖಲಾತಿ ಮಾಡಿಕೊಂಡಿದ್ದಾರೆ. ಮೊದಲ ಸೆಮಿಸ್ಟರ್ ಪರೀಕ್ಷೆಯನ್ನೂ ನಡೆಸಿದ್ದಾರೆ. ದಾಖಲಾಗಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಮಸ್ಯೆ ಬಗೆಹರಿಯುವವರೆಗೂ ಮೊದಲಿನಂತೆಯೇ ಸರ್ಕಾರಿ ಮಹಾವಿದ್ಯಾಲಯದ ಅಡಿಯಲ್ಲೇ ವಿದ್ಯಾರ್ಥಿಗಳ ಪದವಿ ಮುಂದುವರಿಸಲು ಸರ್ಕಾರ ಸೂಚಿಸಿದೆ ಎಂದು ತಿಳಿಸಿದ್ದಾರೆ.