<p>ಮಂಡ್ಯ: ‘ಇಲ್ಲಿನ ಮಂಡ್ಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಶಿವಚಿತ್ತಪ್ಪ ಅವರ ನೇಮಕಾತಿ ಕಾನೂನುಬಾಹಿರವಾಗಿದೆ. ರಾಜಭವನದಲ್ಲಿರುವ ಕೆಲವು ಭ್ರಷ್ಟ ಅಧಿಕಾರಿಗಳಿಂದ ಈ ಕೃತ್ಯ ನಡೆದಿದೆ’ ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಆರೋಪಿಸಿದರು.</p>.<p>‘ವಿವಿ ಜ್ಯೇಷ್ಠತಾ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಪ್ರೊ.ಶಿವಚಿತ್ತಪ್ಪ ಅವರನ್ನು ಪ್ರಭಾರ ಕುಲಪತಿಯಾಗಿ 2024ರ ನವೆಂಬರ್ 7ರಂದು ನೇಮಿಸಲಾಗಿದೆ. ಕರ್ನಾಟಕ ವಿವಿ ಕಾಯ್ದೆ–2000 ಪ್ರಕಾರ ವಿವಿಯ ಹಿರಿಯ ಡೀನ್ ಅವರನ್ನು ನೇಮಿಸಬೇಕಿತ್ತು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಪಾದಿಸಿದರು.</p>.<p>‘ಅಕ್ರಮ ನೇಮಕದ ಬಗ್ಗೆ ಉನ್ನತ ಶಿಕ್ಷಣ ಸಚಿವರು ಮತ್ತು ಕಾರ್ಯದರ್ಶಿಗೆ 6 ಬಾರಿ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ರಾಜ್ಯಪಾಲರಿಗೂ ಪತ್ರ ಬರೆಯುವೆ. ಲೋಕಾಯುಕ್ತರಿಗೂ ದೂರು ಕೊಡುವೆ. ಸಮಗ್ರ ತನಿಖೆ ನಡೆಸಿ, ಪ್ರೊ.ಶಿವಚಿತ್ತಪ್ಪ ಅವರನ್ನು ಹುದ್ದೆಯಿಂದ ವಜಾ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಟೆಂಡರ್ ಕರೆಯದೆ ಹೊರಗುತ್ತಿಗೆ ಆಧಾರದಲ್ಲಿ ಕಾವಲುಗಾರರು ಮತ್ತು ಇತರೆ ಸಿಬ್ಬಂದಿಯನ್ನು ನೇಮಿಸಲಾಗಿದೆ. 30 ಉದ್ಯೋಗಿಗಳಿದ್ದರೆ, 50 ಮಂದಿ ಹೆಸರಿನಲ್ಲಿ ವೇತನ ನೀಡಲಾಗುತ್ತಿದೆ‘ ಎಂದು ಆರೋಪಿಸಿದರು.</p>.<p>‘ಪಿಎಚ್ಡಿ ಪ್ರವೇಶ ಪರೀಕ್ಷೆ ನಡೆಸಿ ಶೇ 95ರಷ್ಟು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿದ್ದು, ಮಾರ್ಗದರ್ಶಕರ ನೇಮಕದಲ್ಲೂ ನಿಯಮ ಪಾಲಿಸಿಲ್ಲ. ಅನರ್ಹ ಕಾಲೇಜುಗಳಿಗೆ ಸಂಶೋಧನಾ ಕೇಂದ್ರವನ್ನು ನೀಡಲಾಗಿದೆ’ ಎಂದು ದೂರಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-40-1720833299</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ‘ಇಲ್ಲಿನ ಮಂಡ್ಯ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿ ಪ್ರೊ.ಶಿವಚಿತ್ತಪ್ಪ ಅವರ ನೇಮಕಾತಿ ಕಾನೂನುಬಾಹಿರವಾಗಿದೆ. ರಾಜಭವನದಲ್ಲಿರುವ ಕೆಲವು ಭ್ರಷ್ಟ ಅಧಿಕಾರಿಗಳಿಂದ ಈ ಕೃತ್ಯ ನಡೆದಿದೆ’ ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ ಆರೋಪಿಸಿದರು.</p>.<p>‘ವಿವಿ ಜ್ಯೇಷ್ಠತಾ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಪ್ರೊ.ಶಿವಚಿತ್ತಪ್ಪ ಅವರನ್ನು ಪ್ರಭಾರ ಕುಲಪತಿಯಾಗಿ 2024ರ ನವೆಂಬರ್ 7ರಂದು ನೇಮಿಸಲಾಗಿದೆ. ಕರ್ನಾಟಕ ವಿವಿ ಕಾಯ್ದೆ–2000 ಪ್ರಕಾರ ವಿವಿಯ ಹಿರಿಯ ಡೀನ್ ಅವರನ್ನು ನೇಮಿಸಬೇಕಿತ್ತು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಪಾದಿಸಿದರು.</p>.<p>‘ಅಕ್ರಮ ನೇಮಕದ ಬಗ್ಗೆ ಉನ್ನತ ಶಿಕ್ಷಣ ಸಚಿವರು ಮತ್ತು ಕಾರ್ಯದರ್ಶಿಗೆ 6 ಬಾರಿ ಪತ್ರ ಬರೆದರೂ ಪ್ರಯೋಜನವಾಗಿಲ್ಲ. ರಾಜ್ಯಪಾಲರಿಗೂ ಪತ್ರ ಬರೆಯುವೆ. ಲೋಕಾಯುಕ್ತರಿಗೂ ದೂರು ಕೊಡುವೆ. ಸಮಗ್ರ ತನಿಖೆ ನಡೆಸಿ, ಪ್ರೊ.ಶಿವಚಿತ್ತಪ್ಪ ಅವರನ್ನು ಹುದ್ದೆಯಿಂದ ವಜಾ ಮಾಡಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಟೆಂಡರ್ ಕರೆಯದೆ ಹೊರಗುತ್ತಿಗೆ ಆಧಾರದಲ್ಲಿ ಕಾವಲುಗಾರರು ಮತ್ತು ಇತರೆ ಸಿಬ್ಬಂದಿಯನ್ನು ನೇಮಿಸಲಾಗಿದೆ. 30 ಉದ್ಯೋಗಿಗಳಿದ್ದರೆ, 50 ಮಂದಿ ಹೆಸರಿನಲ್ಲಿ ವೇತನ ನೀಡಲಾಗುತ್ತಿದೆ‘ ಎಂದು ಆರೋಪಿಸಿದರು.</p>.<p>‘ಪಿಎಚ್ಡಿ ಪ್ರವೇಶ ಪರೀಕ್ಷೆ ನಡೆಸಿ ಶೇ 95ರಷ್ಟು ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಿದ್ದು, ಮಾರ್ಗದರ್ಶಕರ ನೇಮಕದಲ್ಲೂ ನಿಯಮ ಪಾಲಿಸಿಲ್ಲ. ಅನರ್ಹ ಕಾಲೇಜುಗಳಿಗೆ ಸಂಶೋಧನಾ ಕೇಂದ್ರವನ್ನು ನೀಡಲಾಗಿದೆ’ ಎಂದು ದೂರಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-40-1720833299</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>